Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಯುವಕನ ಸ್ಕೂಟರ್‌ನಲ್ಲಿ ಪಿಸ್ತೂಲ್‌ ಇಟ್ಟು ಬೆದರಿಸಿ ಹಣ ವಸೂಲಿ: ಪೊಲೀಸರ ವಿರುದ್ಧ ಆರೋಪ

ಉತ್ತರಪ್ರದೇಶ: ಮುಸ್ಲಿಂ ಯುವಕನ ಸ್ಕೂಟರ್‌ನಲ್ಲಿ ಪಿಸ್ತೂಲ್‌ ಇಟ್ಟು ಬೆದರಿಸಿ ಹಣ ವಸೂಲಿ: ಪೊಲೀಸರ ವಿರುದ್ಧ ಆರೋಪ

- Advertisement -
- Advertisement -

ಉತ್ತರಪ್ರದೇಶದ ಮೀರತ್‌ನಲ್ಲಿ ಮುಸ್ಲಿಂ ಪ್ಲಂಬರ್ ಒಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ನಲ್ಲಿ ಪೊಲೀಸರು ಕಂಟ್ರಿಮೇಡ್ ಪಿಸ್ತೂಲ್‌ನ್ನು ಹಾಕಿ ಬಳಿಕ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಫಿರೋಜ್‌ ಎಂಬವರು ಈ ಕುರಿತು ಹೇಳಿಕೆಯನ್ನು ನೀಡಿದ್ದು, ಬುಧವಾರ ರಾತ್ರಿ, ಮೂವರು ಪೊಲೀಸರು ಕಾರಿನಲ್ಲಿ ಮನೆಗೆ ಬಂದು ನನ್ನ ಹೆಸರನ್ನು ಕರೆದರು. ಮನೆಯಲ್ಲಿ ನಾನು ಇರದ ಕಾರಣ ತಾಯಿ ಹೊರಗೆ ಬಂದರು. ಪೊಲೀಸರು ನನಗೆ  ವಿಚಾರಿಸಿ ಸ್ಕೂಟರ್‌ನ ಕೀಗಳನ್ನು ಕೇಳಿದ್ದಾರೆ. ಬಳಿಕ ಮೂವರು ಪೊಲೀಸರು ತನ್ನ ಸ್ಕೂಟರ್‌ನ ಸೀಟನ್ನು ಎತ್ತಿ ಒಳಗೆ ಪಿಸ್ತೂಲ್ ಹಾಕಿದ್ದಾರೆ ಎಂದು ಫಿರೋಜ್ ಆರೋಪಿಸಿದ್ದಾರೆ. ಬಳಿಕ ಪೊಲೀಸರು ಸ್ಕೂಟರ್‌ನ ಒಳಗೆ ಪಿಸ್ತೂಲ್ ಇರುವ ವಿಡಿಯೋ ಮಾಡಿ ಸ್ಕೂಟರ್‌ನೊಂದಿಗೆ ತೆರಳಿದ್ದಾರೆ ಎಂದು ಫಿರೋಜ್‌ ಆರೋಪಿಸಿದ್ದಾರೆ.

ಬಳಿಕ ಪೊಲೀಸರು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ಆತ ಹೇಳಿಕೊಂಡಿದ್ದು, ಚರ್ಚೆಯ ಬಳಿಕ 50,00 ಲಂಚ ನೀಡಿ  ತನ್ನ ಸ್ಕೂಟರ್ ವಾಪಸ್ ಪಡೆದಿರುವುದಾಗಿ ಫಿರೋಜ್‌ ಹೇಳಿದ್ದಾರೆ.

ಆದರೆ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪ್ರಕರಣದ ಕುರಿತು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಪ್ಲಂಬರ್ ಆಗಿರುವ ಫಿರೋಜ್ ಮಾಡಿರುವ ಆರೋಪವನ್ನು ನಿರಾಕರಿಸಿದ್ದಾರೆ. ಪ್ರಕರಣದಲ್ಲಿ ಕರ್ತವ್ಯ ಲೋಪಕ್ಕೆ ಸಂಬಂಧಿಸಿ ಹೆಡ್ ಕಾನ್‌ಸ್ಟೆಬಲ್ ಚೌಬೆ ಸಿಂಗ್, ಕಾನ್ಸ್‌ಟೇಬಲ್ ಓಂವೀರ್ ಸಿಂಗ್ ಮತ್ತು ಅನಿಲ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು  ಹೇಳಿದ್ದಾರೆ.

ಅಮಾನತುಗೊಂಡ ಪೊಲೀಸರು ಶಸ್ತ್ರಾಸ್ತ್ರ ರಿಕವರಿ ಬಗ್ಗೆ ತಮ್ಮ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಅವರ ವಿರುದ್ಧ ಆರೋಪಿಸಲಾಗಿದೆ. ಆದರೆ ಅವರು ಫಿಸ್ತೂಲ್ ಇಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಫಿರೋಜ್ ಅವರು ಮಾಡಿದ ಪೊಲೀಸರ ಮೇಲಿನ ಲಂಚದ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್‌ಎಸ್‌ಪಿ ಹೇಳಿದರು.

ಕೆಲವು ದಿನಗಳ ಹಿಂದೆ, ಮೀರತ್‌ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳು ತಮ್ಮ ಮಗನ ಬಳಿ ಬಂದೂಕು ಇಟ್ಟು ಸುಳ್ಳು ಕೇಸ್‌ ಹಾಕಿ ಬಂಧಿಸಿದ್ದಾರೆ ಎಂದು ಕುಟುಂಬವೊಂದು ಆರೋಪಿಸಿತ್ತು. ತಮ್ಮ ಆರೋಪಕ್ಕೆ ಸಾಕ್ಷಿಯಾಗಿ ಕುಟುಂಬ ಸಿಸಿಟಿವಿ ದೃಶ್ಯಗಳನ್ನು ಕೂಡ ಹಂಚಿಕೊಂಡಿತ್ತು.

ಅಶೋಕ್ ತ್ಯಾಗಿ ಎಂಬವರ ಮನೆಯಲ್ಲಿ ಅಕ್ರಮ ಆಯುಧವನ್ನು ಪೊಲೀಸರೇ ತಂದು ಹಾಕಿ ತಮ್ಮ ಮಗ ಅಂಕಿತ್‌ನನ್ನು ಬಂಧಿಸಿದ್ದಾರೆ ಎಂದು ತ್ಯಾಗಿ ಪತ್ನಿ ರಾಖಿ ಆರೋಪಿಸಿದ್ದರು. ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಕರ್ತವ್ಯದಿಂದ ವಜಾಗೊಳಿಸಲಾಗಿತ್ತು.

ಇದನ್ನು ಓದಿ: ‘ಜೈಶ್ರೀರಾಮ್’ ಘೋಷಣೆ ಕೂಗುವಂತೆ ಆಗ್ರಹಿಸಿ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...