Homeಕರ್ನಾಟಕಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರವು  ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ 2ಬಿ ಅಡಿಯಲ್ಲಿ ನೀಡುತ್ತಿದ್ದ ಮೀಸಲಾತಿಯನ್ನು ರದ್ದು ಮಾಡಿ, EWS ಕೋಟಾದಲ್ಲಿ ಸೇರಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡುವ ಭರದಲ್ಲಿ ಬೊಮ್ಮಾಯಿ ಸರ್ಕಾರ ಸುಳ್ಳು ಹೇಳಿದೆ ಎಂಬ ಚರ್ಚೆಗಳಾಗುತ್ತಿವೆ.

ಬೊಮ್ಮಾಯಿ ಸರ್ಕಾರ ಹೇಳಿದ್ದೇನು?

”ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಕೊಟ್ಟ ಮೀಸಲಾತಿಯನ್ನು ಆಂಧ್ರದಲ್ಲಿ ಅಲ್ಲಿಯ ಹೈಕೋರ್ಟು ರದ್ದು ಮಾಡಿದೆ. ಆದ್ದರಿಂದ ನಾವು ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡುತ್ತಿದ್ದ ಮೀಸಲಾತಿಯನ್ನು ರದ್ದು ಮಾಡಿದ್ದೇವೆ” ಎಂದು ಬೊಮ್ಮಾಯಿ ಸರ್ಕಾರ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ, ಹಿರಿಯ ಪತ್ರಕರ್ತ ಬಿ.ಎಂ ಹನೀಫ್‌ರವರು, ಆಂಧ್ರಪ್ರದೇಶದಲ್ಲಿ ರಾಜಶೇಖರ್ ರೆಡ್ಡಿ ನೇತೃತ್ವದ ಸರ್ಕಾರ 2004ರಲ್ಲಿ ಮುಸ್ಲಿಮರಿಗೆ ಧರ್ಮದ ಆಧಾರಲ್ಲಿ ಶೇ. 5 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಮಾಡುವಾಗ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಭಿಪ್ರಾಯ ಪಡೆದಿಲ್ಲ ಮತ್ತು ಒಟ್ಟಾರೆ ಮೀಸಲಾತಿ ಪ್ರಮಾಣ ಶೇ. 50 ರ ಮೇಲ್ಮಿತಿಯನ್ನು ಮೀರುತ್ತದೆ ಎಂಬ ಕಾರಣಕ್ಕೆ ಮೀಸಲಾತಿಯನ್ನು ಹೈಕೋರ್ಟು ರದ್ದು ಮಾಡಿತ್ತು. ಆದರೆ ಬೊಮ್ಮಾಯಿ ಅವರು ಹೇಳುವಂತೆ ಧಾರ್ಮಿಕ ಆಧಾರದಲ್ಲಿ ಮೀಸಲಾತಿ ನೀಡಬಾರದು ಎನ್ನುವ ಕಾರಣಕ್ಕಾಗಿ ಅಲ್ಲ ಎಂದರು.

”ಆ ನಂತರ ಆಂಧ್ರ ಸರ್ಕಾರ ಮುಸ್ಲಿಮರ ಶೈಕ್ಷಣಿಕ ಹಾಗೂ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಸಮಿತಿ ರಚನೆ ಮಾಡಿ ಮತ್ತೆ ಶೇ. 4 ರಷ್ಟು ಮೀಸಲಾತಿ ನೀಡಲು ಶಿಫಾರಸ್ಸು ಮಾಡಿತು. ಆಂಧ್ರದ ಶಾಸನ ಸಭೆ ಹೆಚ್ಚೂ ಕಡಿಮೆ ಸರ್ವಸಮ್ಮತಿಯಿಂದ ಅನುಮೋದಿಸಿ ಕಾಯಿದೆ ಮಾಡಿತು. ಆದರೆ 2010ರ ಫೆಬ್ರವರಿಯಲ್ಲಿ ಹೈದರಾಬಾದ್ ಹೈಕೋರ್ಟ್, ಈ ಆದೇಶವನ್ನು ರದ್ದು ಮಾಡಿತ್ತು. ಆದರೆ ಹೈಕೋರ್ಟಿನ ಈ ಆದೇಶಕ್ಕೆ 2010ರಲ್ಲಿ ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ತಡೆಯಾಜ್ಞೆ ನೀಡಿತು. ಅಷ್ಟು ಮಾತ್ರವಲ್ಲದೇ ಮುಸ್ಲಿಂ ಸಮುದಾಯಗಳಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ಮುಂದುವರೆಸಲು ಆದೇಶ ನೀಡಿತು. ಈಗಲೂ ಅಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲಾಗುತ್ತಿದೆ” ಎಂದರು.

”ನಮ್ಮ ರಾಜ್ಯದ ಮುಖ್ಯಮಂತ್ರಿ ಆಂಧ್ರ ಸರ್ಕಾರ, ಮತ್ತೆ ಹೈಕೋರ್ಟ್‌ನ್ನು ಉದಾಹರಣೆ ಕೊಡುತ್ತಿದ್ದಾರೆ. ಹಾಗಾದರೆ ಅಲ್ಲಿಯಂತೆ ಇಲ್ಲಿ ಸಮಿತಿ ರಚನೆ ಮಾಡಿ ಪರೀಶೀಲನೆ ಮಾಡಿದ್ದಾರಾ? ಇಲ್ಲ, ಬೇರೆ ಸಮುದಾಯಗಳಿಗೆ ಮೀಸಲಾತಿ ನೀಡುವ ಒತ್ತಡದಲ್ಲಿ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ರದ್ದು ಮಾಡಿದ್ದಾರೆ. ಇದು ಸಂಪೂರ್ಣ ಅಸಂವಿಧಾನಿಕ ನಡೆಯಾಗಿದೆ” ಎಂದು ಹನೀಫ್ ತಿಳಿಸಿದರು.

”ಅಸಂವಿಧಾನಿಕವಾಗಿರುವ ಸರ್ಕಾರದ ಈ ಆದೇಶಕ್ಕೆ ಮುಂದೆ ನ್ಯಾಯಾಲಯ ತಡೆ ನೀಡಬಹುದು. ಆದರೆ ಇದು ಕೇವಲ ಅವರ ಚುನಾವಣಾ ರಾಜಕಾರಣದ ಭಾಗವಾಗಿದೆ. ನ್ಯಾಯಾಲಯ ತಡೆ ನೀಡಿದರೂ, ತಡೆ ನೀಡದಿದ್ದರೂ ಬಿಜೆಪಿ ಅದನ್ನ ಕೋಮು ದ್ವೇಷ ಹರಡಲು ಬಳಕೆ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಅದೇ ರೀತಿ ಚಿಂತಕ, ಹೋರಾಟಗಾರ ಶಿವಸುಂದರ್ ಅವರು ಮುಸ್ಲಿಂ ಮೀಸಲಾತಿ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರು ಸುಳ್ಳು ಹೇಳಿದ್ದಾರೆ ಮತ್ತೆ ಅದು ನ್ಯಾಯಾಲಯದ ನಿಂದನೆ ಕೂಡ ಆಗುತ್ತದೆ ಎಂದಿದ್ದಾರೆ.

ಆಂಧ್ರದಲ್ಲಿ ಮುಸ್ಲಿಮರ ಮೀಸಲಾತಿ ರದ್ದಾಗಿದೆಯೇ? ಆಂಧ್ರದಲ್ಲಿ ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗುತ್ತಿತ್ತೇ? ಎಂಬ ಈ ಎರಡೂ ವಿಷಯಗಳ ಬಗ್ಗೆಯೂ ಬೊಮ್ಮಾಯಿ ಸರ್ಕಾರ ಕರ್ನಾಟಕದ ಜನರಿಗೆ ಸುಳ್ಳು ಹೇಳುತ್ತಿದೆ .

2004ರಲ್ಲಿ ಆಂಧ್ರ ಸರ್ಕಾರ ಮುಸ್ಲಿಮರಿಗೆ ಧರ್ಮದ ಆಧಾರಲ್ಲಿ ಶೇ. 5 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿತ್ತು. ಅದನ್ನು (ಟಿ. ಮುರಳೀಧರ ರಾವ್ ವರ್ಸಸ್ ಆಂಧ್ರ ಸರ್ಕಾರ ಪ್ರಕರಣದಲ್ಲಿ ) ಹೈಕೋರ್ಟು ರದ್ದು ಮಾಡಿತ್ತು. ಆದರೆ ಅದಕ್ಕೆ ಕಾರಣ :

ಅ ) ಈ ಆದೇಶವನ್ನು ಮಾಡುವಾಗ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಭಿಪ್ರಾಯ ಪಡೆದಿಲ್ಲ ಮತ್ತು

ಆ ) ಒಟ್ಟಾರೆ ಮೀಸಲಾತಿ ಪ್ರಮಾಣ ಶೇ. 50 ರ ಮೇಲ್ಮಿತಿಯನ್ನು ಮೀರುತ್ತದೆ ಎಂಬ ಕಾರಣಕ್ಕೆ ಹೊರತು ಧಾರ್ಮಿಕ ಆಧಾರದ ಮೀಸಲಾತಿ ಸಲ್ಲದು ಎಂಬ ಕಾರಣಕ್ಕಾಗಿ ಅಲ್ಲ.

– ಆ ನಂತರ 2005 ರಲ್ಲಿ ಆಂಧ್ರ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸಿನ ಮೇರೆಗೆ ಕರ್ನಾಟಕದಂತೆ ಇಡೀ ಮುಸ್ಲಿಮರನ್ನು ಹಿಂದುಳಿದ ವರ್ಗಗಳಾಗಿ ಪರಿಗಣಿಸಿ ಒಬಿಸಿ ಮೀಸಲಾತಿಯ ಭಾಗವಾಗಿ ಮತ್ತು ಅದರೊಳಗೆ ಶೇ. 5 ರಷ್ಟು ಮೀಸಲಾತಿಯನ್ನು ಕಲ್ಪಿಸಿತು. ಅದನ್ನೂ ಕೂಡ ಆಂಧ್ರಪ್ರದೇಶ ಹೈಕೋರ್ಟು (ಅರ್ಚನಾ ರೆಡ್ಡಿ ವರ್ಸಸ್ ಆಂಧ್ರಪ್ರದೇಶ ಸರ್ಕಾರ ಪ್ರಕರಣದಲ್ಲಿ) ರದ್ದು ಮಾಡಿತು.

ಆಗಲೂ ಅದಕ್ಕೆ ಕಾರಣವಾದದ್ದು ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ಕೊಟ್ಟಿದ್ದಾರೆ ಎಂಬುದಲ್ಲ. ಬದಲಿಗೆ ಇಡೀ ಮುಸ್ಲಿಂ ಸಮುದಾಯ ಹಿಂದುಳಿದ ವರ್ಗ ಎಂದು ಸರಿಯಾಗಿ ಸಾಬೀತಾಗಿಲ್ಲ ಎಂಬ ಕಾರಣಕ್ಕೆ ಎಂದು ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ನಂತರ ಆಂಧ್ರ ಸರ್ಕಾರ ಮುಸ್ಲಿಂ ರ ಶೈಕ್ಷಣಿಕ ಹಾಗೂ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಶಿಫಾರಸ್ಸು ಮಾಡಲು ನಿವೃತ್ತ ಸರ್ಕಾರಿ ಅಧಿಕಾರಿ ಮತ್ತು ಹಿರಿಯ ಹಾಗೂ ಮೇಧಾವಿ ಸಾಮಾಜಿಕ ನ್ಯಾಯನೀತಿಜ್ಞ ಪಿ.ಎಸ . ಕೃಷ್ಣನ್ ಅವರ ಸಮಿತಿಯನ್ನು ನೇಮಿಸಿತು. ಆ ಸಮಿತಿಯು ವಿಸ್ತೃತ ಮತ್ತು ವೈಜ್ಞಾನಿಕ ಅಧ್ಯಯನ ನಡೆಸಿ ಮುಸ್ಲಿಮರಲ್ಲಿನ 14 ಪ್ರಮುಖ ಪ್ರವರ್ಗಗಳನ್ನು ಹಿಂದುಳಿದ ವರ್ಗಗಳಾನ್ನಾಗಿ ಪರಿಗಣಿಸಿ ಒಬಿಸಿ ಮೀಸಲಾತಿ ಸಮುದಾಯದೊಳಗೆ ವಿಶೇಷ ಪ್ರವರ್ಗ ‘E” ಕಲ್ಪಿಸಿ ಶೇ. 4 ರಷ್ಟು ಮೀಸಲಾತಿ ನೀಡಲು ಶಿಫಾರಸ್ಸು ಮಾಡಿತು. ಅದನ್ನು ಹಿಂದುಳಿದ ವರ್ಗದ ಆಯೋಗವೂ ಅನುಮೋದಿಸಿತು. ಇದನ್ನು ಆಂಧ್ರದ ಶಾಸನ ಸಭೆ ಹೆಚ್ಚೂ ಕಡಿಮೆ ಸರ್ವಸಮ್ಮತಿಯಿಂದ ಅನುಮೋದಿಸಿ ಕಾಯಿದೆ ಮಾಡಿತು. ಈ ಕಾಯಿದೆಯನ್ನು ಹಲವಾರು ಆಂಧ್ರ ಹೈಕೋರ್ಟಿನಲ್ಲಿ ಪ್ರಶ್ನಿಸಿದರು. 2010ರ ಫೆಬ್ರವರಿಯಲ್ಲಿ ಹೈದರಾಬಾದ್ ಹೈಕೋರ್ಟಿನ ಪೂರ್ಣ ಪೀಠ 5-2 ಬಹುಮತದ ಮೇಲೆ ಈ ಆದೇಶವನ್ನು ರದ್ದು ಮಾಡಿತ್ತು. ಅದಕ್ಕೆ ಹೈಕೋರ್ಟು ನೀಡಿದ ಕಾರಣ:

1) ಸರ್ಕಾರ ಕೆಲವು ಪ್ರಕ್ರಿಯೆಗಳನ್ನು ಅನುಸರಿಸಿಲ್ಲವೆಂಬುದು ಮತ್ತು

2) ಮುಸ್ಲಿಮರಿಗೆ ಕೊಡುವ ಮೀಸಲಾತಿಯಿಂದ ಮತಾಂತರ ಹೆಚ್ಚಬಹುದು ಎಂಬ ಆತಂಕ

-ಆದರೆ ಹೈಕೋರ್ಟಿನ ಈ ಆದೇಶಕ್ಕೆ 2010ರ ಮಾರ್ಚ್ 25 ರಂದೇ ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ತಡೆಯಾಜ್ಞೆ ನೀಡಿತು.

-ಅಷ್ಟು ಮಾತ್ರವಲ್ಲ , ಆಂಧ್ರ ಸರ್ಕಾರವು 14 ಮುಸ್ಲಿಂ ಪ್ರವರ್ಗಗಳಿಗೆ ಸಮುದಾಯಗಳಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ಮುಂದುವರೆಸಲು ಆದೇಶ ನೀಡಿತು ಹಾಗೂ

– ಈ ವಿಷಯದಲ್ಲಿ ಹಲವಾರು ಸಾಂವಿಧಾನಿಕ ಅಂಶಗಳಿರುವುದರಿಂದ ಐವರು ಸದಸ್ಯರ ಸಾಂವಿಧಾನಿಕ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿತು.

– EWS ಮೀಸಲಾತಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸಾಂವಿಧಾನಿಕ ಪೀಠಕ್ಕೆ ಮುಸ್ಲಿಂ ಮೀಸಲಾತಿಯ ಪ್ರಕರಣವನ್ನು ವರ್ಗಾಯಿಸಲಾಯಿತು.

– ಈ ಸಾಂವಿಧಾನಿಕ ಪೀಠವು ಮುಸ್ಲಿಂ ಮೀಸಲಾತಿಯ ವಿಷಯದ ಬಗ್ಗೆ ಕೊಟ್ಟ ಕೊನೆಯ ಬಾರಿಗೆ ಅಹವಾಲನ್ನು ಆಲಿಸಿದ್ದು 2022ರ ಸೆಪ್ಟೆಂಬರ್ 6 ರಂದು. ಆಗಲೂ ಅದು ತ್ರಿಸದಸ್ಯ ಪೀಠದ ಆದೇಶವನ್ನು ಅರ್ಥಾತ್ ಮುಸ್ಲಿಮರಿಗೆ ಕೊಡುತ್ತಿದ್ದ ಮೀಸಲಾತಿಯನ್ನು ಮುಂದುವರೆಸುವ ಆದೇಶವನ್ನು ಚಾಲ್ತಿಯಲ್ಲಿಟ್ಟು ವಿಚಾರಣೆಯನ್ನು ಅನಿರ್ದಿಷ್ಟ ಕಾಲ ಮುಂದೂಡಿದೆ.

ಅಂದರೆ ಆಂಧ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿರುವುದು ಹಿಂದುಳಿದ ವರ್ಗದ ಆಧಾರದಲ್ಲಿಯೇ ವಿನಾ ಧರ್ಮದ ಆಧಾರದಲ್ಲಲ್ಲ. ಈ ವಿಷಯದ ಬಗ್ಗೆ ಆಂಧ್ರ ಹೈಕೋರ್ಟು ಕೊಟ್ಟ ವ್ಯತಿರಿಕ್ತ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ ನೀಡಿರುವುದಲ್ಲದೆ ಮುಸ್ಲಿಮರಿಗೆ ಹಿಂದುಳಿದ ವರ್ಗಗಳಾಗಿ ನೀಡುತ್ತಿದ್ದ ಮೀಸಲಾತಿಯನ್ನು ಚಾಲ್ತಿಯಲ್ಲಿಟ್ಟಿದೆ. ವಿಸ್ತೃತ ಸಾಂವಿಧಾನಿಕ ಪೀಠವೂ ಮೀಸಲಾತಿ ಮುಂದುವರಿಕೆಗೆ ತಡೆ ನೀಡಿಲ್ಲ. ಹೀಗಾಗಿ ಆಂಧ್ರದಲ್ಲಿ ಮುಸ್ಲಿಂ ಮೀಸಲಾತಿಯನ್ನು ಕೋರ್ಟು ರದ್ದುಗೊಳಿಸಿದೆ ಎಂಬ ಬೊಮ್ಮಾಯಿ ಸರ್ಕಾರದ ವ್ಯಾಖ್ಯಾನ ಮತ್ತು ಆದೇಶಗಳು ಸುಪ್ರೀಂ ತೀರ್ಪಿನ ಅಪವ್ಯಖ್ಯಾನ ಮತ್ತು ಕೋರ್ಟು ನಿಂದನೆ ಯೂ ಆಗುತ್ತದೆ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ಸರ್ಕಾರ ಈ ರೀತಿಯ ಬಾಲಿಷ ತಪ್ಪುಗಳನ್ನು ಮಾಡಬಾರದು. ಸಂವಿಧಾನದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿಗೆ ಅವಕಾಶ ಇಲ್ಲ ಎಂದು ಮುಸ್ಲಿಮರಿಗೆ 2(ಬಿ) ನಲ್ಲಿರುವ ಮೀಸಲಾತಿಯನ್ನು ರಾಜ್ಯ ಸರ್ಕಾರ ಕಿತ್ತುಹಾಕಿದೆ. ಆದರೆ ಅದೇ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರುವ ಕ್ರಿಶ್ಚಿಯನ್ ಮತ್ತು ಜೈನ (ದಿಗಂಬರ) ಧರ್ಮಗಳಿಗೆ ಲಿಂಗಾಯತರ ಜೊತೆಯಲ್ಲಿ 2 (ಡಿ)ಯಲ್ಲಿ ಮೀಸಲಾತಿ ನೀಡಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟುರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬೇಕಿಲ್ಲ, ಮುಸ್ಲಿಂ ಒಲೈಕೆಗೆ ಕಾಂಗ್ರೆಸ್ ಮೀಸಲಾತಿ ನೀಡಿತ್ತು: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...