Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...