Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...