Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...