Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...