Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...