Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...