Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...