Homeಮುಖಪುಟಮುಸ್ಲಿಮರನ್ನು 'ಎರಡನೇ ದರ್ಜೆಯ' ಪ್ರಜೆಗಳನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ: ಅಖಿಲೇಶ್ ಯಾದವ್

ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆಗಳನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ: ಅಖಿಲೇಶ್ ಯಾದವ್

- Advertisement -
- Advertisement -

ದೇಶದ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರನ್ನು “ಎರಡನೇ ದರ್ಜೆಯ” ಪ್ರಜೆಗಳನ್ನಾಗಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಆರೋಪಿಸಿದ್ದು, ಅವರ ಹಕ್ಕುಗಳು ಮತ್ತು ಆಸ್ತಿಗಳನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆ

ಲೋಕಸಭೆಯಲ್ಲಿ ‘ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ’ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಅಸಮಾನತೆಯನ್ನು ಬೆಳೆಸುವ ಮತ್ತು ತಳ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆ

“ಈ ಸಂವಿಧಾನವು ನಮ್ಮ ರಕ್ಷಾಕವಚ, ನಮ್ಮ ಭದ್ರತೆ, ಇದು ನಮಗೆ ಅಗತ್ಯವಿರುವಾಗ ಶಕ್ತಿಯನ್ನು ನೀಡುತ್ತದೆ. ಸಂವಿಧಾನವು ತುಳಿತಕ್ಕೊಳಗಾದ, ನಿರ್ಲಕ್ಷಿಸಲ್ಪಟ್ಟ, ದಮನಕ್ಕೊಳಗಾದ ಮತ್ತು ವಂಚಿತರ ಹಕ್ಕುಗಳ ನಿಜವಾದ ಕಾವಲುಗಾರ. ನಮ್ಮಂತಹ ಜನರಿಗೆ ಮತ್ತು ದೇಶದ ದುರ್ಬಲರಿಗೆ, ವಿಶೇಷವಾಗಿ ಪಿಡಿಎ (ಪಿಚ್ಡೆ, ದಲಿತ ಮತ್ತು ಅಲ್ಪಸಂಖ್ಯಾತ) ಸಮುದಾಯಗಳು ಸಂವಿಧಾನವನ್ನು ಉಳಿಸುವುದು ಅವರ ಜೀವನ್ಮರಣದ ವಿಷಯವಾಗಿದೆ,” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿರುವ ಅವರು, ಅವರ ಹಕ್ಕುಗಳು ಮತ್ತು ಆಸ್ತಿಗಳನ್ನು ವ್ಯವಸ್ಥಿತವಾಗಿ ಕಸಿದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. “20 ಕೋಟಿಗೂ ಹೆಚ್ಚು ಜನರು, ವಿಶೇಷವಾಗಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲಾಗುತ್ತಿದೆ. ಅವರ ವಿರುದ್ಧದ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಿವೆ. ಅವರ ಆಸ್ತಿಗಳನ್ನು ಲೂಟಿ ಮಾಡಲಾಗುತ್ತಿದೆ, ಮನೆಗಳನ್ನು ಕೆಡವಲಾಗುತ್ತಿದೆ ಮತ್ತು ಆಡಳಿತಾತ್ಮಕ ಸಹಾಯದಿಂದ ಪೂಜಾ ಸ್ಥಳಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ” ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಜಾತಿ ಗಣತಿಯ ಕರೆಯನ್ನು ಪುನರುಚ್ಚರಿಸಿದ ಅವರು, ಸಾಮಾಜಿಕ ಅಂತರವನ್ನು ಕಡಿಮೆ ಮಾಡಲು ಮತ್ತು ಸಾಮಾಜಿಕ ನ್ಯಾಯವನ್ನು ಸಾಧಿಸಲು ಇದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ. ಜಾತಿ ಗಣತಿಯು ಜಾತಿ ವಿಭಜನೆ ಮಾಡುವುದಿಲ್ಲ, ಬದಲಾಗಿ ಅವುಗಳನ್ನು ಕಡಿಮೆ ಮಾಡುತ್ತದೆ. ಇದು ದೀರ್ಘಕಾಲದಿಂದ ವಂಚಿತರಾದವರಿಗೆ ಹಕ್ಕುಗಳು ಮತ್ತು ಸಮಾನತೆಯನ್ನು ಖಾತರಿಪಡಿಸುತ್ತದೆ ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿಯು ಅತ್ಯಂತ ಮಹತ್ವದ ಸಾಧನವಾಗಿದ್ದು, ಆದರೆ ಅದನ್ನು ಹೊರಗುತ್ತಿಗೆ ಮತ್ತು ಗುತ್ತಿಗೆ ಆಧಾರಿತ ಉದ್ಯೋಗಗಳ ಮೂಲಕ ದುರ್ಬಲಗೊಳಿಸಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ದೇಶದ ಆರ್ಥಿಕ ಅಸಮಾನತೆಯ ವಿಷಯದ ಬಗ್ಗೆ ಮತ್ತು ಹಿಂದುಳಿದವರ ದುಃಸ್ಥಿತಿಯನ್ನು ಎತ್ತಿ ತೋರಿಸಿದ ಅಖಿಲೇಶ್ ಅವರು, “140 ಕೋಟಿ ಜನರಲ್ಲಿ, 82 ಕೋಟಿ ಜನರು ತಮ್ಮ ಉಳಿವಿಗಾಗಿ ಸರ್ಕಾರಿ ಪಡಿತರವನ್ನು ಅವಲಂಬಿಸಿದ್ದಾರೆ. ದೇಶವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಹೆಮ್ಮೆಪಡುತ್ತಿದ್ದೇವೆ, ಆದರೆ ವಾಸ್ತವವು ಸಂಪೂರ್ಣವಾಗಿ ವಿಭಿನ್ನವಾಗಿದೆ. ರಾಷ್ಟ್ರದ ಮೂರನೇ ಎರಡರಷ್ಟು ಸಂಪತ್ತು ಕೆಲವರ ಕೈಯಲ್ಲಿ ಕೇಂದ್ರೀಕೃತವಾಗಿದೆ. ಸರಕಾರಕ್ಕೆ ಧೈರ್ಯವಿದ್ದರೆ ಬಡತನ ರೇಖೆಗಿಂತ ಕೆಳಗಿರುವವರ ತಲಾ ಆದಾಯವನ್ನು ಬಹಿರಂಗಪಡಿಸಬೇಕು’’ ಎಂದರು.

ಸರ್ಕಾರ ಭಯ ಮತ್ತು ಆಡಳಿತದ ಅತಿರೇಕದ ಮೂಲಕ ಚುನಾವಣೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಉತ್ತರ ಪ್ರದೇಶ ಚುನಾವಣೆಯ ಸಂದರ್ಭದಲ್ಲಿ (ಇತ್ತೀಚಿನ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಗಳು), ಅನೇಕರಿಗೆ ಮತದಾನದ ಹಕ್ಕನ್ನು ನಿರಾಕರಿಸಲಾಯಿತು. ಮಹಿಳೆಯರಿಗೆ ಬೆದರಿಕೆ ಹಾಕಲಾಯಿತು ಮತ್ತು ಪೊಲೀಸ್ ಅಧಿಕಾರಿಗಳು ಬಹಿರಂಗವಾಗಿ ರಿವಾಲ್ವರ್‌ಗಳೊಂದಿಗೆ ಅವರನ್ನು ಬೆದರಿಸಿದರು. ಆದರೂ, ಆ ಧೀರ ಮಹಿಳೆಯರು ಬೆದರಿಕೆಯನ್ನು ಧಿಕ್ಕರಿಸಿ ಮತ ಚಲಾಯಿಸಿದರು. ಇದು ನಾವು ವಾಸಿಸುತ್ತಿರುವ ಪ್ರಜಾಪ್ರಭುತ್ವವೆ?” ಅವರು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವದ ತತ್ವಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಎಚ್ಚರಿಕೆ ನೀಡಿದ ಅವರು, “ಈ ವ್ಯವಸ್ಥೆಯು ಸರ್ವಾಧಿಕಾರದತ್ತ ವೇಗವಾಗಿ ಸಾಗುತ್ತಿದೆ. ಹಿಟ್ಲರ್ ಕೂಡ ದಬ್ಬಾಳಿಕೆಯನ್ನು ಸ್ಥಾಪಿಸಲು ಚುನಾಯಿತರಾದ ನಂತರ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದ. ನಮ್ಮ ಸರ್ಕಾರವು ಅದೇ ಹಾದಿಯಲ್ಲಿ ಸಾಗುತ್ತಿದೆ” ಎಂದು ಅವರು ಹೇಳಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | VVPAT ಸ್ಲಿಪ್‌ಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...