Homeಮುಖಪುಟಜ್ಞಾನವಾಪಿ ಮಸೀದಿ ಆವರಣದ ವಿಗ್ರಹ ತುಂಡುಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ ಮುಸ್ಲಿಂ ಅರ್ಜಿದಾರರು

ಜ್ಞಾನವಾಪಿ ಮಸೀದಿ ಆವರಣದ ವಿಗ್ರಹ ತುಂಡುಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ ಮುಸ್ಲಿಂ ಅರ್ಜಿದಾರರು

- Advertisement -
- Advertisement -

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಅವಶೇಷಗಳ ರಾಶಿಯಲ್ಲಿ ಪುರಾತತ್ವ ಇಲಾಖೆ ಪತ್ತೆ ಮಾಡಿದೆ ಎನ್ನಲಾದ ವಿಗ್ರಹಗಳ ತುಂಡುಗಳು ಈ ಕಟ್ಟಡದ ಬಾಡಿಗೆ ಮಳಿಗೆಗಳಲ್ಲಿ ವಹಿವಾಟು ನಡೆಸುತ್ತಿದ್ದ ಶಿಲ್ಪಿಗಳು ಹಾಕಿರುವ ಸಾಧ್ಯತೆ ಇದೆ ಎಂದು ಮಸೀದಿಯ ಪರಿಪಾಲನೆ ನಿರ್ವಹಿಸುತ್ತಿರುವ ಅಂಜುಮನ್ ಇಂತಿಝಾಮಿಯಾ ಮಸಾಜಿದ್ (ಎಐಎಂ) ಸಮಿತಿ ಶುಕ್ರವಾರ ಸಂಶಯ ವ್ಯಕ್ತಪಡಿಸಿದೆ.

ಮಸೀದಿ ಸಮಿತಿ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್, ಇಂಥ ವಾದಕ್ಕೆ ಯಾವ ಆಧಾರವೂ ಇಲ್ಲ ಎಂದಿದ್ದಾರೆ. ಜ್ಞಾನವಾಪಿ ಎಎಸ್ಐನ ವೈಜ್ಞಾನಿಕ ಸಮೀಕ್ಷೆ ವರದಿಯು ಆವರಣದ ಒಳಗಡೆ ಇದ್ದ ಅವಶೇಷಗಳ ರಾಶಿಯಲ್ಲಿ ಪತ್ತೆಯಾದ ಪ್ರತಿ ವಿಗ್ರಹ ಮತ್ತು ಕಲಾಕೃತಿಗಳ ವಯಸ್ಸು, ಯುಗ, ಗಾತ್ರ ಮತ್ತು ಇತರ ಎಲ್ಲ ಸೂಕ್ತ ವಿವರಗಳನ್ನು ನಿರ್ದಿಷ್ಟಪಡಿಸಿದೆ ಎಂದು ಅವರು ಹೇಳಿದ್ದಾರೆ.

ಎಎಸ್‌ಐ ಸಮೀಕ್ಷೆ ವರದಿಯ ಪ್ರತಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ಅರ್ಜಿದಾರರಿಗೆ ನೀಡಿದ ಬೆನ್ನಲ್ಲೇ ಪರಸ್ಪರ ವಾಗ್ವಾದ ಶುರುವಾಗಿದೆ. 17ನೇ ಶತಮಾನದಲ್ಲಿ ಮಸೀದಿ ನಿರ್ಮಾಣ ಮಾಡುವ ಮೊದಲು ಜ್ಞಾನವಾಪಿ ಜಾಗದಲ್ಲಿ ಹಿಂದೂ ಮಂದಿರ ಇತ್ತು ಎಂದು ಎಎಸ್ಐ ಸಮೀಕ್ಷೆ ತಿಳಿಸಿದೆ.

ಎಎಸ್ಐ ಸಮೀಕ್ಷೆ ವರದಿಯ ಅಧ್ಯಯನಕ್ಕೆ ಕಾನೂನು ತಜ್ಞರನ್ನು ನೇಮಕ ಮಾಡಲಾಗುವುದು ಎಂದು ಮಸೀದಿ ಸಮಿತಿ ಹೇಳಿದೆ. ಇಲ್ಲಿ ದೇವಾಲಯ ಇತ್ತು ಎನ್ನುವ ಬಗ್ಗೆ ಹಿಂದೂಗಳು ಮಾಡಿರುವ ಪ್ರತಿಪಾದನೆಗೆ ಯಾವುದೇ ಹೊಸ ಶೋಧನೆಯ ಆಧಾರ ಇಲ್ಲ ಎಂದು ಸಮಿತಿಯ ವಕೀಲ ಅಖ್ಲಾಕ್ ಅಹ್ಮದ್ ಅಭಿಪ್ರಾಯಪಟ್ಟಿದ್ದಾರೆ.

ನಾವು ವರದಿಯನ್ನು ಅಧ್ಯಯನ ಮಾಡಿದ ಬಳಿಕ ಹೇಳಿಕೆ ನೀಡುತ್ತೇವೆ. ಎಎಸ್‌ಐ ಸಮೀಕ್ಷೆಯಲ್ಲಿ, ಮೇ 2022 ರಲ್ಲಿ ನ್ಯಾಯಾಲಯದ ಕಮಿಷನರ್ ಸಮೀಕ್ಷೆಯಲ್ಲಿ ಹೇಳಿದ್ದನ್ನೇ ಹೇಳಲಾಗಿದೆ. ಹೊಸತೇನು ಇಲ್ಲ ಎಂದು ಅಖ್ಲಾಕ್ ಅಹ್ಮದ್ ತಿಳಿಸಿದ್ದಾರೆ.

1993ರಲ್ಲಿ ಕಬ್ಬಿಣದ ಪಟ್ಟಿಗಳಿಂದ ಮಸೀದಿಯ ದಕ್ಷಿಣ ಭಾಗವನ್ನು ಮುಚ್ಚುವ ಮೊದಲು ಮಸೀದಿ ಸಮಿತಿಯಿಂದ ಅಂಗಡಿಗಳನ್ನು ಐದರಿಂದ ಆರು ಶಿಲ್ಪಿಗಳು ಬಾಡಿಗೆಗೆ ಪಡೆದಿದ್ದರು. ಆ ವೇಳೆ ಅವರು ವಿಗ್ರಹಗಳು ಮತ್ತು ತ್ಯಾಜ್ಯವನ್ನು ಎಸೆದಿರುವ ಬಲವಾದ ಸಂಶಯ ನಮಗಿದೆ. ಎಎಸ್‌ಐ ಸಮೀಕ್ಷೆ ಸಮಯದಲ್ಲಿ ಅದೇ ವಿಗ್ರಹಗಳನ್ನು ದೊರತಿರುವ ಸಾಧ್ಯತೆ ಇದೆ ಎಂದು ಅಖ್ಲಾಕ್ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್ ಕುಮಾರ್ ‘ಇಂಡಿಯಾ’ ಬಣದಲ್ಲೆ ಉಳಿದಿದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...