Homeಮುಖಪುಟಜ್ಞಾನವಾಪಿ ಮಸೀದಿ ಆವರಣದ ವಿಗ್ರಹ ತುಂಡುಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ ಮುಸ್ಲಿಂ ಅರ್ಜಿದಾರರು

ಜ್ಞಾನವಾಪಿ ಮಸೀದಿ ಆವರಣದ ವಿಗ್ರಹ ತುಂಡುಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ ಮುಸ್ಲಿಂ ಅರ್ಜಿದಾರರು

- Advertisement -
- Advertisement -

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಅವಶೇಷಗಳ ರಾಶಿಯಲ್ಲಿ ಪುರಾತತ್ವ ಇಲಾಖೆ ಪತ್ತೆ ಮಾಡಿದೆ ಎನ್ನಲಾದ ವಿಗ್ರಹಗಳ ತುಂಡುಗಳು ಈ ಕಟ್ಟಡದ ಬಾಡಿಗೆ ಮಳಿಗೆಗಳಲ್ಲಿ ವಹಿವಾಟು ನಡೆಸುತ್ತಿದ್ದ ಶಿಲ್ಪಿಗಳು ಹಾಕಿರುವ ಸಾಧ್ಯತೆ ಇದೆ ಎಂದು ಮಸೀದಿಯ ಪರಿಪಾಲನೆ ನಿರ್ವಹಿಸುತ್ತಿರುವ ಅಂಜುಮನ್ ಇಂತಿಝಾಮಿಯಾ ಮಸಾಜಿದ್ (ಎಐಎಂ) ಸಮಿತಿ ಶುಕ್ರವಾರ ಸಂಶಯ ವ್ಯಕ್ತಪಡಿಸಿದೆ.

ಮಸೀದಿ ಸಮಿತಿ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್, ಇಂಥ ವಾದಕ್ಕೆ ಯಾವ ಆಧಾರವೂ ಇಲ್ಲ ಎಂದಿದ್ದಾರೆ. ಜ್ಞಾನವಾಪಿ ಎಎಸ್ಐನ ವೈಜ್ಞಾನಿಕ ಸಮೀಕ್ಷೆ ವರದಿಯು ಆವರಣದ ಒಳಗಡೆ ಇದ್ದ ಅವಶೇಷಗಳ ರಾಶಿಯಲ್ಲಿ ಪತ್ತೆಯಾದ ಪ್ರತಿ ವಿಗ್ರಹ ಮತ್ತು ಕಲಾಕೃತಿಗಳ ವಯಸ್ಸು, ಯುಗ, ಗಾತ್ರ ಮತ್ತು ಇತರ ಎಲ್ಲ ಸೂಕ್ತ ವಿವರಗಳನ್ನು ನಿರ್ದಿಷ್ಟಪಡಿಸಿದೆ ಎಂದು ಅವರು ಹೇಳಿದ್ದಾರೆ.

ಎಎಸ್‌ಐ ಸಮೀಕ್ಷೆ ವರದಿಯ ಪ್ರತಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ಅರ್ಜಿದಾರರಿಗೆ ನೀಡಿದ ಬೆನ್ನಲ್ಲೇ ಪರಸ್ಪರ ವಾಗ್ವಾದ ಶುರುವಾಗಿದೆ. 17ನೇ ಶತಮಾನದಲ್ಲಿ ಮಸೀದಿ ನಿರ್ಮಾಣ ಮಾಡುವ ಮೊದಲು ಜ್ಞಾನವಾಪಿ ಜಾಗದಲ್ಲಿ ಹಿಂದೂ ಮಂದಿರ ಇತ್ತು ಎಂದು ಎಎಸ್ಐ ಸಮೀಕ್ಷೆ ತಿಳಿಸಿದೆ.

ಎಎಸ್ಐ ಸಮೀಕ್ಷೆ ವರದಿಯ ಅಧ್ಯಯನಕ್ಕೆ ಕಾನೂನು ತಜ್ಞರನ್ನು ನೇಮಕ ಮಾಡಲಾಗುವುದು ಎಂದು ಮಸೀದಿ ಸಮಿತಿ ಹೇಳಿದೆ. ಇಲ್ಲಿ ದೇವಾಲಯ ಇತ್ತು ಎನ್ನುವ ಬಗ್ಗೆ ಹಿಂದೂಗಳು ಮಾಡಿರುವ ಪ್ರತಿಪಾದನೆಗೆ ಯಾವುದೇ ಹೊಸ ಶೋಧನೆಯ ಆಧಾರ ಇಲ್ಲ ಎಂದು ಸಮಿತಿಯ ವಕೀಲ ಅಖ್ಲಾಕ್ ಅಹ್ಮದ್ ಅಭಿಪ್ರಾಯಪಟ್ಟಿದ್ದಾರೆ.

ನಾವು ವರದಿಯನ್ನು ಅಧ್ಯಯನ ಮಾಡಿದ ಬಳಿಕ ಹೇಳಿಕೆ ನೀಡುತ್ತೇವೆ. ಎಎಸ್‌ಐ ಸಮೀಕ್ಷೆಯಲ್ಲಿ, ಮೇ 2022 ರಲ್ಲಿ ನ್ಯಾಯಾಲಯದ ಕಮಿಷನರ್ ಸಮೀಕ್ಷೆಯಲ್ಲಿ ಹೇಳಿದ್ದನ್ನೇ ಹೇಳಲಾಗಿದೆ. ಹೊಸತೇನು ಇಲ್ಲ ಎಂದು ಅಖ್ಲಾಕ್ ಅಹ್ಮದ್ ತಿಳಿಸಿದ್ದಾರೆ.

1993ರಲ್ಲಿ ಕಬ್ಬಿಣದ ಪಟ್ಟಿಗಳಿಂದ ಮಸೀದಿಯ ದಕ್ಷಿಣ ಭಾಗವನ್ನು ಮುಚ್ಚುವ ಮೊದಲು ಮಸೀದಿ ಸಮಿತಿಯಿಂದ ಅಂಗಡಿಗಳನ್ನು ಐದರಿಂದ ಆರು ಶಿಲ್ಪಿಗಳು ಬಾಡಿಗೆಗೆ ಪಡೆದಿದ್ದರು. ಆ ವೇಳೆ ಅವರು ವಿಗ್ರಹಗಳು ಮತ್ತು ತ್ಯಾಜ್ಯವನ್ನು ಎಸೆದಿರುವ ಬಲವಾದ ಸಂಶಯ ನಮಗಿದೆ. ಎಎಸ್‌ಐ ಸಮೀಕ್ಷೆ ಸಮಯದಲ್ಲಿ ಅದೇ ವಿಗ್ರಹಗಳನ್ನು ದೊರತಿರುವ ಸಾಧ್ಯತೆ ಇದೆ ಎಂದು ಅಖ್ಲಾಕ್ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್ ಕುಮಾರ್ ‘ಇಂಡಿಯಾ’ ಬಣದಲ್ಲೆ ಉಳಿದಿದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...