Homeಮುಖಪುಟಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಎಬಿವಿಪಿ ದುಷ್ಕರ್ಮಿಗಳು!

ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಎಬಿವಿಪಿ ದುಷ್ಕರ್ಮಿಗಳು!

- Advertisement -
- Advertisement -

ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಎಬಿವಿಪಿ (ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್) ಸಂಯೋಜಿತ ಸಂಘಟನೆಯಾದ ರಾಷ್ಟ್ರೀಯ ಕಲಾ ಮಂಚ್‌ ಆಯೋಜಿಸಿದ್ದ ದೀಪಾವಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಸುತ್ತುವರೆದು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ವಿಶ್ವವಿದ್ಯಾಲಯದಲ್ಲಿ ಗಲಾಟೆ ನಡೆದಿದೆ. ಮುಸ್ಲಿಂ ವಿದ್ಯಾರ್ಥಿನಿಯರ

ಗಲಾಟೆ ವೇಳೇ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯನ್ನು ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ, ಮತ್ತು ಎನ್‌ಎಸ್‌ಯುಐನ ಜೆಎಂಐ ಘಟಕವು ಖಂಡಿಸಿದ್ದು, ಹಿಂದುತ್ವ ವಿದ್ಯಾರ್ಥಿ ಘಟಕವು ಕ್ಯಾಂಪಸ್‌ನಲ್ಲಿ ಶಾಂತಿಗೆ ಭಂಗ ತಂದಿದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘರ್ಷಣೆಗೆ ಕಾರಣವಾದ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಕ್ಕಾಗಿ ವಿಶ್ವವಿದ್ಯಾಲಯದ ಆಡಳಿತವನ್ನು ಎಸ್‌ಎಫ್‌ಐ ತರಾಟೆಗೆ ತೆಗೆದುಕೊಂಡಿದೆ. ‘ಜ್ಯೋತಿರ್ಮಯ 2024’ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಹಿರಿಯ ಆರ್‌ಎಸ್‌ಎಸ್ ಮತ್ತು ಎಬಿವಿಪಿ ನಾಯಕರು ಸೇರಿದಂತೆ ಕ್ಯಾಂಪಸ್‌ನ ಹೊರಗಿನ ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಮುಸ್ಲಿಂ ವಿದ್ಯಾರ್ಥಿಗಳನ್ನು ಸುತ್ತುವರೆದು ಜೈಶ್ರೀರಾಮ್ ಕೂಗಿದವರ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಮಾತ್ರ ಪೊಲೀಸರು ಲಾಠಿ ಚಾರ್ಜ್‌ನಲ್ಲಿ ಗುರಿ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಜಾಮಿಯಾದ ವಿದ್ಯಾರ್ಥಿಗಳಲ್ಲ ಮತ್ತು ನಿಗದಿತ ಸಮಯ ಮೀರಿದ ನಂತರವೂ ಅವರು ಸ್ಥಳ ಖಾಲಿ ಮಾಡಲು ನಿರಾಕರಿಸಿದರು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಗಳು ”ಪ್ಯಾಲೆಸ್ತೀನ್ ಜಿಂದಾಬಾದ್” ಮತ್ತು “ಅಲ್ಲಾಹು ಅಕ್ಬರ್” ಘೋಷಣೆಗಳನ್ನು ಕೂಗಿದ್ದಾರೆ.

“ಹಬ್ಬದ ನೆಪದಲ್ಲಿ ಈ ಜನರು ತಮ್ಮ ಸ್ಥಳೀಯ ಗೂಂಡಾಗಳ ಗುಂಪಿನೊಂದಿಗೆ ಬಂದಿದ್ದರು. ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ನಿಂತು ‘ಜೈ ಶ್ರೀ ರಾಮ್’ ಎಂದು ಕೋಮುವಾದಿ ಘೋಷಣೆಗಳನ್ನು ಕೂಗಲು ಪ್ರಯತ್ನಿಸಿದ್ದು, ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಎಸ್ಎಫ್ಐ ಹೇಳಿಕೆಯಲ್ಲಿ ಹೇಳಿಕೊಂಡಿದೆ.

“ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ಅವರ ನಡವಳಿಕೆಯನ್ನು ವಿರೋಧಿಸಿದ್ದಾರೆ. ಈ ವೇಳೆ ಹಿಂದುತ್ವ ಸಂಘಟನೆಯ ರಾಜ್ಯ ನಾಯಕರ ನೇತೃತ್ವದ ಗೂಂಡಾಗಳು ವಿದ್ಯಾರ್ಥಿಗಳ ಮೇಲೆ ಕ್ರೂರ ಹಿಂಸಾಚಾರ ನಡೆಸಿದ್ದಾರೆ. ಈ ಹಂತದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಭಾರೀ ಲಾಠಿ ಚಾರ್ಜ್ ನಡೆಸಿದ್ದಾರೆ. ಅವರ ಈ ಕಾರ್ಯಕ್ರಮ ಸಾಮಾನ್ಯ ವಿದ್ಯಾರ್ಥಿಗಳನ್ನು ನೋಯಿಸುವ ಮತ್ತು ಹೆದರಿಸುವಲ್ಲಿ ಕೊನೆಗೊಂಡಿತು. ಆದರೆ ನಿಜವಾದ ಗೂಂಡಾಗಳ ಮೇಲೆ ಪೊಲೀಸರು ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

“ನಾವು ನಡೆಸುವ ಯಾವುದೇ ಕಾರ್ಯಕ್ರಮಗಳ ಬಗ್ಗೆ ವಿಶ್ವವಿದ್ಯಾಲಯದ ಆಡಳಿತ ಸಮಸ್ಯೆ ಮುಂದಿಡುತ್ತದೆ. ಅವರು ಯಾವಾಗಲೂ ನಮ್ಮನ್ನು ಬೆದರಿಸಲು ಪ್ರಯತ್ನಿಸುತ್ತಾರೆ. ನಮ್ಮ ಕಲಿಕೆಗೆ ಅಡ್ಡಿಯಾಗುತ್ತದೆ ಮತ್ತು ನಮ್ಮ ಹೆಸರನ್ನು ಪೊಲೀಸರಿಗೆ ನೀಡುತ್ತೇವೆ ಎಂದು ಬೆದರಿಸುತ್ತಾರೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

“ಇದೇ ವಿಶ್ವವಿದ್ಯಾಲಯದ ಆಡಳಿತ ಆರ್‌ಎಸ್‌ಎಸ್ ಗೂಂಡಾಗಳನ್ನು ಕ್ಯಾಂಪಸ್‌ನೊಳಗೆ ನುಸುಳಲು ಅನುಮತಿ ನೀಡುತ್ತದೆ. ಅವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವ ಮೂಲಕ ಅವ್ಯವಸ್ಥೆ ಸೃಷ್ಟಿ ಮಾಡುತ್ತಾರೆ. ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಗಳನ್ನು ಗುರಿಯಾಗಿಸಿಕೊಂಡು ಅವರು ಸಮಸ್ಯೆ ಸೃಷ್ಟಿಸುತ್ತಾರೆ. ನಂತರ ನಡೆದ ಎಲ್ಲಾ ಘಟನೆ ಈ ಕ್ರಿಯೆಗಳ ಪರಿಣಾಮವಾಗಿದೆ” ಎಂದು ಅವರು ಹೇಳಿದ್ದಾರೆ.

2019ರ ಡಿಸೆಂಬರ್‌ನಲ್ಲಿ CAA ವಿರೋಧಿ ಆಂದೋಲನದ ನಂತರ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ವಿಶ್ವವಿದ್ಯಾನಿಲಯದಲ್ಲಿನ ಎಲ್ಲಾ ರೀತಿಯ ಅಭಿವ್ಯಕ್ತಿಗಳನ್ನು ಮೌನವಾಗಿಸುವ ಮತ್ತು ಪೋಲೀಸರನ್ನು ಮುಂದಿಡುವ ಆಡಳಿತ ಮಂಡಳಿ, ಹಿಂದುತ್ವದ ಆಡಳಿತದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

“ಸಾಮಾನ್ಯ ವಿದ್ಯಾರ್ಥಿಗಳಿಗೆ ಓದುವ ವಲಯಗಳನ್ನು ನಡೆಸುವ ಸ್ವಾತಂತ್ರ್ಯವೂ ಇಲ್ಲದಿರುವಾಗ, ಆಡಳಿತ ಮಂಡಳಿ ಇಂತಹ ಕಾರ್ಯಕ್ರಮಗಳಿಗೆ ಹೇಗೆ ಮತ್ತು ಏಕೆ ಅನುಮೋದಿಸಿದ್ದಾರೆ ಎಂಬುದಕ್ಕೆ ಅವರೇ ಉತ್ತರ ನೀಡಬೇಕು” ಎಂದು ಎಸ್‌ಎಫ್‌ಐ ಹೇಳಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ.

ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...