Homeಮುಖಪುಟಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಎಬಿವಿಪಿ ದುಷ್ಕರ್ಮಿಗಳು!

ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಎಬಿವಿಪಿ ದುಷ್ಕರ್ಮಿಗಳು!

- Advertisement -
- Advertisement -

ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಎಬಿವಿಪಿ (ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್) ಸಂಯೋಜಿತ ಸಂಘಟನೆಯಾದ ರಾಷ್ಟ್ರೀಯ ಕಲಾ ಮಂಚ್‌ ಆಯೋಜಿಸಿದ್ದ ದೀಪಾವಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಸುತ್ತುವರೆದು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ವಿಶ್ವವಿದ್ಯಾಲಯದಲ್ಲಿ ಗಲಾಟೆ ನಡೆದಿದೆ. ಮುಸ್ಲಿಂ ವಿದ್ಯಾರ್ಥಿನಿಯರ

ಗಲಾಟೆ ವೇಳೇ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯನ್ನು ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ, ಮತ್ತು ಎನ್‌ಎಸ್‌ಯುಐನ ಜೆಎಂಐ ಘಟಕವು ಖಂಡಿಸಿದ್ದು, ಹಿಂದುತ್ವ ವಿದ್ಯಾರ್ಥಿ ಘಟಕವು ಕ್ಯಾಂಪಸ್‌ನಲ್ಲಿ ಶಾಂತಿಗೆ ಭಂಗ ತಂದಿದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘರ್ಷಣೆಗೆ ಕಾರಣವಾದ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಕ್ಕಾಗಿ ವಿಶ್ವವಿದ್ಯಾಲಯದ ಆಡಳಿತವನ್ನು ಎಸ್‌ಎಫ್‌ಐ ತರಾಟೆಗೆ ತೆಗೆದುಕೊಂಡಿದೆ. ‘ಜ್ಯೋತಿರ್ಮಯ 2024’ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಹಿರಿಯ ಆರ್‌ಎಸ್‌ಎಸ್ ಮತ್ತು ಎಬಿವಿಪಿ ನಾಯಕರು ಸೇರಿದಂತೆ ಕ್ಯಾಂಪಸ್‌ನ ಹೊರಗಿನ ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಮುಸ್ಲಿಂ ವಿದ್ಯಾರ್ಥಿಗಳನ್ನು ಸುತ್ತುವರೆದು ಜೈಶ್ರೀರಾಮ್ ಕೂಗಿದವರ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಮಾತ್ರ ಪೊಲೀಸರು ಲಾಠಿ ಚಾರ್ಜ್‌ನಲ್ಲಿ ಗುರಿ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಜಾಮಿಯಾದ ವಿದ್ಯಾರ್ಥಿಗಳಲ್ಲ ಮತ್ತು ನಿಗದಿತ ಸಮಯ ಮೀರಿದ ನಂತರವೂ ಅವರು ಸ್ಥಳ ಖಾಲಿ ಮಾಡಲು ನಿರಾಕರಿಸಿದರು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಗಳು ”ಪ್ಯಾಲೆಸ್ತೀನ್ ಜಿಂದಾಬಾದ್” ಮತ್ತು “ಅಲ್ಲಾಹು ಅಕ್ಬರ್” ಘೋಷಣೆಗಳನ್ನು ಕೂಗಿದ್ದಾರೆ.

“ಹಬ್ಬದ ನೆಪದಲ್ಲಿ ಈ ಜನರು ತಮ್ಮ ಸ್ಥಳೀಯ ಗೂಂಡಾಗಳ ಗುಂಪಿನೊಂದಿಗೆ ಬಂದಿದ್ದರು. ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ನಿಂತು ‘ಜೈ ಶ್ರೀ ರಾಮ್’ ಎಂದು ಕೋಮುವಾದಿ ಘೋಷಣೆಗಳನ್ನು ಕೂಗಲು ಪ್ರಯತ್ನಿಸಿದ್ದು, ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಎಸ್ಎಫ್ಐ ಹೇಳಿಕೆಯಲ್ಲಿ ಹೇಳಿಕೊಂಡಿದೆ.

“ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ಅವರ ನಡವಳಿಕೆಯನ್ನು ವಿರೋಧಿಸಿದ್ದಾರೆ. ಈ ವೇಳೆ ಹಿಂದುತ್ವ ಸಂಘಟನೆಯ ರಾಜ್ಯ ನಾಯಕರ ನೇತೃತ್ವದ ಗೂಂಡಾಗಳು ವಿದ್ಯಾರ್ಥಿಗಳ ಮೇಲೆ ಕ್ರೂರ ಹಿಂಸಾಚಾರ ನಡೆಸಿದ್ದಾರೆ. ಈ ಹಂತದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಭಾರೀ ಲಾಠಿ ಚಾರ್ಜ್ ನಡೆಸಿದ್ದಾರೆ. ಅವರ ಈ ಕಾರ್ಯಕ್ರಮ ಸಾಮಾನ್ಯ ವಿದ್ಯಾರ್ಥಿಗಳನ್ನು ನೋಯಿಸುವ ಮತ್ತು ಹೆದರಿಸುವಲ್ಲಿ ಕೊನೆಗೊಂಡಿತು. ಆದರೆ ನಿಜವಾದ ಗೂಂಡಾಗಳ ಮೇಲೆ ಪೊಲೀಸರು ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

“ನಾವು ನಡೆಸುವ ಯಾವುದೇ ಕಾರ್ಯಕ್ರಮಗಳ ಬಗ್ಗೆ ವಿಶ್ವವಿದ್ಯಾಲಯದ ಆಡಳಿತ ಸಮಸ್ಯೆ ಮುಂದಿಡುತ್ತದೆ. ಅವರು ಯಾವಾಗಲೂ ನಮ್ಮನ್ನು ಬೆದರಿಸಲು ಪ್ರಯತ್ನಿಸುತ್ತಾರೆ. ನಮ್ಮ ಕಲಿಕೆಗೆ ಅಡ್ಡಿಯಾಗುತ್ತದೆ ಮತ್ತು ನಮ್ಮ ಹೆಸರನ್ನು ಪೊಲೀಸರಿಗೆ ನೀಡುತ್ತೇವೆ ಎಂದು ಬೆದರಿಸುತ್ತಾರೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

“ಇದೇ ವಿಶ್ವವಿದ್ಯಾಲಯದ ಆಡಳಿತ ಆರ್‌ಎಸ್‌ಎಸ್ ಗೂಂಡಾಗಳನ್ನು ಕ್ಯಾಂಪಸ್‌ನೊಳಗೆ ನುಸುಳಲು ಅನುಮತಿ ನೀಡುತ್ತದೆ. ಅವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವ ಮೂಲಕ ಅವ್ಯವಸ್ಥೆ ಸೃಷ್ಟಿ ಮಾಡುತ್ತಾರೆ. ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಗಳನ್ನು ಗುರಿಯಾಗಿಸಿಕೊಂಡು ಅವರು ಸಮಸ್ಯೆ ಸೃಷ್ಟಿಸುತ್ತಾರೆ. ನಂತರ ನಡೆದ ಎಲ್ಲಾ ಘಟನೆ ಈ ಕ್ರಿಯೆಗಳ ಪರಿಣಾಮವಾಗಿದೆ” ಎಂದು ಅವರು ಹೇಳಿದ್ದಾರೆ.

2019ರ ಡಿಸೆಂಬರ್‌ನಲ್ಲಿ CAA ವಿರೋಧಿ ಆಂದೋಲನದ ನಂತರ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ವಿಶ್ವವಿದ್ಯಾನಿಲಯದಲ್ಲಿನ ಎಲ್ಲಾ ರೀತಿಯ ಅಭಿವ್ಯಕ್ತಿಗಳನ್ನು ಮೌನವಾಗಿಸುವ ಮತ್ತು ಪೋಲೀಸರನ್ನು ಮುಂದಿಡುವ ಆಡಳಿತ ಮಂಡಳಿ, ಹಿಂದುತ್ವದ ಆಡಳಿತದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

“ಸಾಮಾನ್ಯ ವಿದ್ಯಾರ್ಥಿಗಳಿಗೆ ಓದುವ ವಲಯಗಳನ್ನು ನಡೆಸುವ ಸ್ವಾತಂತ್ರ್ಯವೂ ಇಲ್ಲದಿರುವಾಗ, ಆಡಳಿತ ಮಂಡಳಿ ಇಂತಹ ಕಾರ್ಯಕ್ರಮಗಳಿಗೆ ಹೇಗೆ ಮತ್ತು ಏಕೆ ಅನುಮೋದಿಸಿದ್ದಾರೆ ಎಂಬುದಕ್ಕೆ ಅವರೇ ಉತ್ತರ ನೀಡಬೇಕು” ಎಂದು ಎಸ್‌ಎಫ್‌ಐ ಹೇಳಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ.

ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...