Homeಮುಖಪುಟಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಎಬಿವಿಪಿ ದುಷ್ಕರ್ಮಿಗಳು!

ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಎಬಿವಿಪಿ ದುಷ್ಕರ್ಮಿಗಳು!

- Advertisement -
- Advertisement -

ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಎಬಿವಿಪಿ (ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್) ಸಂಯೋಜಿತ ಸಂಘಟನೆಯಾದ ರಾಷ್ಟ್ರೀಯ ಕಲಾ ಮಂಚ್‌ ಆಯೋಜಿಸಿದ್ದ ದೀಪಾವಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಸುತ್ತುವರೆದು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ವಿಶ್ವವಿದ್ಯಾಲಯದಲ್ಲಿ ಗಲಾಟೆ ನಡೆದಿದೆ. ಮುಸ್ಲಿಂ ವಿದ್ಯಾರ್ಥಿನಿಯರ

ಗಲಾಟೆ ವೇಳೇ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯನ್ನು ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ, ಮತ್ತು ಎನ್‌ಎಸ್‌ಯುಐನ ಜೆಎಂಐ ಘಟಕವು ಖಂಡಿಸಿದ್ದು, ಹಿಂದುತ್ವ ವಿದ್ಯಾರ್ಥಿ ಘಟಕವು ಕ್ಯಾಂಪಸ್‌ನಲ್ಲಿ ಶಾಂತಿಗೆ ಭಂಗ ತಂದಿದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘರ್ಷಣೆಗೆ ಕಾರಣವಾದ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಕ್ಕಾಗಿ ವಿಶ್ವವಿದ್ಯಾಲಯದ ಆಡಳಿತವನ್ನು ಎಸ್‌ಎಫ್‌ಐ ತರಾಟೆಗೆ ತೆಗೆದುಕೊಂಡಿದೆ. ‘ಜ್ಯೋತಿರ್ಮಯ 2024’ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಹಿರಿಯ ಆರ್‌ಎಸ್‌ಎಸ್ ಮತ್ತು ಎಬಿವಿಪಿ ನಾಯಕರು ಸೇರಿದಂತೆ ಕ್ಯಾಂಪಸ್‌ನ ಹೊರಗಿನ ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಮುಸ್ಲಿಂ ವಿದ್ಯಾರ್ಥಿಗಳನ್ನು ಸುತ್ತುವರೆದು ಜೈಶ್ರೀರಾಮ್ ಕೂಗಿದವರ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಮಾತ್ರ ಪೊಲೀಸರು ಲಾಠಿ ಚಾರ್ಜ್‌ನಲ್ಲಿ ಗುರಿ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಜಾಮಿಯಾದ ವಿದ್ಯಾರ್ಥಿಗಳಲ್ಲ ಮತ್ತು ನಿಗದಿತ ಸಮಯ ಮೀರಿದ ನಂತರವೂ ಅವರು ಸ್ಥಳ ಖಾಲಿ ಮಾಡಲು ನಿರಾಕರಿಸಿದರು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಗಳು ”ಪ್ಯಾಲೆಸ್ತೀನ್ ಜಿಂದಾಬಾದ್” ಮತ್ತು “ಅಲ್ಲಾಹು ಅಕ್ಬರ್” ಘೋಷಣೆಗಳನ್ನು ಕೂಗಿದ್ದಾರೆ.

“ಹಬ್ಬದ ನೆಪದಲ್ಲಿ ಈ ಜನರು ತಮ್ಮ ಸ್ಥಳೀಯ ಗೂಂಡಾಗಳ ಗುಂಪಿನೊಂದಿಗೆ ಬಂದಿದ್ದರು. ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆ ನಿಂತು ‘ಜೈ ಶ್ರೀ ರಾಮ್’ ಎಂದು ಕೋಮುವಾದಿ ಘೋಷಣೆಗಳನ್ನು ಕೂಗಲು ಪ್ರಯತ್ನಿಸಿದ್ದು, ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಎಸ್ಎಫ್ಐ ಹೇಳಿಕೆಯಲ್ಲಿ ಹೇಳಿಕೊಂಡಿದೆ.

“ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ಅವರ ನಡವಳಿಕೆಯನ್ನು ವಿರೋಧಿಸಿದ್ದಾರೆ. ಈ ವೇಳೆ ಹಿಂದುತ್ವ ಸಂಘಟನೆಯ ರಾಜ್ಯ ನಾಯಕರ ನೇತೃತ್ವದ ಗೂಂಡಾಗಳು ವಿದ್ಯಾರ್ಥಿಗಳ ಮೇಲೆ ಕ್ರೂರ ಹಿಂಸಾಚಾರ ನಡೆಸಿದ್ದಾರೆ. ಈ ಹಂತದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಭಾರೀ ಲಾಠಿ ಚಾರ್ಜ್ ನಡೆಸಿದ್ದಾರೆ. ಅವರ ಈ ಕಾರ್ಯಕ್ರಮ ಸಾಮಾನ್ಯ ವಿದ್ಯಾರ್ಥಿಗಳನ್ನು ನೋಯಿಸುವ ಮತ್ತು ಹೆದರಿಸುವಲ್ಲಿ ಕೊನೆಗೊಂಡಿತು. ಆದರೆ ನಿಜವಾದ ಗೂಂಡಾಗಳ ಮೇಲೆ ಪೊಲೀಸರು ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

“ನಾವು ನಡೆಸುವ ಯಾವುದೇ ಕಾರ್ಯಕ್ರಮಗಳ ಬಗ್ಗೆ ವಿಶ್ವವಿದ್ಯಾಲಯದ ಆಡಳಿತ ಸಮಸ್ಯೆ ಮುಂದಿಡುತ್ತದೆ. ಅವರು ಯಾವಾಗಲೂ ನಮ್ಮನ್ನು ಬೆದರಿಸಲು ಪ್ರಯತ್ನಿಸುತ್ತಾರೆ. ನಮ್ಮ ಕಲಿಕೆಗೆ ಅಡ್ಡಿಯಾಗುತ್ತದೆ ಮತ್ತು ನಮ್ಮ ಹೆಸರನ್ನು ಪೊಲೀಸರಿಗೆ ನೀಡುತ್ತೇವೆ ಎಂದು ಬೆದರಿಸುತ್ತಾರೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

“ಇದೇ ವಿಶ್ವವಿದ್ಯಾಲಯದ ಆಡಳಿತ ಆರ್‌ಎಸ್‌ಎಸ್ ಗೂಂಡಾಗಳನ್ನು ಕ್ಯಾಂಪಸ್‌ನೊಳಗೆ ನುಸುಳಲು ಅನುಮತಿ ನೀಡುತ್ತದೆ. ಅವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವ ಮೂಲಕ ಅವ್ಯವಸ್ಥೆ ಸೃಷ್ಟಿ ಮಾಡುತ್ತಾರೆ. ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಗಳನ್ನು ಗುರಿಯಾಗಿಸಿಕೊಂಡು ಅವರು ಸಮಸ್ಯೆ ಸೃಷ್ಟಿಸುತ್ತಾರೆ. ನಂತರ ನಡೆದ ಎಲ್ಲಾ ಘಟನೆ ಈ ಕ್ರಿಯೆಗಳ ಪರಿಣಾಮವಾಗಿದೆ” ಎಂದು ಅವರು ಹೇಳಿದ್ದಾರೆ.

2019ರ ಡಿಸೆಂಬರ್‌ನಲ್ಲಿ CAA ವಿರೋಧಿ ಆಂದೋಲನದ ನಂತರ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ವಿಶ್ವವಿದ್ಯಾನಿಲಯದಲ್ಲಿನ ಎಲ್ಲಾ ರೀತಿಯ ಅಭಿವ್ಯಕ್ತಿಗಳನ್ನು ಮೌನವಾಗಿಸುವ ಮತ್ತು ಪೋಲೀಸರನ್ನು ಮುಂದಿಡುವ ಆಡಳಿತ ಮಂಡಳಿ, ಹಿಂದುತ್ವದ ಆಡಳಿತದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

“ಸಾಮಾನ್ಯ ವಿದ್ಯಾರ್ಥಿಗಳಿಗೆ ಓದುವ ವಲಯಗಳನ್ನು ನಡೆಸುವ ಸ್ವಾತಂತ್ರ್ಯವೂ ಇಲ್ಲದಿರುವಾಗ, ಆಡಳಿತ ಮಂಡಳಿ ಇಂತಹ ಕಾರ್ಯಕ್ರಮಗಳಿಗೆ ಹೇಗೆ ಮತ್ತು ಏಕೆ ಅನುಮೋದಿಸಿದ್ದಾರೆ ಎಂಬುದಕ್ಕೆ ಅವರೇ ಉತ್ತರ ನೀಡಬೇಕು” ಎಂದು ಎಸ್‌ಎಫ್‌ಐ ಹೇಳಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ.

ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....