Homeಮುಖಪುಟದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

ದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

- Advertisement -
- Advertisement -

ಭಿನ್ನ ಧರ್ಮದ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿಸಿ ಮತೀಯ ಗೂಂಡಾಗಿರಿ ನಡೆಸಿರುವ ಪ್ರಕರಣದ ದಾವಣಗೆರೆಯಲ್ಲಿ ವರದಿಯಾಗಿದೆ. ದಲಿತ ಯುವತಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಜುಲೈ 9 ರ ಭಾನುವಾರ ಈ ಘಟನೆ ನಡೆದಿದೆ. ದೊಡ್ಡೇಶ್ ಮತ್ತು ಲಿಂಗರಾಜು ಎಂಬ ಯುವಕರೇ ಆರೋಪಿಗಳಾಗಿದ್ದು ಸದ್ಯ ಬಂಧನದಲ್ಲಿದ್ದಾರೆ. ದೊಡ್ಡೇಶ್ ಹಿಂದುತ್ವ ಸಂಘಟನೆಗಳ ಜೊತೆ ಸಂಬಂಧವಿಟ್ಟುಕೊಂಡಿದ್ದರ ಜೊತೆಗೆ ಕನ್ನಡ ಅಭಿಮಾನಿಗಳ ಸಂಘದವನಾದರೆ ಲಿಂಗರಾಜು ಕನ್ನಡಪರ ಹೋರಾಟಗಾರ ಎಂದು ಬಿಂಬಿಸಿಕೊಂಡಿದ್ದ ಎನ್ನಲಾಗಿದೆ.

ಅಂತಿಮ ವರ್ಷದ ಪದವಿ ಓದುತ್ತಿರುವ ದಲಿತ ಯುವತಿಯೊಬ್ಬಳು ಮೊಹಮ್ಮದ್ ಸುಭಾನಿ ಮತ್ತು ಇಬ್ರಾಹಿಂ ಎಂಬ ತನ್ನ ಇಬ್ಬರು ಮುಸ್ಲಿಂ ಸ್ನೇಹಿತರೊಂದಿಗೆ ನಗರದ ಗೀತಾಂಜಲಿ ಸಿನಿಮಾ ಥಿಯೇಟರ್‌ಗೆ ಹೋಗಿದ್ದಾಗ ಅವರನ್ನು ಹಿಂಬಾಲಿಸಿದ ಆರೋಪಿಗಳು ಅವಾಚ್ಯ ಪದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ತಳ್ಳಾಡಿದ್ದಾರೆ. ಅವರ ಜೊತೆಗಿದ್ದ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಆ ಘಟನೆಯನ್ನು ಫೇಸ್‌ಬುಕ್ ಲೈವ್ ಮಾಡಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನಂತರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಕೆಟಿಜೆ ನಗರ ಪೊಲೀಸರು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 341, 323, 504, 505 (2) ಮತ್ತು SC/ST ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತ ಯುವತಿಯಿಂದ ದೂರನ್ನು ಸ್ವೀಕರಿಸಿದ ಕೂಡಲೇ ನಾವು ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಪ್ರಸಾರವಾದ ವೀಡಿಯೊದಲ್ಲಿ ಅಪರಾಧ ನಡೆದಿರುವ ಪುರಾವೆಯಿದೆ. ಆರೋಪಿಗಳು ವಿದ್ಯಾರ್ಥಿಗಳನ್ನು ಥಳಿಸಿ ನೈತಿಕ ಪೊಲೀಸ್‌ಗಿರಿ ಮಾಡಿದ್ದಾರೆ. ಅವರು ಈ ಮುಂಚೆ ಯಾವುದಾದರೂ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದೇವೆ ಎಂದು ದಾವಣಗೆರೆ ಎಸ್ಪಿ ಡಾ ಅರುಣ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನೈತಿಕ ಪೊಲೀಸ್ ಗಿರಿಯನ್ನು ತಡೆಯಲು ಇಲಾಖೆ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಜೂನ್ 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೈತಿಕ ಪೊಲೀಸ್ ಗಿರಿಯನ್ನು ತಡೆಯುವಂತೆ ಸೂಚನೆ ನೀಡಿದ್ದರು. ರಾಜ್ಯ ಸರ್ಕಾರವು ಕರಾವಳಿಯಲ್ಲಿ ಆಂಟಿ ಕಮ್ಯುನಲ್ ವಿಂಗ್ ಅನ್ನು ರಚಿಸಿದ್ದು, ಮತೀಯ ಗೂಂಡಾಗಿರಿಯ ವಿರುದ್ಧ ಹೋರಾಡುವುದಾಗಿ ಹೇಳಿಕೊಂಡಿದೆ. ಆದರೂ ರಾಜ್ಯದ ನಾನಾ ಭಾಗಗಳಲ್ಲಿ ಈ ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇವುಗಳನ್ನು ನಿಗ್ರಹಿಸಲು ಸರ್ಕಾರ ಮತ್ತಷ್ಟು ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ : ಟಿ.ನರಸೀಪುರ: ಗುಂಪು ಘರ್ಷಣೆಯಲ್ಲಿ ಯುವಕನ ಕೊಲೆ – ಇಬ್ಬರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...