Homeಮುಖಪುಟದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

ದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

- Advertisement -
- Advertisement -

ಭಿನ್ನ ಧರ್ಮದ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿಸಿ ಮತೀಯ ಗೂಂಡಾಗಿರಿ ನಡೆಸಿರುವ ಪ್ರಕರಣದ ದಾವಣಗೆರೆಯಲ್ಲಿ ವರದಿಯಾಗಿದೆ. ದಲಿತ ಯುವತಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಜುಲೈ 9 ರ ಭಾನುವಾರ ಈ ಘಟನೆ ನಡೆದಿದೆ. ದೊಡ್ಡೇಶ್ ಮತ್ತು ಲಿಂಗರಾಜು ಎಂಬ ಯುವಕರೇ ಆರೋಪಿಗಳಾಗಿದ್ದು ಸದ್ಯ ಬಂಧನದಲ್ಲಿದ್ದಾರೆ. ದೊಡ್ಡೇಶ್ ಹಿಂದುತ್ವ ಸಂಘಟನೆಗಳ ಜೊತೆ ಸಂಬಂಧವಿಟ್ಟುಕೊಂಡಿದ್ದರ ಜೊತೆಗೆ ಕನ್ನಡ ಅಭಿಮಾನಿಗಳ ಸಂಘದವನಾದರೆ ಲಿಂಗರಾಜು ಕನ್ನಡಪರ ಹೋರಾಟಗಾರ ಎಂದು ಬಿಂಬಿಸಿಕೊಂಡಿದ್ದ ಎನ್ನಲಾಗಿದೆ.

ಅಂತಿಮ ವರ್ಷದ ಪದವಿ ಓದುತ್ತಿರುವ ದಲಿತ ಯುವತಿಯೊಬ್ಬಳು ಮೊಹಮ್ಮದ್ ಸುಭಾನಿ ಮತ್ತು ಇಬ್ರಾಹಿಂ ಎಂಬ ತನ್ನ ಇಬ್ಬರು ಮುಸ್ಲಿಂ ಸ್ನೇಹಿತರೊಂದಿಗೆ ನಗರದ ಗೀತಾಂಜಲಿ ಸಿನಿಮಾ ಥಿಯೇಟರ್‌ಗೆ ಹೋಗಿದ್ದಾಗ ಅವರನ್ನು ಹಿಂಬಾಲಿಸಿದ ಆರೋಪಿಗಳು ಅವಾಚ್ಯ ಪದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ತಳ್ಳಾಡಿದ್ದಾರೆ. ಅವರ ಜೊತೆಗಿದ್ದ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಆ ಘಟನೆಯನ್ನು ಫೇಸ್‌ಬುಕ್ ಲೈವ್ ಮಾಡಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನಂತರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಕೆಟಿಜೆ ನಗರ ಪೊಲೀಸರು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 341, 323, 504, 505 (2) ಮತ್ತು SC/ST ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತ ಯುವತಿಯಿಂದ ದೂರನ್ನು ಸ್ವೀಕರಿಸಿದ ಕೂಡಲೇ ನಾವು ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಪ್ರಸಾರವಾದ ವೀಡಿಯೊದಲ್ಲಿ ಅಪರಾಧ ನಡೆದಿರುವ ಪುರಾವೆಯಿದೆ. ಆರೋಪಿಗಳು ವಿದ್ಯಾರ್ಥಿಗಳನ್ನು ಥಳಿಸಿ ನೈತಿಕ ಪೊಲೀಸ್‌ಗಿರಿ ಮಾಡಿದ್ದಾರೆ. ಅವರು ಈ ಮುಂಚೆ ಯಾವುದಾದರೂ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದೇವೆ ಎಂದು ದಾವಣಗೆರೆ ಎಸ್ಪಿ ಡಾ ಅರುಣ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನೈತಿಕ ಪೊಲೀಸ್ ಗಿರಿಯನ್ನು ತಡೆಯಲು ಇಲಾಖೆ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಜೂನ್ 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೈತಿಕ ಪೊಲೀಸ್ ಗಿರಿಯನ್ನು ತಡೆಯುವಂತೆ ಸೂಚನೆ ನೀಡಿದ್ದರು. ರಾಜ್ಯ ಸರ್ಕಾರವು ಕರಾವಳಿಯಲ್ಲಿ ಆಂಟಿ ಕಮ್ಯುನಲ್ ವಿಂಗ್ ಅನ್ನು ರಚಿಸಿದ್ದು, ಮತೀಯ ಗೂಂಡಾಗಿರಿಯ ವಿರುದ್ಧ ಹೋರಾಡುವುದಾಗಿ ಹೇಳಿಕೊಂಡಿದೆ. ಆದರೂ ರಾಜ್ಯದ ನಾನಾ ಭಾಗಗಳಲ್ಲಿ ಈ ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇವುಗಳನ್ನು ನಿಗ್ರಹಿಸಲು ಸರ್ಕಾರ ಮತ್ತಷ್ಟು ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ : ಟಿ.ನರಸೀಪುರ: ಗುಂಪು ಘರ್ಷಣೆಯಲ್ಲಿ ಯುವಕನ ಕೊಲೆ – ಇಬ್ಬರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...