Homeಮುಖಪುಟಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!

ಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!

- Advertisement -
- Advertisement -

ಬಿಜೆಪಿ ನಾಯಕ ರವಿ ನೇಗಿ ದೆಹಲಿಯಲ್ಲಿ ಅಂಗಡಿ ನಡೆಸುತ್ತಿರುವ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡುತ್ತಿರುವ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ತಿಂಗಳ ಆರಂಭದಲ್ಲಿ ಕೂಡಾ ಅವರು ಅಂಗಡಿ ನಡೆಸುವ ಮುಸ್ಲಿಮರಿಗೆ ಬೆದರಿಕೆ ಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹುಟ್ಟು ಹಾಕಿತ್ತು. ಮುಸ್ಲಿಂ ವ್ಯಾಪಾರಿಗೆ

ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜ್ಯೂಸ್ ಸೆಂಟರ್ ಮಾಲೀಕ ನಸ್ರುಲ್ಲಾ ಖಾನ್ ಅವರ ಪೇಟಿಎಂ ಅನ್ನು ಪರಿಶೀಲಿಸುವ ಮೂಲಕ ಕಿರುಕುಳ ನೀಡುವುದು ದಾಖಲಾಗಿದೆ. ಅಂಗಡಿ ಮುಂದೆ ನಿಂತು ಪೇಟಿಎಂ ಸ್ಕ್ಯಾನರ್ ಅನ್ನು ಸ್ಕ್ಯಾನ್ ಮಾಡುವ ಅವರು ಅದರಲ್ಲಿ ಅಂಗಡಿಯ ಮಾಲಿಕನ ಹೆಸರನ್ನು ಓದುತ್ತಾರೆ. ಜೊತೆಗೆ ಈ ಹೆಸರನ್ನು ಅಂಗಡಿಯ ಶೋಕೇಶ್ ಅಲ್ಲಿ ಹಾಕುವಂತೆ ಅವರನ್ನು ಬೆದರಿಸುವುದು ವಿಡಿಯೊದಲ್ಲಿ ದಾಖಲಿಸುತ್ತಾರೆ. ಮುಸ್ಲಿಂ ವ್ಯಾಪಾರಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವೇಳೆ ಅಂಗಡಿಯ ಮಾಲೀಕ ಹೆಸರು ಅಂಗಡಿಯ ಬೋರ್ಡ್ ಅಲ್ಲಿ ಮೇಲೆ ಬರೆದಿರುವುದಾಗಿ ಹೇಳಿದ್ದು, ಅದಕ್ಕೆ ಒಪ್ಪದ ಅವರು ಅಂಗಡಿಯ ಮುಂದಿನ ಶೋಕೇಶ್ ಅಲ್ಲಿ ಕೂಡಾ ಬರೆಯುವಂತೆ ಬೆದರಿಸುತ್ತಾರೆ. ಜನರಿಗೆ ಈ ಅಂಗಡಿ ಯಾರದ್ದು ಎಂದು ಗೊತ್ತಾಗುವಂತೆ ಇಲ್ಲಿ ಬೋರ್ಡ್ ಹಾಕಿ ಎಂದು ಅವರು ಹೇಳಿದ ನಂತರ ಅವರು, ಅಂಗಡಿಯ ಮಾಲೀಕನಿಗೆ ಲೈಸನ್ಸ್ ಇದೆಯಾ ಎಂದು ಲೈಸನ್ಸ್ ಕೂಡಾ ಕೇಳುತ್ತಾರೆ.

ರವಿ ನೇಗಿ 2020 ದೆಹಲಿ ಚುನಾವಣೆಯಲ್ಲಿ ದಹೆಲಿ ಉಪ ಮುಖ್ಯಮಂತ್ರಿಯಾಗಿದ್ದ ಮನಿಷ್ ಸಿಸೋಡಿಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಪ್ರಸ್ತುತ ಅವರು ಬಿಜೆಪಿಯಿಂದ ಕೌನ್ಸಿಲರ್ ಆಗಿದ್ದಾರೆ. ಅದಾಗ್ಯೂ, ಅವರ ಈ ಕೃತ್ಯದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಲೈಸನ್ಸ್ ಮತ್ತು ಹೆಸರು ಗೋಚರಿಸುವಂತೆ ಬರೆಯುವಂತೆ ಹೇಳಲು ನೀವು ಯಾರು ಎಂದು ಜನರು ಪ್ರಶ್ನಿಸಿದ್ದಾರೆ.

ಇತ್ತಚೆಗೆ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಅಂಗಡಿ ಮಾಲಿಕರ ಹೆಸರು ಗೋಚರಿಸುವಂತೆ ಬರೆಯುವಂತೆ ಅಲ್ಲಿನ ಆಡಳಿತ ವ್ಯಪಾರಿಗಳಿಗೆ ಕೇಳಿಕೊಂಡಿತ್ತು. ಧಾರ್ಮಿಕ ಗುರುತುಗಳ ಸುತ್ತ ನಡೆಯುತ್ತಿರುವ ರಾಜಕೀಯ ಚರ್ಚೆ ಆತಂಕಕಾರಿ ಘಟ್ಟ ತಲುಪಿದೆ.

ಇದನ್ನೂ ಓದಿ: ‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...