Homeಮುಖಪುಟಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!

ಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!

- Advertisement -
- Advertisement -

ಬಿಜೆಪಿ ನಾಯಕ ರವಿ ನೇಗಿ ದೆಹಲಿಯಲ್ಲಿ ಅಂಗಡಿ ನಡೆಸುತ್ತಿರುವ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡುತ್ತಿರುವ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ತಿಂಗಳ ಆರಂಭದಲ್ಲಿ ಕೂಡಾ ಅವರು ಅಂಗಡಿ ನಡೆಸುವ ಮುಸ್ಲಿಮರಿಗೆ ಬೆದರಿಕೆ ಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹುಟ್ಟು ಹಾಕಿತ್ತು. ಮುಸ್ಲಿಂ ವ್ಯಾಪಾರಿಗೆ

ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜ್ಯೂಸ್ ಸೆಂಟರ್ ಮಾಲೀಕ ನಸ್ರುಲ್ಲಾ ಖಾನ್ ಅವರ ಪೇಟಿಎಂ ಅನ್ನು ಪರಿಶೀಲಿಸುವ ಮೂಲಕ ಕಿರುಕುಳ ನೀಡುವುದು ದಾಖಲಾಗಿದೆ. ಅಂಗಡಿ ಮುಂದೆ ನಿಂತು ಪೇಟಿಎಂ ಸ್ಕ್ಯಾನರ್ ಅನ್ನು ಸ್ಕ್ಯಾನ್ ಮಾಡುವ ಅವರು ಅದರಲ್ಲಿ ಅಂಗಡಿಯ ಮಾಲಿಕನ ಹೆಸರನ್ನು ಓದುತ್ತಾರೆ. ಜೊತೆಗೆ ಈ ಹೆಸರನ್ನು ಅಂಗಡಿಯ ಶೋಕೇಶ್ ಅಲ್ಲಿ ಹಾಕುವಂತೆ ಅವರನ್ನು ಬೆದರಿಸುವುದು ವಿಡಿಯೊದಲ್ಲಿ ದಾಖಲಿಸುತ್ತಾರೆ. ಮುಸ್ಲಿಂ ವ್ಯಾಪಾರಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವೇಳೆ ಅಂಗಡಿಯ ಮಾಲೀಕ ಹೆಸರು ಅಂಗಡಿಯ ಬೋರ್ಡ್ ಅಲ್ಲಿ ಮೇಲೆ ಬರೆದಿರುವುದಾಗಿ ಹೇಳಿದ್ದು, ಅದಕ್ಕೆ ಒಪ್ಪದ ಅವರು ಅಂಗಡಿಯ ಮುಂದಿನ ಶೋಕೇಶ್ ಅಲ್ಲಿ ಕೂಡಾ ಬರೆಯುವಂತೆ ಬೆದರಿಸುತ್ತಾರೆ. ಜನರಿಗೆ ಈ ಅಂಗಡಿ ಯಾರದ್ದು ಎಂದು ಗೊತ್ತಾಗುವಂತೆ ಇಲ್ಲಿ ಬೋರ್ಡ್ ಹಾಕಿ ಎಂದು ಅವರು ಹೇಳಿದ ನಂತರ ಅವರು, ಅಂಗಡಿಯ ಮಾಲೀಕನಿಗೆ ಲೈಸನ್ಸ್ ಇದೆಯಾ ಎಂದು ಲೈಸನ್ಸ್ ಕೂಡಾ ಕೇಳುತ್ತಾರೆ.

ರವಿ ನೇಗಿ 2020 ದೆಹಲಿ ಚುನಾವಣೆಯಲ್ಲಿ ದಹೆಲಿ ಉಪ ಮುಖ್ಯಮಂತ್ರಿಯಾಗಿದ್ದ ಮನಿಷ್ ಸಿಸೋಡಿಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಪ್ರಸ್ತುತ ಅವರು ಬಿಜೆಪಿಯಿಂದ ಕೌನ್ಸಿಲರ್ ಆಗಿದ್ದಾರೆ. ಅದಾಗ್ಯೂ, ಅವರ ಈ ಕೃತ್ಯದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಲೈಸನ್ಸ್ ಮತ್ತು ಹೆಸರು ಗೋಚರಿಸುವಂತೆ ಬರೆಯುವಂತೆ ಹೇಳಲು ನೀವು ಯಾರು ಎಂದು ಜನರು ಪ್ರಶ್ನಿಸಿದ್ದಾರೆ.

ಇತ್ತಚೆಗೆ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಅಂಗಡಿ ಮಾಲಿಕರ ಹೆಸರು ಗೋಚರಿಸುವಂತೆ ಬರೆಯುವಂತೆ ಅಲ್ಲಿನ ಆಡಳಿತ ವ್ಯಪಾರಿಗಳಿಗೆ ಕೇಳಿಕೊಂಡಿತ್ತು. ಧಾರ್ಮಿಕ ಗುರುತುಗಳ ಸುತ್ತ ನಡೆಯುತ್ತಿರುವ ರಾಜಕೀಯ ಚರ್ಚೆ ಆತಂಕಕಾರಿ ಘಟ್ಟ ತಲುಪಿದೆ.

ಇದನ್ನೂ ಓದಿ: ‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...