Homeಮುಖಪುಟಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

ಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

- Advertisement -
- Advertisement -

ಶುಕ್ರವಾರ (ಡಿಸೆಂಬರ್ 12) ರಾತ್ರಿ ಬಿಹಾರದ ನವಾಡಾ ಜಿಲ್ಲೆಯಲ್ಲಿ ಧಾರ್ಮಿಕ ಗುರುತು ಕೇಳಿ (ಧರ್ಮ ಕೇಳಿ) ಗುಂಪೊಂದು ಮುಸ್ಲಿಂ ಬಟ್ಟೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಗನ್ ದಿವಾನ್ ಗ್ರಾಮದ ನಿವಾಸಿ ಮೊಹಮ್ಮದ್ ಅಥರ್ ಹುಸೇನ್ ಸೈಕಲ್‌ನಲ್ಲಿ ಬಟ್ಟೆ ಮಾರಾಟ ಮಾಡುತ್ತಿದ್ದರು. ಡಿಸೆಂಬರ್ 5ರಂದು ರೋಹ್ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ವಾಪರ್ ಗ್ರಾಮದ ಬಳಿ ಅವರ ಮೇಲೆ ಹಲ್ಲೆ ನಡೆದಿತ್ತು. ಹುಸೇನ್ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಸೈಕಲ್ ಚಕ್ರ ಪಂಕ್ಚರ್ ಆಗಿತ್ತು. ಅದನ್ನು ರಿಪೇರಿ ಮಾಡಿಸಲು ಸೈಕಲ್ ಅಂಗಡಿ ಹುಡುಕುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

“ಭಟ್ವಾಪರ್ ಗ್ರಾಮದಲ್ಲಿ ಗುಂಪೊಂದು ಹುಸೇನ್ ಅವರನ್ನು ತಡೆದು ನಿಲ್ಲಿಸಿ ಹೆಸರು ಮತ್ತು ಕೆಲಸ ಕೇಳಿದೆ. ನಂತರ ಅವರ ಮೇಲೆ ದಾಳಿ ನಡೆಸಿದೆ. ಆರೋಪಿಗಳು ಹುಸೇನ್ ಅವರ ಕಿವಿಗಳನ್ನು ಕತ್ತರಿಸಿದ್ದಾರೆ. ಕಾದ ಕಬ್ಬಿಣದಿಂದ ಥಳಿಸಿದ್ದಾರೆ” ಎಂದು ಹುಸೇನ್ ಸಹೋದರ ಮೊಹಮ್ಮದ್ ಶಕೀಬ್ ಆಲಂ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಆರೋಪಿಗಳು ಮೊದಲು ನನ್ನ ಹೆಸರು ಕೇಳಿದರು. ನಂತರ ಸೈಕಲ್‌ನಿಂದ ಎಳೆದು ನೆಲಕ್ಕೆ ಕೆಡವಿದರು. ನನ್ನಲ್ಲಿದ್ದ 18 ಸಾವಿರ ರೂಪಾಯಿ ಹಣ ದೋಚಿದರು, ಬಳಿಕ ಥಳಿಸಿದರು. ಆರಂಭದಲ್ಲಿ ಕಡಿಮೆ ಜನರ ಗುಂಪಿತ್ತು, ನಂತರ 15 ರಿಂದ 20 ಜನರು ಸೇರಿಕೊಂಡರು ಎಂದು ಹಲ್ಲೆಗೊಳಗಾದ ನಂತರ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಹುಸೇನ್ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

“ನನ್ನ ಖಾಸಗಿ ಭಾಗವನ್ನು ಪರಿಶೀಲಿಸಲು ಆರೋಪಿಗಳು ವಿವಸ್ತ್ರಗೊಳಿಸಿದರು. ನಂತರ ಕಾದ ಕಬ್ಬಿಣದಿಂದ ಥಳಿಸಿದರು” ಎಂದೂ ಹುಸೇನ್ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಹುಸೇನ್ ಅವರನ್ನು ಮೊದಲು ರೋಹ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ನವಾಡಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾದಾಗ ಪವಾಪುರಿ ವಿಐಎಂಎಸ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಶುಕ್ರವಾರ ತಡರಾತ್ರಿ ನಿಧನರಾದರು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ಹೇಳಿದೆ.

ಪ್ರಕರಣ ಸಂಬಂಧ ಇದುವರೆಗೆ ಆರು ಜನರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತ ವಯಸ್ಕರನ್ನೂ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 6ರಂದು ಹುಸೇನ್ ಅವರ ಪತ್ನಿ ಶಬ್ನಮ್ ಪರ್ವೀನ್ ದಾಖಲಿಸಿರುವ ದೂರಿನಲ್ಲಿ ಭಟ್ಟಾಪರ್ ಗ್ರಾಮದ 10 ಜನರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಹುಸೇನ್ ಮೇಲೆ ಹಲ್ಲೆ ನಡೆಸಿದ ಇತರ ಹತ್ತು ಜನರ ಗುರುತು ಪತ್ತೆಯಾಗಿಲ್ಲ.

ಕಳ್ಳತನದ ಸುಳ್ಳು ಆರೋಪ ಹೊರಿಸಿ ಹುಸೇನ್ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಗ್ರಾಮಕ್ಕೆ ಬಂದ ಅವರ ಕುಟುಂಬ ಸದಸ್ಯರನ್ನು ಕೂಡ ನಿಂದಿಸಿ ಬೆದರಿಕೆ ಹಾಕಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಶಬ್ನಮ್ ದೂರು ಆಧರಿಸಿ ಪೊಲೀಸರು ಆರಂಭದಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಕಾನೂನುಬಾಹಿರ ಗುಂಪು ಸೇರುವಿಕೆ, ಗಲಭೆ ಮತ್ತು ಗಂಭೀರ ಗಾಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಹುಸೇನ್ ನಿಧನರಾದ ನಂತರ ಕೊಲೆ ಆರೋಪಗಳನ್ನು ಸೇರಿಸಲಾಗಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಸಿಕಂದರ್ ಯಾದವ್ ಕೂಡ ವಿರುದ್ದ ದೂರು ದಾಖಲಿಸಿದ್ದು, ಹುಸೇನ್ ಆ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡೂ ದೂರುಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡವು ಘಟನೆ ನಡೆದು 24 ಗಂಟೆಗಳ ಒಳಗೆ ನಾಲ್ವರು ಶಂಕಿತರನ್ನು ಮತ್ತು ಶನಿವಾರ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ನವಾಡಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧಿಮಾನ್ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಅಥವಾ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಬಲೆ ಬೀಸಿದ್ದೇವೆ” ಎಂದು ಧಿಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...