Homeಮುಖಪುಟಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

ಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

- Advertisement -
- Advertisement -

ಶುಕ್ರವಾರ (ಡಿಸೆಂಬರ್ 12) ರಾತ್ರಿ ಬಿಹಾರದ ನವಾಡಾ ಜಿಲ್ಲೆಯಲ್ಲಿ ಧಾರ್ಮಿಕ ಗುರುತು ಕೇಳಿ (ಧರ್ಮ ಕೇಳಿ) ಗುಂಪೊಂದು ಮುಸ್ಲಿಂ ಬಟ್ಟೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಗನ್ ದಿವಾನ್ ಗ್ರಾಮದ ನಿವಾಸಿ ಮೊಹಮ್ಮದ್ ಅಥರ್ ಹುಸೇನ್ ಸೈಕಲ್‌ನಲ್ಲಿ ಬಟ್ಟೆ ಮಾರಾಟ ಮಾಡುತ್ತಿದ್ದರು. ಡಿಸೆಂಬರ್ 5ರಂದು ರೋಹ್ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ವಾಪರ್ ಗ್ರಾಮದ ಬಳಿ ಅವರ ಮೇಲೆ ಹಲ್ಲೆ ನಡೆದಿತ್ತು. ಹುಸೇನ್ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಸೈಕಲ್ ಚಕ್ರ ಪಂಕ್ಚರ್ ಆಗಿತ್ತು. ಅದನ್ನು ರಿಪೇರಿ ಮಾಡಿಸಲು ಸೈಕಲ್ ಅಂಗಡಿ ಹುಡುಕುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

“ಭಟ್ವಾಪರ್ ಗ್ರಾಮದಲ್ಲಿ ಗುಂಪೊಂದು ಹುಸೇನ್ ಅವರನ್ನು ತಡೆದು ನಿಲ್ಲಿಸಿ ಹೆಸರು ಮತ್ತು ಕೆಲಸ ಕೇಳಿದೆ. ನಂತರ ಅವರ ಮೇಲೆ ದಾಳಿ ನಡೆಸಿದೆ. ಆರೋಪಿಗಳು ಹುಸೇನ್ ಅವರ ಕಿವಿಗಳನ್ನು ಕತ್ತರಿಸಿದ್ದಾರೆ. ಕಾದ ಕಬ್ಬಿಣದಿಂದ ಥಳಿಸಿದ್ದಾರೆ” ಎಂದು ಹುಸೇನ್ ಸಹೋದರ ಮೊಹಮ್ಮದ್ ಶಕೀಬ್ ಆಲಂ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಆರೋಪಿಗಳು ಮೊದಲು ನನ್ನ ಹೆಸರು ಕೇಳಿದರು. ನಂತರ ಸೈಕಲ್‌ನಿಂದ ಎಳೆದು ನೆಲಕ್ಕೆ ಕೆಡವಿದರು. ನನ್ನಲ್ಲಿದ್ದ 18 ಸಾವಿರ ರೂಪಾಯಿ ಹಣ ದೋಚಿದರು, ಬಳಿಕ ಥಳಿಸಿದರು. ಆರಂಭದಲ್ಲಿ ಕಡಿಮೆ ಜನರ ಗುಂಪಿತ್ತು, ನಂತರ 15 ರಿಂದ 20 ಜನರು ಸೇರಿಕೊಂಡರು ಎಂದು ಹಲ್ಲೆಗೊಳಗಾದ ನಂತರ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಹುಸೇನ್ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

“ನನ್ನ ಖಾಸಗಿ ಭಾಗವನ್ನು ಪರಿಶೀಲಿಸಲು ಆರೋಪಿಗಳು ವಿವಸ್ತ್ರಗೊಳಿಸಿದರು. ನಂತರ ಕಾದ ಕಬ್ಬಿಣದಿಂದ ಥಳಿಸಿದರು” ಎಂದೂ ಹುಸೇನ್ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಹುಸೇನ್ ಅವರನ್ನು ಮೊದಲು ರೋಹ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ನವಾಡಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾದಾಗ ಪವಾಪುರಿ ವಿಐಎಂಎಸ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಶುಕ್ರವಾರ ತಡರಾತ್ರಿ ನಿಧನರಾದರು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ಹೇಳಿದೆ.

ಪ್ರಕರಣ ಸಂಬಂಧ ಇದುವರೆಗೆ ಆರು ಜನರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತ ವಯಸ್ಕರನ್ನೂ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 6ರಂದು ಹುಸೇನ್ ಅವರ ಪತ್ನಿ ಶಬ್ನಮ್ ಪರ್ವೀನ್ ದಾಖಲಿಸಿರುವ ದೂರಿನಲ್ಲಿ ಭಟ್ಟಾಪರ್ ಗ್ರಾಮದ 10 ಜನರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಹುಸೇನ್ ಮೇಲೆ ಹಲ್ಲೆ ನಡೆಸಿದ ಇತರ ಹತ್ತು ಜನರ ಗುರುತು ಪತ್ತೆಯಾಗಿಲ್ಲ.

ಕಳ್ಳತನದ ಸುಳ್ಳು ಆರೋಪ ಹೊರಿಸಿ ಹುಸೇನ್ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಗ್ರಾಮಕ್ಕೆ ಬಂದ ಅವರ ಕುಟುಂಬ ಸದಸ್ಯರನ್ನು ಕೂಡ ನಿಂದಿಸಿ ಬೆದರಿಕೆ ಹಾಕಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಶಬ್ನಮ್ ದೂರು ಆಧರಿಸಿ ಪೊಲೀಸರು ಆರಂಭದಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಕಾನೂನುಬಾಹಿರ ಗುಂಪು ಸೇರುವಿಕೆ, ಗಲಭೆ ಮತ್ತು ಗಂಭೀರ ಗಾಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಹುಸೇನ್ ನಿಧನರಾದ ನಂತರ ಕೊಲೆ ಆರೋಪಗಳನ್ನು ಸೇರಿಸಲಾಗಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಸಿಕಂದರ್ ಯಾದವ್ ಕೂಡ ವಿರುದ್ದ ದೂರು ದಾಖಲಿಸಿದ್ದು, ಹುಸೇನ್ ಆ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡೂ ದೂರುಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡವು ಘಟನೆ ನಡೆದು 24 ಗಂಟೆಗಳ ಒಳಗೆ ನಾಲ್ವರು ಶಂಕಿತರನ್ನು ಮತ್ತು ಶನಿವಾರ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ನವಾಡಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧಿಮಾನ್ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಅಥವಾ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಬಲೆ ಬೀಸಿದ್ದೇವೆ” ಎಂದು ಧಿಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...