Homeಮುಖಪುಟಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

ಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

- Advertisement -
- Advertisement -

ಶುಕ್ರವಾರ (ಡಿಸೆಂಬರ್ 12) ರಾತ್ರಿ ಬಿಹಾರದ ನವಾಡಾ ಜಿಲ್ಲೆಯಲ್ಲಿ ಧಾರ್ಮಿಕ ಗುರುತು ಕೇಳಿ (ಧರ್ಮ ಕೇಳಿ) ಗುಂಪೊಂದು ಮುಸ್ಲಿಂ ಬಟ್ಟೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಗನ್ ದಿವಾನ್ ಗ್ರಾಮದ ನಿವಾಸಿ ಮೊಹಮ್ಮದ್ ಅಥರ್ ಹುಸೇನ್ ಸೈಕಲ್‌ನಲ್ಲಿ ಬಟ್ಟೆ ಮಾರಾಟ ಮಾಡುತ್ತಿದ್ದರು. ಡಿಸೆಂಬರ್ 5ರಂದು ರೋಹ್ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ವಾಪರ್ ಗ್ರಾಮದ ಬಳಿ ಅವರ ಮೇಲೆ ಹಲ್ಲೆ ನಡೆದಿತ್ತು. ಹುಸೇನ್ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಸೈಕಲ್ ಚಕ್ರ ಪಂಕ್ಚರ್ ಆಗಿತ್ತು. ಅದನ್ನು ರಿಪೇರಿ ಮಾಡಿಸಲು ಸೈಕಲ್ ಅಂಗಡಿ ಹುಡುಕುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

“ಭಟ್ವಾಪರ್ ಗ್ರಾಮದಲ್ಲಿ ಗುಂಪೊಂದು ಹುಸೇನ್ ಅವರನ್ನು ತಡೆದು ನಿಲ್ಲಿಸಿ ಹೆಸರು ಮತ್ತು ಕೆಲಸ ಕೇಳಿದೆ. ನಂತರ ಅವರ ಮೇಲೆ ದಾಳಿ ನಡೆಸಿದೆ. ಆರೋಪಿಗಳು ಹುಸೇನ್ ಅವರ ಕಿವಿಗಳನ್ನು ಕತ್ತರಿಸಿದ್ದಾರೆ. ಕಾದ ಕಬ್ಬಿಣದಿಂದ ಥಳಿಸಿದ್ದಾರೆ” ಎಂದು ಹುಸೇನ್ ಸಹೋದರ ಮೊಹಮ್ಮದ್ ಶಕೀಬ್ ಆಲಂ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಆರೋಪಿಗಳು ಮೊದಲು ನನ್ನ ಹೆಸರು ಕೇಳಿದರು. ನಂತರ ಸೈಕಲ್‌ನಿಂದ ಎಳೆದು ನೆಲಕ್ಕೆ ಕೆಡವಿದರು. ನನ್ನಲ್ಲಿದ್ದ 18 ಸಾವಿರ ರೂಪಾಯಿ ಹಣ ದೋಚಿದರು, ಬಳಿಕ ಥಳಿಸಿದರು. ಆರಂಭದಲ್ಲಿ ಕಡಿಮೆ ಜನರ ಗುಂಪಿತ್ತು, ನಂತರ 15 ರಿಂದ 20 ಜನರು ಸೇರಿಕೊಂಡರು ಎಂದು ಹಲ್ಲೆಗೊಳಗಾದ ನಂತರ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಹುಸೇನ್ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

“ನನ್ನ ಖಾಸಗಿ ಭಾಗವನ್ನು ಪರಿಶೀಲಿಸಲು ಆರೋಪಿಗಳು ವಿವಸ್ತ್ರಗೊಳಿಸಿದರು. ನಂತರ ಕಾದ ಕಬ್ಬಿಣದಿಂದ ಥಳಿಸಿದರು” ಎಂದೂ ಹುಸೇನ್ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಹುಸೇನ್ ಅವರನ್ನು ಮೊದಲು ರೋಹ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ನವಾಡಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾದಾಗ ಪವಾಪುರಿ ವಿಐಎಂಎಸ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಶುಕ್ರವಾರ ತಡರಾತ್ರಿ ನಿಧನರಾದರು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ಹೇಳಿದೆ.

ಪ್ರಕರಣ ಸಂಬಂಧ ಇದುವರೆಗೆ ಆರು ಜನರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತ ವಯಸ್ಕರನ್ನೂ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 6ರಂದು ಹುಸೇನ್ ಅವರ ಪತ್ನಿ ಶಬ್ನಮ್ ಪರ್ವೀನ್ ದಾಖಲಿಸಿರುವ ದೂರಿನಲ್ಲಿ ಭಟ್ಟಾಪರ್ ಗ್ರಾಮದ 10 ಜನರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಹುಸೇನ್ ಮೇಲೆ ಹಲ್ಲೆ ನಡೆಸಿದ ಇತರ ಹತ್ತು ಜನರ ಗುರುತು ಪತ್ತೆಯಾಗಿಲ್ಲ.

ಕಳ್ಳತನದ ಸುಳ್ಳು ಆರೋಪ ಹೊರಿಸಿ ಹುಸೇನ್ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಗ್ರಾಮಕ್ಕೆ ಬಂದ ಅವರ ಕುಟುಂಬ ಸದಸ್ಯರನ್ನು ಕೂಡ ನಿಂದಿಸಿ ಬೆದರಿಕೆ ಹಾಕಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಶಬ್ನಮ್ ದೂರು ಆಧರಿಸಿ ಪೊಲೀಸರು ಆರಂಭದಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಕಾನೂನುಬಾಹಿರ ಗುಂಪು ಸೇರುವಿಕೆ, ಗಲಭೆ ಮತ್ತು ಗಂಭೀರ ಗಾಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಹುಸೇನ್ ನಿಧನರಾದ ನಂತರ ಕೊಲೆ ಆರೋಪಗಳನ್ನು ಸೇರಿಸಲಾಗಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಸಿಕಂದರ್ ಯಾದವ್ ಕೂಡ ವಿರುದ್ದ ದೂರು ದಾಖಲಿಸಿದ್ದು, ಹುಸೇನ್ ಆ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡೂ ದೂರುಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡವು ಘಟನೆ ನಡೆದು 24 ಗಂಟೆಗಳ ಒಳಗೆ ನಾಲ್ವರು ಶಂಕಿತರನ್ನು ಮತ್ತು ಶನಿವಾರ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ನವಾಡಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧಿಮಾನ್ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಅಥವಾ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಬಲೆ ಬೀಸಿದ್ದೇವೆ” ಎಂದು ಧಿಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...