Homeಮುಖಪುಟಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

- Advertisement -
- Advertisement -

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), ಸ್ವರ್ಣೇಂದು ಚಕ್ರವರ್ತಿ (32) ಮತ್ತು ತರುಣ್ ಭಟ್ಟಾಚಾರ್ಯ (51) ಅವರನ್ನು ಬುಧವಾರ (ಡಿಸೆಂಬರ್ 11) ಬೆಳಿಗ್ಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೌಮಿಕ್ ಗೋಲ್ಡರ್ ಪ್ರಕರಣ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ರೀತಿಯ ಬೃಹತ್ ಕಾರ್ಯಕ್ರಮಗಳು ನಡೆಯುವಾಗ ಕಲರ್‌ಫುಲ್ ಟ್ಯೂಬ್ ಪಾಪಡ್, (ಬಣ್ಣದ ನಳಿಕೆ ರೀತಿಯ ಹಪ್ಪಳ), ಲೋಝೆಂಜ್‌ಗಳು (ಮಾತ್ರೆ ರೀತಿಯ ಬಣ್ಣ ತಿಂಡಿಗಳು), ಕಾಟನ್ ಕ್ಯಾಂಡಿ, ಸ್ಕಿನ್ನಿ ಐಸ್‌ಕ್ರೀಮ್ ಸ್ಟಿಕ್‌ಗಳು ಇತ್ಯಾದಿ ಸಣ್ಣಪುಟ್ಟ ತಿಂಡಿ-ತಿನಿಸುಗಳನ್ನು ಮಾರಿ ಜೀವನ ನಡೆಸುವ ನೂರಾರು ಮಂದಿಯಿದ್ದಾರೆ.

ಅಂತಹ ಮಾರಾಟಗಾರರಲ್ಲಿ ಹಲ್ಲೆಗೊಳಗಾದ ಶೇಖ್ ರಿಯಾಝುಲ್ ಕೂಡ ಒಬ್ಬರು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಿವಾಸಿಯಾದ ಇವರು, ಸುಮಾರು ಇಪ್ಪತ್ತು ವರ್ಷಗಳಿಂದ ಕೋಲ್ಕತ್ತಾದಲ್ಲಿ ಪಫ್ಸ್ ಮಾರಾಟ ಮಾಡುತ್ತಿದ್ದಾರೆ ಎಂದು ದಿ ವೈರ್ ವರದಿ ಹೇಳಿದೆ.

ಭಾನುವಾರದ ಭಗವದ್ಗೀತೆ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ರಿಯಾಝುಲ್ ಅವರು ವೆಜ್ ಮತ್ತು ಚಿಕನ್ ಎರಡೂ ರೀತಿಯ ಪಫ್ಸ್‌ಗಳನ್ನು ಬಾಕ್ಸ್‌ವೊಂದರಲ್ಲಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದರು.

ಈ ವೇಳೆ, ಕೆಲವರು ನಿಮ್ಮ ಬಾಕ್ಸ್‌ನಲ್ಲಿ ಚಿಕನ್ ಪಫ್ಸ್ ಇದೆಯಾ? ಎಂದು ರಿಯಾಝುಲ್ ಅವರಿಗೆ ಕೇಳಿದ್ದಾರೆ. ರಿಯಾಝುಲ್ ಇದೆ ಎಂದಾಗ ಅವರು ಥಳಿಸಲು ಶುರು ಮಾಡಿದ್ದಾರೆ. ರಿಯಾಝುಲ್ ಅವರ ಹೆಸರು ಗೊತ್ತಾದ ಮೇಲೆ ಇನ್ನಷ್ಟು ತೀವ್ರವಾಗಿ ಥಳಿಸಿದ್ದಾರೆ. ಅಲ್ಲದೆ, ಬಸ್ಕಿ ಹೊಡೆಸಿದ್ದಾರೆ ಎಂದು ದಿ ವೈರ್ ವರದಿ ವಿವರಿಸಿದೆ.

“ಅವರು ನನ್ನಲ್ಲಿದ್ದ 3 ಸಾವಿರ ರೂಪಾಯಿ ವಸ್ತುವನ್ನು ಹಾಳುಗಡೆವಿದರು. ಆ ಮೊತ್ತ ನನ್ನ ಒಂದು ವಾರದ ಆದಾಯಕ್ಕಿಂತ ಹೆಚ್ಚು” ಎಂದು ರಿಯಾಝುಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಿಯಾಝುಲ್ ಪ್ರತಿದಿನ ಕೋಲ್ಕತ್ತಾದ ಮಧ್ಯಭಾಗದಲ್ಲಿರುವ ಬೇಕರಿಯೊಂದರಿಂದ ವೋಲ್‌ಸೇಲ್ ದರದಲ್ಲಿ ಪಫ್ಸ್ ಖರೀದಿಸಿ, ನಗರದ ವಿವಿಧ ಭಾಗಗಳಲ್ಲಿ ನಡೆದುಕೊಂಡು ಹೋಗಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಗಳು ಅಥವಾ ದೊಡ್ಡ ರಾಜಕೀಯ ಸಮಾವೇಶಗಳು ಇದ್ದರೆ, ಅಲ್ಲಿಯೇ ವ್ಯಾಪಾರ ಮಾಡಿ ದಿನವೊಂದಕ್ಕೆ 500 ರಿಂದ 1,000 ರೂ.ಗಳವರೆಗೆ ಗಳಿಸುತ್ತಿದ್ದರು. ಸಾಮಾನ್ಯ ದಿನಗಳಲ್ಲಿ, ಅವರ ಆದಾಯ 200-300 ರೂ. ಇತ್ತು. ತಲಾ 30-35 ರೂ. ಬೆಲೆಗೆ ಪಫ್ಸ್ ಮಾರುತ್ತಿದ್ದರು. ಕೆಲಸ ನಿಮಿತ್ತ ನಗರದ ಖಿದ್ದರ್ಪೋರ್‌ನಲ್ಲಿ ವಾಸಿಸುತ್ತಿದ್ದರು.

ರಿಯಾಝುಲ್ ಈ ಪಫ್ಸ್ ಮಾರಿಯೇ ಜೀವನದ ಬಂಡಿ ಓಡಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಹಿರಿಯ ಮಗ ಹೈದರಾಬಾದ್‌ನಲ್ಲಿ ಆಭರಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ವರ್ಕ್‌ಶಾಪ್‌ ಒಂದರಲ್ಲಿ ಅಪ್ರೆಂಟಿಸ್ ಆಗಿದ್ದಾನೆ.

ಹಲ್ಲೆಯ ವಿಡಿಯೋ ಬಹಿರಂಗವಾದಾಗಿನಿಂದ ನನ್ನ ಕುಟುಂಬ ಭಯದಿಂದ ಬದುಕುತ್ತಿದೆ ಎಂದು ರಿಯಾಝುಲ್ ಹೇಳಿಕೊಂಡಿದ್ದಾರೆ. “ನನಗೆ ಏನಾಯಿತು ಎಂದು ನನ್ನ ಮನೆಯವರು ಅಳುತ್ತಿದ್ದಾರೆ. ಅವರು ಭಯಭೀತರಾಗಿದ್ದಾರೆ. ನಾನು ಕಡು ಬಡವ. ಈಗ ನನಗೆ ನನ್ನ ಕುಟುಂಬದ ಭವಿಷ್ಯದ ಚಿಂತೆಯಾಗಿದೆ. ನಾನು ಯಾರನ್ನೂ ಮಾಂಸಹಾರ ಖರೀದಿಸಲು ಒತ್ತಾಯಿಸಿಲ್ಲ. ಆದರೂ, ಅವರು ನನಗೆ ಏಕೆ ಹೊಡೆದರು ಎಂದು ಗೊತ್ತಿಲ್ಲ” ಎಂದಿದ್ದಾರೆ.

ರಿಯಾಝುಲ್ ಮೇಲೆ ಹಲ್ಲೆ ನಡೆದಿರುವುದು ಒಂದು ಘಟನೆ ಮಾತ್ರವಲ್ಲ. ಟೋಪ್ಸಿಯಾ ಮೂಲದ ಶೇಖ್ ಸಲಾವುದ್ದೀನ್ ಎಂಬ ಮಾರಾಟಗಾರ ಸೇರಿದಂತೆ ಕನಿಷ್ಠ ಇಬ್ಬರು ಇತರ ಪಫ್ಸ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

“ಅವತ್ತು ನನ್ನ ಮೇಲೆಯೂ ಹಲ್ಲೆ ನಡೆಯುತ್ತಿತ್ತು. ಆದರೆ, ನಾನು ಆಗಲೇ ಮನೆಗೆ ಹೋದ ಕಾರಣ ಸ್ವಲ್ಪದರಲ್ಲಿ ಪಾರಾದೆ. ನಮ್ಮಲ್ಲಿ ಸುಮಾರು 15ರಿಂದ 20 ಜನರು ಪಫ್ಸ್ ಮಾರುತ್ತಾರೆ. ದುರ್ಗಾ ಪೂಜೆಯಿಂದ ಹಿಡಿದು ವಿವಿಧ ಪಂದ್ಯಾಟಗಳವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಹಲವು ವರ್ಷಗಳಿಂದ ನಾವು ಪಫ್ಸ್ ಮಾರಿದ್ದೇವೆ. ಎಂದಿಗೂ ಇಂತಹ ಅನುಭ ಆಗಿಲ್ಲ ಎಂದು ರಿಯಾಝುಲ್ ಅವರ ಸ್ನೇಹಿತ ಹಾಗೂ ಪಫ್ಸ್ ಮಾರಾಟಗಾರ ಶೇಖ್ ಮೊಯ್ದುಲ್ ಇಸ್ಲಾಂ ಹೇಳಿರುವುದಾಗಿ ದಿ ವೈರ್‌ ತಿಳಿಸಿದೆ.

ರಿಯಾಝುಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್) (ಸಿಪಿಐ(ಎಂ)) ನಾಯಕ ಮತ್ತು ವಕೀಲ ಸಯಾನ್ ಬಂಡೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸಾರ ಇದು ಗುಂಪು ಹತ್ಯೆಗೆ ಸಮಾನವಾದ ಪ್ರಕರಣ ಎಂದಿದ್ದಾರೆ. ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ.

ಬಂಡೋಪಾಧ್ಯಾಯ ಅವರು ಸೋಮವಾರ (ಡಿಸೆಂಬರ್ 8) ಮಧ್ಯಾಹ್ನ ಕೋಲ್ಕತ್ತಾದ ಮೈದಾನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ನೇರವಾಗಿ ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ದೂರಿನ ಜೊತೆಗೆ ಹೈಕೋರ್ಟ್ ನ್ಯಾಯಾಧೀಶರಿಗೆ ಬರೆದ ಪತ್ರದ ಪ್ರತಿಯನ್ನೂ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ಗುಂಪು ಹಲ್ಲೆ ಕೂಡ ‘ಗುಂಪು ಹತ್ಯೆ’ಯ ವ್ಯಾಪ್ತಿಗೆ ಬರುತ್ತದೆ. ಈ ಘಟನೆ ಕೋಲ್ಕತ್ತಾದ ಹೃದಯ ಭಾಗದಲ್ಲಿ ನಡೆದಿದೆ, ದೂರದ ಜಿಲ್ಲೆಯಲ್ಲಿ ಅಲ್ಲ. ಇಂತಹ ಘಟನೆ ನಗರದ ಮಧ್ಯಭಾಗದಲ್ಲಿ ನಡೆದಿದ್ದರೂ ಕೋಲ್ಕತ್ತಾ ಪೊಲೀಸರು ಮೌನವಾಗಿದ್ದಾರೆ. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಪ್ರಮುಖ ಆರೋಪಿ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸಿಪಿಐ(ಎಂ) ನಾಯಕಿ ದೀಪ್ಸಿತಾ ಧರ್ ರಿಯಾಝುಲ್ ಮೇಲಿನ ದಾಳಿಯ ವಿರುದ್ಧ ಮೊದಲು ಧ್ವನಿ ಎತ್ತಿದವರು. ಇವರು ಸಂತ್ರಸ್ತ ವ್ಯಾಪಾರಿಗಳಿಗೆ ಪರಿಹಾರ ನೀಡಲು ನಿಧಿಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ.

ಮಾಂಸಹಾರ ಸಾಮಾನ್ಯವಾಗಿರುವ ಬಂಗಾಳದಂತಹ ಸ್ಥಳದಲ್ಲಿ ಮಾಂಸಹಾರ ಮಾರಾಟದ ಹೆಸರಿನಲ್ಲಿ ಹಲ್ಲೆ ನಡೆದಿರುವುದು ಆಶ್ಚರ್ಯಕರ. ವೈರಲ್ ವಿಡಿಯೋದಲ್ಲಿ ಹಲ್ಲೆಕೋರರು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಏಕೆ? ಚುನಾವಣಾ ಲಾಭಕ್ಕಾಗಿ ಈ ದ್ವೇಷ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುತ್ತಿದೆಯೇ ಎಂದು ನಾನು ಬಿಜೆಪಿ ಮತ್ತು ಟಿಎಂಸಿ ಎರಡನ್ನೂ ಪ್ರಶ್ನಿಸಲು ಬಯಸುತ್ತೇವೆ ಎಂದು ದೀಪ್ಸಿತಾ ಧರ್ ಹೇಳಿದ್ದರು.

“ನೀವು ಮಾಂಸಾಹಾರ ತಿನ್ನದಿದ್ದರೆ ಖರೀದಿಸಬೇಡಿ, ಆದರೆ ಮಾರಾಟಗಾರನಿಗೆ ಥಳಿಸಿದ್ದು ಏಕೆ? ಅದು ಅವರ ಜೀವನೋಪಾಯ. ನಾನು ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಬರೆದುಕೊಂಡಿದ್ದರು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...