Homeಮುಖಪುಟಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

- Advertisement -
- Advertisement -

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), ಸ್ವರ್ಣೇಂದು ಚಕ್ರವರ್ತಿ (32) ಮತ್ತು ತರುಣ್ ಭಟ್ಟಾಚಾರ್ಯ (51) ಅವರನ್ನು ಬುಧವಾರ (ಡಿಸೆಂಬರ್ 11) ಬೆಳಿಗ್ಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೌಮಿಕ್ ಗೋಲ್ಡರ್ ಪ್ರಕರಣ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ರೀತಿಯ ಬೃಹತ್ ಕಾರ್ಯಕ್ರಮಗಳು ನಡೆಯುವಾಗ ಕಲರ್‌ಫುಲ್ ಟ್ಯೂಬ್ ಪಾಪಡ್, (ಬಣ್ಣದ ನಳಿಕೆ ರೀತಿಯ ಹಪ್ಪಳ), ಲೋಝೆಂಜ್‌ಗಳು (ಮಾತ್ರೆ ರೀತಿಯ ಬಣ್ಣ ತಿಂಡಿಗಳು), ಕಾಟನ್ ಕ್ಯಾಂಡಿ, ಸ್ಕಿನ್ನಿ ಐಸ್‌ಕ್ರೀಮ್ ಸ್ಟಿಕ್‌ಗಳು ಇತ್ಯಾದಿ ಸಣ್ಣಪುಟ್ಟ ತಿಂಡಿ-ತಿನಿಸುಗಳನ್ನು ಮಾರಿ ಜೀವನ ನಡೆಸುವ ನೂರಾರು ಮಂದಿಯಿದ್ದಾರೆ.

ಅಂತಹ ಮಾರಾಟಗಾರರಲ್ಲಿ ಹಲ್ಲೆಗೊಳಗಾದ ಶೇಖ್ ರಿಯಾಝುಲ್ ಕೂಡ ಒಬ್ಬರು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಿವಾಸಿಯಾದ ಇವರು, ಸುಮಾರು ಇಪ್ಪತ್ತು ವರ್ಷಗಳಿಂದ ಕೋಲ್ಕತ್ತಾದಲ್ಲಿ ಪಫ್ಸ್ ಮಾರಾಟ ಮಾಡುತ್ತಿದ್ದಾರೆ ಎಂದು ದಿ ವೈರ್ ವರದಿ ಹೇಳಿದೆ.

ಭಾನುವಾರದ ಭಗವದ್ಗೀತೆ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ರಿಯಾಝುಲ್ ಅವರು ವೆಜ್ ಮತ್ತು ಚಿಕನ್ ಎರಡೂ ರೀತಿಯ ಪಫ್ಸ್‌ಗಳನ್ನು ಬಾಕ್ಸ್‌ವೊಂದರಲ್ಲಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದರು.

ಈ ವೇಳೆ, ಕೆಲವರು ನಿಮ್ಮ ಬಾಕ್ಸ್‌ನಲ್ಲಿ ಚಿಕನ್ ಪಫ್ಸ್ ಇದೆಯಾ? ಎಂದು ರಿಯಾಝುಲ್ ಅವರಿಗೆ ಕೇಳಿದ್ದಾರೆ. ರಿಯಾಝುಲ್ ಇದೆ ಎಂದಾಗ ಅವರು ಥಳಿಸಲು ಶುರು ಮಾಡಿದ್ದಾರೆ. ರಿಯಾಝುಲ್ ಅವರ ಹೆಸರು ಗೊತ್ತಾದ ಮೇಲೆ ಇನ್ನಷ್ಟು ತೀವ್ರವಾಗಿ ಥಳಿಸಿದ್ದಾರೆ. ಅಲ್ಲದೆ, ಬಸ್ಕಿ ಹೊಡೆಸಿದ್ದಾರೆ ಎಂದು ದಿ ವೈರ್ ವರದಿ ವಿವರಿಸಿದೆ.

“ಅವರು ನನ್ನಲ್ಲಿದ್ದ 3 ಸಾವಿರ ರೂಪಾಯಿ ವಸ್ತುವನ್ನು ಹಾಳುಗಡೆವಿದರು. ಆ ಮೊತ್ತ ನನ್ನ ಒಂದು ವಾರದ ಆದಾಯಕ್ಕಿಂತ ಹೆಚ್ಚು” ಎಂದು ರಿಯಾಝುಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಿಯಾಝುಲ್ ಪ್ರತಿದಿನ ಕೋಲ್ಕತ್ತಾದ ಮಧ್ಯಭಾಗದಲ್ಲಿರುವ ಬೇಕರಿಯೊಂದರಿಂದ ವೋಲ್‌ಸೇಲ್ ದರದಲ್ಲಿ ಪಫ್ಸ್ ಖರೀದಿಸಿ, ನಗರದ ವಿವಿಧ ಭಾಗಗಳಲ್ಲಿ ನಡೆದುಕೊಂಡು ಹೋಗಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಗಳು ಅಥವಾ ದೊಡ್ಡ ರಾಜಕೀಯ ಸಮಾವೇಶಗಳು ಇದ್ದರೆ, ಅಲ್ಲಿಯೇ ವ್ಯಾಪಾರ ಮಾಡಿ ದಿನವೊಂದಕ್ಕೆ 500 ರಿಂದ 1,000 ರೂ.ಗಳವರೆಗೆ ಗಳಿಸುತ್ತಿದ್ದರು. ಸಾಮಾನ್ಯ ದಿನಗಳಲ್ಲಿ, ಅವರ ಆದಾಯ 200-300 ರೂ. ಇತ್ತು. ತಲಾ 30-35 ರೂ. ಬೆಲೆಗೆ ಪಫ್ಸ್ ಮಾರುತ್ತಿದ್ದರು. ಕೆಲಸ ನಿಮಿತ್ತ ನಗರದ ಖಿದ್ದರ್ಪೋರ್‌ನಲ್ಲಿ ವಾಸಿಸುತ್ತಿದ್ದರು.

ರಿಯಾಝುಲ್ ಈ ಪಫ್ಸ್ ಮಾರಿಯೇ ಜೀವನದ ಬಂಡಿ ಓಡಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಹಿರಿಯ ಮಗ ಹೈದರಾಬಾದ್‌ನಲ್ಲಿ ಆಭರಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ವರ್ಕ್‌ಶಾಪ್‌ ಒಂದರಲ್ಲಿ ಅಪ್ರೆಂಟಿಸ್ ಆಗಿದ್ದಾನೆ.

ಹಲ್ಲೆಯ ವಿಡಿಯೋ ಬಹಿರಂಗವಾದಾಗಿನಿಂದ ನನ್ನ ಕುಟುಂಬ ಭಯದಿಂದ ಬದುಕುತ್ತಿದೆ ಎಂದು ರಿಯಾಝುಲ್ ಹೇಳಿಕೊಂಡಿದ್ದಾರೆ. “ನನಗೆ ಏನಾಯಿತು ಎಂದು ನನ್ನ ಮನೆಯವರು ಅಳುತ್ತಿದ್ದಾರೆ. ಅವರು ಭಯಭೀತರಾಗಿದ್ದಾರೆ. ನಾನು ಕಡು ಬಡವ. ಈಗ ನನಗೆ ನನ್ನ ಕುಟುಂಬದ ಭವಿಷ್ಯದ ಚಿಂತೆಯಾಗಿದೆ. ನಾನು ಯಾರನ್ನೂ ಮಾಂಸಹಾರ ಖರೀದಿಸಲು ಒತ್ತಾಯಿಸಿಲ್ಲ. ಆದರೂ, ಅವರು ನನಗೆ ಏಕೆ ಹೊಡೆದರು ಎಂದು ಗೊತ್ತಿಲ್ಲ” ಎಂದಿದ್ದಾರೆ.

ರಿಯಾಝುಲ್ ಮೇಲೆ ಹಲ್ಲೆ ನಡೆದಿರುವುದು ಒಂದು ಘಟನೆ ಮಾತ್ರವಲ್ಲ. ಟೋಪ್ಸಿಯಾ ಮೂಲದ ಶೇಖ್ ಸಲಾವುದ್ದೀನ್ ಎಂಬ ಮಾರಾಟಗಾರ ಸೇರಿದಂತೆ ಕನಿಷ್ಠ ಇಬ್ಬರು ಇತರ ಪಫ್ಸ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

“ಅವತ್ತು ನನ್ನ ಮೇಲೆಯೂ ಹಲ್ಲೆ ನಡೆಯುತ್ತಿತ್ತು. ಆದರೆ, ನಾನು ಆಗಲೇ ಮನೆಗೆ ಹೋದ ಕಾರಣ ಸ್ವಲ್ಪದರಲ್ಲಿ ಪಾರಾದೆ. ನಮ್ಮಲ್ಲಿ ಸುಮಾರು 15ರಿಂದ 20 ಜನರು ಪಫ್ಸ್ ಮಾರುತ್ತಾರೆ. ದುರ್ಗಾ ಪೂಜೆಯಿಂದ ಹಿಡಿದು ವಿವಿಧ ಪಂದ್ಯಾಟಗಳವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಹಲವು ವರ್ಷಗಳಿಂದ ನಾವು ಪಫ್ಸ್ ಮಾರಿದ್ದೇವೆ. ಎಂದಿಗೂ ಇಂತಹ ಅನುಭ ಆಗಿಲ್ಲ ಎಂದು ರಿಯಾಝುಲ್ ಅವರ ಸ್ನೇಹಿತ ಹಾಗೂ ಪಫ್ಸ್ ಮಾರಾಟಗಾರ ಶೇಖ್ ಮೊಯ್ದುಲ್ ಇಸ್ಲಾಂ ಹೇಳಿರುವುದಾಗಿ ದಿ ವೈರ್‌ ತಿಳಿಸಿದೆ.

ರಿಯಾಝುಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್) (ಸಿಪಿಐ(ಎಂ)) ನಾಯಕ ಮತ್ತು ವಕೀಲ ಸಯಾನ್ ಬಂಡೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸಾರ ಇದು ಗುಂಪು ಹತ್ಯೆಗೆ ಸಮಾನವಾದ ಪ್ರಕರಣ ಎಂದಿದ್ದಾರೆ. ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ.

ಬಂಡೋಪಾಧ್ಯಾಯ ಅವರು ಸೋಮವಾರ (ಡಿಸೆಂಬರ್ 8) ಮಧ್ಯಾಹ್ನ ಕೋಲ್ಕತ್ತಾದ ಮೈದಾನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ನೇರವಾಗಿ ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ದೂರಿನ ಜೊತೆಗೆ ಹೈಕೋರ್ಟ್ ನ್ಯಾಯಾಧೀಶರಿಗೆ ಬರೆದ ಪತ್ರದ ಪ್ರತಿಯನ್ನೂ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ಗುಂಪು ಹಲ್ಲೆ ಕೂಡ ‘ಗುಂಪು ಹತ್ಯೆ’ಯ ವ್ಯಾಪ್ತಿಗೆ ಬರುತ್ತದೆ. ಈ ಘಟನೆ ಕೋಲ್ಕತ್ತಾದ ಹೃದಯ ಭಾಗದಲ್ಲಿ ನಡೆದಿದೆ, ದೂರದ ಜಿಲ್ಲೆಯಲ್ಲಿ ಅಲ್ಲ. ಇಂತಹ ಘಟನೆ ನಗರದ ಮಧ್ಯಭಾಗದಲ್ಲಿ ನಡೆದಿದ್ದರೂ ಕೋಲ್ಕತ್ತಾ ಪೊಲೀಸರು ಮೌನವಾಗಿದ್ದಾರೆ. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಪ್ರಮುಖ ಆರೋಪಿ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸಿಪಿಐ(ಎಂ) ನಾಯಕಿ ದೀಪ್ಸಿತಾ ಧರ್ ರಿಯಾಝುಲ್ ಮೇಲಿನ ದಾಳಿಯ ವಿರುದ್ಧ ಮೊದಲು ಧ್ವನಿ ಎತ್ತಿದವರು. ಇವರು ಸಂತ್ರಸ್ತ ವ್ಯಾಪಾರಿಗಳಿಗೆ ಪರಿಹಾರ ನೀಡಲು ನಿಧಿಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ.

ಮಾಂಸಹಾರ ಸಾಮಾನ್ಯವಾಗಿರುವ ಬಂಗಾಳದಂತಹ ಸ್ಥಳದಲ್ಲಿ ಮಾಂಸಹಾರ ಮಾರಾಟದ ಹೆಸರಿನಲ್ಲಿ ಹಲ್ಲೆ ನಡೆದಿರುವುದು ಆಶ್ಚರ್ಯಕರ. ವೈರಲ್ ವಿಡಿಯೋದಲ್ಲಿ ಹಲ್ಲೆಕೋರರು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಏಕೆ? ಚುನಾವಣಾ ಲಾಭಕ್ಕಾಗಿ ಈ ದ್ವೇಷ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುತ್ತಿದೆಯೇ ಎಂದು ನಾನು ಬಿಜೆಪಿ ಮತ್ತು ಟಿಎಂಸಿ ಎರಡನ್ನೂ ಪ್ರಶ್ನಿಸಲು ಬಯಸುತ್ತೇವೆ ಎಂದು ದೀಪ್ಸಿತಾ ಧರ್ ಹೇಳಿದ್ದರು.

“ನೀವು ಮಾಂಸಾಹಾರ ತಿನ್ನದಿದ್ದರೆ ಖರೀದಿಸಬೇಡಿ, ಆದರೆ ಮಾರಾಟಗಾರನಿಗೆ ಥಳಿಸಿದ್ದು ಏಕೆ? ಅದು ಅವರ ಜೀವನೋಪಾಯ. ನಾನು ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಬರೆದುಕೊಂಡಿದ್ದರು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...