Homeಮುಖಪುಟಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

- Advertisement -
- Advertisement -

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), ಸ್ವರ್ಣೇಂದು ಚಕ್ರವರ್ತಿ (32) ಮತ್ತು ತರುಣ್ ಭಟ್ಟಾಚಾರ್ಯ (51) ಅವರನ್ನು ಬುಧವಾರ (ಡಿಸೆಂಬರ್ 11) ಬೆಳಿಗ್ಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೌಮಿಕ್ ಗೋಲ್ಡರ್ ಪ್ರಕರಣ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ರೀತಿಯ ಬೃಹತ್ ಕಾರ್ಯಕ್ರಮಗಳು ನಡೆಯುವಾಗ ಕಲರ್‌ಫುಲ್ ಟ್ಯೂಬ್ ಪಾಪಡ್, (ಬಣ್ಣದ ನಳಿಕೆ ರೀತಿಯ ಹಪ್ಪಳ), ಲೋಝೆಂಜ್‌ಗಳು (ಮಾತ್ರೆ ರೀತಿಯ ಬಣ್ಣ ತಿಂಡಿಗಳು), ಕಾಟನ್ ಕ್ಯಾಂಡಿ, ಸ್ಕಿನ್ನಿ ಐಸ್‌ಕ್ರೀಮ್ ಸ್ಟಿಕ್‌ಗಳು ಇತ್ಯಾದಿ ಸಣ್ಣಪುಟ್ಟ ತಿಂಡಿ-ತಿನಿಸುಗಳನ್ನು ಮಾರಿ ಜೀವನ ನಡೆಸುವ ನೂರಾರು ಮಂದಿಯಿದ್ದಾರೆ.

ಅಂತಹ ಮಾರಾಟಗಾರರಲ್ಲಿ ಹಲ್ಲೆಗೊಳಗಾದ ಶೇಖ್ ರಿಯಾಝುಲ್ ಕೂಡ ಒಬ್ಬರು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಿವಾಸಿಯಾದ ಇವರು, ಸುಮಾರು ಇಪ್ಪತ್ತು ವರ್ಷಗಳಿಂದ ಕೋಲ್ಕತ್ತಾದಲ್ಲಿ ಪಫ್ಸ್ ಮಾರಾಟ ಮಾಡುತ್ತಿದ್ದಾರೆ ಎಂದು ದಿ ವೈರ್ ವರದಿ ಹೇಳಿದೆ.

ಭಾನುವಾರದ ಭಗವದ್ಗೀತೆ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ರಿಯಾಝುಲ್ ಅವರು ವೆಜ್ ಮತ್ತು ಚಿಕನ್ ಎರಡೂ ರೀತಿಯ ಪಫ್ಸ್‌ಗಳನ್ನು ಬಾಕ್ಸ್‌ವೊಂದರಲ್ಲಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದರು.

ಈ ವೇಳೆ, ಕೆಲವರು ನಿಮ್ಮ ಬಾಕ್ಸ್‌ನಲ್ಲಿ ಚಿಕನ್ ಪಫ್ಸ್ ಇದೆಯಾ? ಎಂದು ರಿಯಾಝುಲ್ ಅವರಿಗೆ ಕೇಳಿದ್ದಾರೆ. ರಿಯಾಝುಲ್ ಇದೆ ಎಂದಾಗ ಅವರು ಥಳಿಸಲು ಶುರು ಮಾಡಿದ್ದಾರೆ. ರಿಯಾಝುಲ್ ಅವರ ಹೆಸರು ಗೊತ್ತಾದ ಮೇಲೆ ಇನ್ನಷ್ಟು ತೀವ್ರವಾಗಿ ಥಳಿಸಿದ್ದಾರೆ. ಅಲ್ಲದೆ, ಬಸ್ಕಿ ಹೊಡೆಸಿದ್ದಾರೆ ಎಂದು ದಿ ವೈರ್ ವರದಿ ವಿವರಿಸಿದೆ.

“ಅವರು ನನ್ನಲ್ಲಿದ್ದ 3 ಸಾವಿರ ರೂಪಾಯಿ ವಸ್ತುವನ್ನು ಹಾಳುಗಡೆವಿದರು. ಆ ಮೊತ್ತ ನನ್ನ ಒಂದು ವಾರದ ಆದಾಯಕ್ಕಿಂತ ಹೆಚ್ಚು” ಎಂದು ರಿಯಾಝುಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಿಯಾಝುಲ್ ಪ್ರತಿದಿನ ಕೋಲ್ಕತ್ತಾದ ಮಧ್ಯಭಾಗದಲ್ಲಿರುವ ಬೇಕರಿಯೊಂದರಿಂದ ವೋಲ್‌ಸೇಲ್ ದರದಲ್ಲಿ ಪಫ್ಸ್ ಖರೀದಿಸಿ, ನಗರದ ವಿವಿಧ ಭಾಗಗಳಲ್ಲಿ ನಡೆದುಕೊಂಡು ಹೋಗಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಗಳು ಅಥವಾ ದೊಡ್ಡ ರಾಜಕೀಯ ಸಮಾವೇಶಗಳು ಇದ್ದರೆ, ಅಲ್ಲಿಯೇ ವ್ಯಾಪಾರ ಮಾಡಿ ದಿನವೊಂದಕ್ಕೆ 500 ರಿಂದ 1,000 ರೂ.ಗಳವರೆಗೆ ಗಳಿಸುತ್ತಿದ್ದರು. ಸಾಮಾನ್ಯ ದಿನಗಳಲ್ಲಿ, ಅವರ ಆದಾಯ 200-300 ರೂ. ಇತ್ತು. ತಲಾ 30-35 ರೂ. ಬೆಲೆಗೆ ಪಫ್ಸ್ ಮಾರುತ್ತಿದ್ದರು. ಕೆಲಸ ನಿಮಿತ್ತ ನಗರದ ಖಿದ್ದರ್ಪೋರ್‌ನಲ್ಲಿ ವಾಸಿಸುತ್ತಿದ್ದರು.

ರಿಯಾಝುಲ್ ಈ ಪಫ್ಸ್ ಮಾರಿಯೇ ಜೀವನದ ಬಂಡಿ ಓಡಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಹಿರಿಯ ಮಗ ಹೈದರಾಬಾದ್‌ನಲ್ಲಿ ಆಭರಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ವರ್ಕ್‌ಶಾಪ್‌ ಒಂದರಲ್ಲಿ ಅಪ್ರೆಂಟಿಸ್ ಆಗಿದ್ದಾನೆ.

ಹಲ್ಲೆಯ ವಿಡಿಯೋ ಬಹಿರಂಗವಾದಾಗಿನಿಂದ ನನ್ನ ಕುಟುಂಬ ಭಯದಿಂದ ಬದುಕುತ್ತಿದೆ ಎಂದು ರಿಯಾಝುಲ್ ಹೇಳಿಕೊಂಡಿದ್ದಾರೆ. “ನನಗೆ ಏನಾಯಿತು ಎಂದು ನನ್ನ ಮನೆಯವರು ಅಳುತ್ತಿದ್ದಾರೆ. ಅವರು ಭಯಭೀತರಾಗಿದ್ದಾರೆ. ನಾನು ಕಡು ಬಡವ. ಈಗ ನನಗೆ ನನ್ನ ಕುಟುಂಬದ ಭವಿಷ್ಯದ ಚಿಂತೆಯಾಗಿದೆ. ನಾನು ಯಾರನ್ನೂ ಮಾಂಸಹಾರ ಖರೀದಿಸಲು ಒತ್ತಾಯಿಸಿಲ್ಲ. ಆದರೂ, ಅವರು ನನಗೆ ಏಕೆ ಹೊಡೆದರು ಎಂದು ಗೊತ್ತಿಲ್ಲ” ಎಂದಿದ್ದಾರೆ.

ರಿಯಾಝುಲ್ ಮೇಲೆ ಹಲ್ಲೆ ನಡೆದಿರುವುದು ಒಂದು ಘಟನೆ ಮಾತ್ರವಲ್ಲ. ಟೋಪ್ಸಿಯಾ ಮೂಲದ ಶೇಖ್ ಸಲಾವುದ್ದೀನ್ ಎಂಬ ಮಾರಾಟಗಾರ ಸೇರಿದಂತೆ ಕನಿಷ್ಠ ಇಬ್ಬರು ಇತರ ಪಫ್ಸ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

“ಅವತ್ತು ನನ್ನ ಮೇಲೆಯೂ ಹಲ್ಲೆ ನಡೆಯುತ್ತಿತ್ತು. ಆದರೆ, ನಾನು ಆಗಲೇ ಮನೆಗೆ ಹೋದ ಕಾರಣ ಸ್ವಲ್ಪದರಲ್ಲಿ ಪಾರಾದೆ. ನಮ್ಮಲ್ಲಿ ಸುಮಾರು 15ರಿಂದ 20 ಜನರು ಪಫ್ಸ್ ಮಾರುತ್ತಾರೆ. ದುರ್ಗಾ ಪೂಜೆಯಿಂದ ಹಿಡಿದು ವಿವಿಧ ಪಂದ್ಯಾಟಗಳವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಹಲವು ವರ್ಷಗಳಿಂದ ನಾವು ಪಫ್ಸ್ ಮಾರಿದ್ದೇವೆ. ಎಂದಿಗೂ ಇಂತಹ ಅನುಭ ಆಗಿಲ್ಲ ಎಂದು ರಿಯಾಝುಲ್ ಅವರ ಸ್ನೇಹಿತ ಹಾಗೂ ಪಫ್ಸ್ ಮಾರಾಟಗಾರ ಶೇಖ್ ಮೊಯ್ದುಲ್ ಇಸ್ಲಾಂ ಹೇಳಿರುವುದಾಗಿ ದಿ ವೈರ್‌ ತಿಳಿಸಿದೆ.

ರಿಯಾಝುಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್) (ಸಿಪಿಐ(ಎಂ)) ನಾಯಕ ಮತ್ತು ವಕೀಲ ಸಯಾನ್ ಬಂಡೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸಾರ ಇದು ಗುಂಪು ಹತ್ಯೆಗೆ ಸಮಾನವಾದ ಪ್ರಕರಣ ಎಂದಿದ್ದಾರೆ. ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ.

ಬಂಡೋಪಾಧ್ಯಾಯ ಅವರು ಸೋಮವಾರ (ಡಿಸೆಂಬರ್ 8) ಮಧ್ಯಾಹ್ನ ಕೋಲ್ಕತ್ತಾದ ಮೈದಾನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ನೇರವಾಗಿ ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ದೂರಿನ ಜೊತೆಗೆ ಹೈಕೋರ್ಟ್ ನ್ಯಾಯಾಧೀಶರಿಗೆ ಬರೆದ ಪತ್ರದ ಪ್ರತಿಯನ್ನೂ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ಗುಂಪು ಹಲ್ಲೆ ಕೂಡ ‘ಗುಂಪು ಹತ್ಯೆ’ಯ ವ್ಯಾಪ್ತಿಗೆ ಬರುತ್ತದೆ. ಈ ಘಟನೆ ಕೋಲ್ಕತ್ತಾದ ಹೃದಯ ಭಾಗದಲ್ಲಿ ನಡೆದಿದೆ, ದೂರದ ಜಿಲ್ಲೆಯಲ್ಲಿ ಅಲ್ಲ. ಇಂತಹ ಘಟನೆ ನಗರದ ಮಧ್ಯಭಾಗದಲ್ಲಿ ನಡೆದಿದ್ದರೂ ಕೋಲ್ಕತ್ತಾ ಪೊಲೀಸರು ಮೌನವಾಗಿದ್ದಾರೆ. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಪ್ರಮುಖ ಆರೋಪಿ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸಿಪಿಐ(ಎಂ) ನಾಯಕಿ ದೀಪ್ಸಿತಾ ಧರ್ ರಿಯಾಝುಲ್ ಮೇಲಿನ ದಾಳಿಯ ವಿರುದ್ಧ ಮೊದಲು ಧ್ವನಿ ಎತ್ತಿದವರು. ಇವರು ಸಂತ್ರಸ್ತ ವ್ಯಾಪಾರಿಗಳಿಗೆ ಪರಿಹಾರ ನೀಡಲು ನಿಧಿಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ.

ಮಾಂಸಹಾರ ಸಾಮಾನ್ಯವಾಗಿರುವ ಬಂಗಾಳದಂತಹ ಸ್ಥಳದಲ್ಲಿ ಮಾಂಸಹಾರ ಮಾರಾಟದ ಹೆಸರಿನಲ್ಲಿ ಹಲ್ಲೆ ನಡೆದಿರುವುದು ಆಶ್ಚರ್ಯಕರ. ವೈರಲ್ ವಿಡಿಯೋದಲ್ಲಿ ಹಲ್ಲೆಕೋರರು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಏಕೆ? ಚುನಾವಣಾ ಲಾಭಕ್ಕಾಗಿ ಈ ದ್ವೇಷ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುತ್ತಿದೆಯೇ ಎಂದು ನಾನು ಬಿಜೆಪಿ ಮತ್ತು ಟಿಎಂಸಿ ಎರಡನ್ನೂ ಪ್ರಶ್ನಿಸಲು ಬಯಸುತ್ತೇವೆ ಎಂದು ದೀಪ್ಸಿತಾ ಧರ್ ಹೇಳಿದ್ದರು.

“ನೀವು ಮಾಂಸಾಹಾರ ತಿನ್ನದಿದ್ದರೆ ಖರೀದಿಸಬೇಡಿ, ಆದರೆ ಮಾರಾಟಗಾರನಿಗೆ ಥಳಿಸಿದ್ದು ಏಕೆ? ಅದು ಅವರ ಜೀವನೋಪಾಯ. ನಾನು ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಬರೆದುಕೊಂಡಿದ್ದರು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...