Homeಮುಖಪುಟಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

- Advertisement -
- Advertisement -

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), ಸ್ವರ್ಣೇಂದು ಚಕ್ರವರ್ತಿ (32) ಮತ್ತು ತರುಣ್ ಭಟ್ಟಾಚಾರ್ಯ (51) ಅವರನ್ನು ಬುಧವಾರ (ಡಿಸೆಂಬರ್ 11) ಬೆಳಿಗ್ಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೌಮಿಕ್ ಗೋಲ್ಡರ್ ಪ್ರಕರಣ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ರೀತಿಯ ಬೃಹತ್ ಕಾರ್ಯಕ್ರಮಗಳು ನಡೆಯುವಾಗ ಕಲರ್‌ಫುಲ್ ಟ್ಯೂಬ್ ಪಾಪಡ್, (ಬಣ್ಣದ ನಳಿಕೆ ರೀತಿಯ ಹಪ್ಪಳ), ಲೋಝೆಂಜ್‌ಗಳು (ಮಾತ್ರೆ ರೀತಿಯ ಬಣ್ಣ ತಿಂಡಿಗಳು), ಕಾಟನ್ ಕ್ಯಾಂಡಿ, ಸ್ಕಿನ್ನಿ ಐಸ್‌ಕ್ರೀಮ್ ಸ್ಟಿಕ್‌ಗಳು ಇತ್ಯಾದಿ ಸಣ್ಣಪುಟ್ಟ ತಿಂಡಿ-ತಿನಿಸುಗಳನ್ನು ಮಾರಿ ಜೀವನ ನಡೆಸುವ ನೂರಾರು ಮಂದಿಯಿದ್ದಾರೆ.

ಅಂತಹ ಮಾರಾಟಗಾರರಲ್ಲಿ ಹಲ್ಲೆಗೊಳಗಾದ ಶೇಖ್ ರಿಯಾಝುಲ್ ಕೂಡ ಒಬ್ಬರು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಿವಾಸಿಯಾದ ಇವರು, ಸುಮಾರು ಇಪ್ಪತ್ತು ವರ್ಷಗಳಿಂದ ಕೋಲ್ಕತ್ತಾದಲ್ಲಿ ಪಫ್ಸ್ ಮಾರಾಟ ಮಾಡುತ್ತಿದ್ದಾರೆ ಎಂದು ದಿ ವೈರ್ ವರದಿ ಹೇಳಿದೆ.

ಭಾನುವಾರದ ಭಗವದ್ಗೀತೆ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ರಿಯಾಝುಲ್ ಅವರು ವೆಜ್ ಮತ್ತು ಚಿಕನ್ ಎರಡೂ ರೀತಿಯ ಪಫ್ಸ್‌ಗಳನ್ನು ಬಾಕ್ಸ್‌ವೊಂದರಲ್ಲಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದರು.

ಈ ವೇಳೆ, ಕೆಲವರು ನಿಮ್ಮ ಬಾಕ್ಸ್‌ನಲ್ಲಿ ಚಿಕನ್ ಪಫ್ಸ್ ಇದೆಯಾ? ಎಂದು ರಿಯಾಝುಲ್ ಅವರಿಗೆ ಕೇಳಿದ್ದಾರೆ. ರಿಯಾಝುಲ್ ಇದೆ ಎಂದಾಗ ಅವರು ಥಳಿಸಲು ಶುರು ಮಾಡಿದ್ದಾರೆ. ರಿಯಾಝುಲ್ ಅವರ ಹೆಸರು ಗೊತ್ತಾದ ಮೇಲೆ ಇನ್ನಷ್ಟು ತೀವ್ರವಾಗಿ ಥಳಿಸಿದ್ದಾರೆ. ಅಲ್ಲದೆ, ಬಸ್ಕಿ ಹೊಡೆಸಿದ್ದಾರೆ ಎಂದು ದಿ ವೈರ್ ವರದಿ ವಿವರಿಸಿದೆ.

“ಅವರು ನನ್ನಲ್ಲಿದ್ದ 3 ಸಾವಿರ ರೂಪಾಯಿ ವಸ್ತುವನ್ನು ಹಾಳುಗಡೆವಿದರು. ಆ ಮೊತ್ತ ನನ್ನ ಒಂದು ವಾರದ ಆದಾಯಕ್ಕಿಂತ ಹೆಚ್ಚು” ಎಂದು ರಿಯಾಝುಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಿಯಾಝುಲ್ ಪ್ರತಿದಿನ ಕೋಲ್ಕತ್ತಾದ ಮಧ್ಯಭಾಗದಲ್ಲಿರುವ ಬೇಕರಿಯೊಂದರಿಂದ ವೋಲ್‌ಸೇಲ್ ದರದಲ್ಲಿ ಪಫ್ಸ್ ಖರೀದಿಸಿ, ನಗರದ ವಿವಿಧ ಭಾಗಗಳಲ್ಲಿ ನಡೆದುಕೊಂಡು ಹೋಗಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಗಳು ಅಥವಾ ದೊಡ್ಡ ರಾಜಕೀಯ ಸಮಾವೇಶಗಳು ಇದ್ದರೆ, ಅಲ್ಲಿಯೇ ವ್ಯಾಪಾರ ಮಾಡಿ ದಿನವೊಂದಕ್ಕೆ 500 ರಿಂದ 1,000 ರೂ.ಗಳವರೆಗೆ ಗಳಿಸುತ್ತಿದ್ದರು. ಸಾಮಾನ್ಯ ದಿನಗಳಲ್ಲಿ, ಅವರ ಆದಾಯ 200-300 ರೂ. ಇತ್ತು. ತಲಾ 30-35 ರೂ. ಬೆಲೆಗೆ ಪಫ್ಸ್ ಮಾರುತ್ತಿದ್ದರು. ಕೆಲಸ ನಿಮಿತ್ತ ನಗರದ ಖಿದ್ದರ್ಪೋರ್‌ನಲ್ಲಿ ವಾಸಿಸುತ್ತಿದ್ದರು.

ರಿಯಾಝುಲ್ ಈ ಪಫ್ಸ್ ಮಾರಿಯೇ ಜೀವನದ ಬಂಡಿ ಓಡಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಹಿರಿಯ ಮಗ ಹೈದರಾಬಾದ್‌ನಲ್ಲಿ ಆಭರಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ವರ್ಕ್‌ಶಾಪ್‌ ಒಂದರಲ್ಲಿ ಅಪ್ರೆಂಟಿಸ್ ಆಗಿದ್ದಾನೆ.

ಹಲ್ಲೆಯ ವಿಡಿಯೋ ಬಹಿರಂಗವಾದಾಗಿನಿಂದ ನನ್ನ ಕುಟುಂಬ ಭಯದಿಂದ ಬದುಕುತ್ತಿದೆ ಎಂದು ರಿಯಾಝುಲ್ ಹೇಳಿಕೊಂಡಿದ್ದಾರೆ. “ನನಗೆ ಏನಾಯಿತು ಎಂದು ನನ್ನ ಮನೆಯವರು ಅಳುತ್ತಿದ್ದಾರೆ. ಅವರು ಭಯಭೀತರಾಗಿದ್ದಾರೆ. ನಾನು ಕಡು ಬಡವ. ಈಗ ನನಗೆ ನನ್ನ ಕುಟುಂಬದ ಭವಿಷ್ಯದ ಚಿಂತೆಯಾಗಿದೆ. ನಾನು ಯಾರನ್ನೂ ಮಾಂಸಹಾರ ಖರೀದಿಸಲು ಒತ್ತಾಯಿಸಿಲ್ಲ. ಆದರೂ, ಅವರು ನನಗೆ ಏಕೆ ಹೊಡೆದರು ಎಂದು ಗೊತ್ತಿಲ್ಲ” ಎಂದಿದ್ದಾರೆ.

ರಿಯಾಝುಲ್ ಮೇಲೆ ಹಲ್ಲೆ ನಡೆದಿರುವುದು ಒಂದು ಘಟನೆ ಮಾತ್ರವಲ್ಲ. ಟೋಪ್ಸಿಯಾ ಮೂಲದ ಶೇಖ್ ಸಲಾವುದ್ದೀನ್ ಎಂಬ ಮಾರಾಟಗಾರ ಸೇರಿದಂತೆ ಕನಿಷ್ಠ ಇಬ್ಬರು ಇತರ ಪಫ್ಸ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

“ಅವತ್ತು ನನ್ನ ಮೇಲೆಯೂ ಹಲ್ಲೆ ನಡೆಯುತ್ತಿತ್ತು. ಆದರೆ, ನಾನು ಆಗಲೇ ಮನೆಗೆ ಹೋದ ಕಾರಣ ಸ್ವಲ್ಪದರಲ್ಲಿ ಪಾರಾದೆ. ನಮ್ಮಲ್ಲಿ ಸುಮಾರು 15ರಿಂದ 20 ಜನರು ಪಫ್ಸ್ ಮಾರುತ್ತಾರೆ. ದುರ್ಗಾ ಪೂಜೆಯಿಂದ ಹಿಡಿದು ವಿವಿಧ ಪಂದ್ಯಾಟಗಳವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಹಲವು ವರ್ಷಗಳಿಂದ ನಾವು ಪಫ್ಸ್ ಮಾರಿದ್ದೇವೆ. ಎಂದಿಗೂ ಇಂತಹ ಅನುಭ ಆಗಿಲ್ಲ ಎಂದು ರಿಯಾಝುಲ್ ಅವರ ಸ್ನೇಹಿತ ಹಾಗೂ ಪಫ್ಸ್ ಮಾರಾಟಗಾರ ಶೇಖ್ ಮೊಯ್ದುಲ್ ಇಸ್ಲಾಂ ಹೇಳಿರುವುದಾಗಿ ದಿ ವೈರ್‌ ತಿಳಿಸಿದೆ.

ರಿಯಾಝುಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್) (ಸಿಪಿಐ(ಎಂ)) ನಾಯಕ ಮತ್ತು ವಕೀಲ ಸಯಾನ್ ಬಂಡೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸಾರ ಇದು ಗುಂಪು ಹತ್ಯೆಗೆ ಸಮಾನವಾದ ಪ್ರಕರಣ ಎಂದಿದ್ದಾರೆ. ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ.

ಬಂಡೋಪಾಧ್ಯಾಯ ಅವರು ಸೋಮವಾರ (ಡಿಸೆಂಬರ್ 8) ಮಧ್ಯಾಹ್ನ ಕೋಲ್ಕತ್ತಾದ ಮೈದಾನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ನೇರವಾಗಿ ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ದೂರಿನ ಜೊತೆಗೆ ಹೈಕೋರ್ಟ್ ನ್ಯಾಯಾಧೀಶರಿಗೆ ಬರೆದ ಪತ್ರದ ಪ್ರತಿಯನ್ನೂ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ಗುಂಪು ಹಲ್ಲೆ ಕೂಡ ‘ಗುಂಪು ಹತ್ಯೆ’ಯ ವ್ಯಾಪ್ತಿಗೆ ಬರುತ್ತದೆ. ಈ ಘಟನೆ ಕೋಲ್ಕತ್ತಾದ ಹೃದಯ ಭಾಗದಲ್ಲಿ ನಡೆದಿದೆ, ದೂರದ ಜಿಲ್ಲೆಯಲ್ಲಿ ಅಲ್ಲ. ಇಂತಹ ಘಟನೆ ನಗರದ ಮಧ್ಯಭಾಗದಲ್ಲಿ ನಡೆದಿದ್ದರೂ ಕೋಲ್ಕತ್ತಾ ಪೊಲೀಸರು ಮೌನವಾಗಿದ್ದಾರೆ. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಪ್ರಮುಖ ಆರೋಪಿ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸಿಪಿಐ(ಎಂ) ನಾಯಕಿ ದೀಪ್ಸಿತಾ ಧರ್ ರಿಯಾಝುಲ್ ಮೇಲಿನ ದಾಳಿಯ ವಿರುದ್ಧ ಮೊದಲು ಧ್ವನಿ ಎತ್ತಿದವರು. ಇವರು ಸಂತ್ರಸ್ತ ವ್ಯಾಪಾರಿಗಳಿಗೆ ಪರಿಹಾರ ನೀಡಲು ನಿಧಿಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ.

ಮಾಂಸಹಾರ ಸಾಮಾನ್ಯವಾಗಿರುವ ಬಂಗಾಳದಂತಹ ಸ್ಥಳದಲ್ಲಿ ಮಾಂಸಹಾರ ಮಾರಾಟದ ಹೆಸರಿನಲ್ಲಿ ಹಲ್ಲೆ ನಡೆದಿರುವುದು ಆಶ್ಚರ್ಯಕರ. ವೈರಲ್ ವಿಡಿಯೋದಲ್ಲಿ ಹಲ್ಲೆಕೋರರು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಏಕೆ? ಚುನಾವಣಾ ಲಾಭಕ್ಕಾಗಿ ಈ ದ್ವೇಷ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುತ್ತಿದೆಯೇ ಎಂದು ನಾನು ಬಿಜೆಪಿ ಮತ್ತು ಟಿಎಂಸಿ ಎರಡನ್ನೂ ಪ್ರಶ್ನಿಸಲು ಬಯಸುತ್ತೇವೆ ಎಂದು ದೀಪ್ಸಿತಾ ಧರ್ ಹೇಳಿದ್ದರು.

“ನೀವು ಮಾಂಸಾಹಾರ ತಿನ್ನದಿದ್ದರೆ ಖರೀದಿಸಬೇಡಿ, ಆದರೆ ಮಾರಾಟಗಾರನಿಗೆ ಥಳಿಸಿದ್ದು ಏಕೆ? ಅದು ಅವರ ಜೀವನೋಪಾಯ. ನಾನು ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಬರೆದುಕೊಂಡಿದ್ದರು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...