Homeಮುಖಪುಟಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

- Advertisement -
- Advertisement -

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), ಸ್ವರ್ಣೇಂದು ಚಕ್ರವರ್ತಿ (32) ಮತ್ತು ತರುಣ್ ಭಟ್ಟಾಚಾರ್ಯ (51) ಅವರನ್ನು ಬುಧವಾರ (ಡಿಸೆಂಬರ್ 11) ಬೆಳಿಗ್ಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೌಮಿಕ್ ಗೋಲ್ಡರ್ ಪ್ರಕರಣ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ರೀತಿಯ ಬೃಹತ್ ಕಾರ್ಯಕ್ರಮಗಳು ನಡೆಯುವಾಗ ಕಲರ್‌ಫುಲ್ ಟ್ಯೂಬ್ ಪಾಪಡ್, (ಬಣ್ಣದ ನಳಿಕೆ ರೀತಿಯ ಹಪ್ಪಳ), ಲೋಝೆಂಜ್‌ಗಳು (ಮಾತ್ರೆ ರೀತಿಯ ಬಣ್ಣ ತಿಂಡಿಗಳು), ಕಾಟನ್ ಕ್ಯಾಂಡಿ, ಸ್ಕಿನ್ನಿ ಐಸ್‌ಕ್ರೀಮ್ ಸ್ಟಿಕ್‌ಗಳು ಇತ್ಯಾದಿ ಸಣ್ಣಪುಟ್ಟ ತಿಂಡಿ-ತಿನಿಸುಗಳನ್ನು ಮಾರಿ ಜೀವನ ನಡೆಸುವ ನೂರಾರು ಮಂದಿಯಿದ್ದಾರೆ.

ಅಂತಹ ಮಾರಾಟಗಾರರಲ್ಲಿ ಹಲ್ಲೆಗೊಳಗಾದ ಶೇಖ್ ರಿಯಾಝುಲ್ ಕೂಡ ಒಬ್ಬರು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಿವಾಸಿಯಾದ ಇವರು, ಸುಮಾರು ಇಪ್ಪತ್ತು ವರ್ಷಗಳಿಂದ ಕೋಲ್ಕತ್ತಾದಲ್ಲಿ ಪಫ್ಸ್ ಮಾರಾಟ ಮಾಡುತ್ತಿದ್ದಾರೆ ಎಂದು ದಿ ವೈರ್ ವರದಿ ಹೇಳಿದೆ.

ಭಾನುವಾರದ ಭಗವದ್ಗೀತೆ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ರಿಯಾಝುಲ್ ಅವರು ವೆಜ್ ಮತ್ತು ಚಿಕನ್ ಎರಡೂ ರೀತಿಯ ಪಫ್ಸ್‌ಗಳನ್ನು ಬಾಕ್ಸ್‌ವೊಂದರಲ್ಲಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದರು.

ಈ ವೇಳೆ, ಕೆಲವರು ನಿಮ್ಮ ಬಾಕ್ಸ್‌ನಲ್ಲಿ ಚಿಕನ್ ಪಫ್ಸ್ ಇದೆಯಾ? ಎಂದು ರಿಯಾಝುಲ್ ಅವರಿಗೆ ಕೇಳಿದ್ದಾರೆ. ರಿಯಾಝುಲ್ ಇದೆ ಎಂದಾಗ ಅವರು ಥಳಿಸಲು ಶುರು ಮಾಡಿದ್ದಾರೆ. ರಿಯಾಝುಲ್ ಅವರ ಹೆಸರು ಗೊತ್ತಾದ ಮೇಲೆ ಇನ್ನಷ್ಟು ತೀವ್ರವಾಗಿ ಥಳಿಸಿದ್ದಾರೆ. ಅಲ್ಲದೆ, ಬಸ್ಕಿ ಹೊಡೆಸಿದ್ದಾರೆ ಎಂದು ದಿ ವೈರ್ ವರದಿ ವಿವರಿಸಿದೆ.

“ಅವರು ನನ್ನಲ್ಲಿದ್ದ 3 ಸಾವಿರ ರೂಪಾಯಿ ವಸ್ತುವನ್ನು ಹಾಳುಗಡೆವಿದರು. ಆ ಮೊತ್ತ ನನ್ನ ಒಂದು ವಾರದ ಆದಾಯಕ್ಕಿಂತ ಹೆಚ್ಚು” ಎಂದು ರಿಯಾಝುಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಿಯಾಝುಲ್ ಪ್ರತಿದಿನ ಕೋಲ್ಕತ್ತಾದ ಮಧ್ಯಭಾಗದಲ್ಲಿರುವ ಬೇಕರಿಯೊಂದರಿಂದ ವೋಲ್‌ಸೇಲ್ ದರದಲ್ಲಿ ಪಫ್ಸ್ ಖರೀದಿಸಿ, ನಗರದ ವಿವಿಧ ಭಾಗಗಳಲ್ಲಿ ನಡೆದುಕೊಂಡು ಹೋಗಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಗಳು ಅಥವಾ ದೊಡ್ಡ ರಾಜಕೀಯ ಸಮಾವೇಶಗಳು ಇದ್ದರೆ, ಅಲ್ಲಿಯೇ ವ್ಯಾಪಾರ ಮಾಡಿ ದಿನವೊಂದಕ್ಕೆ 500 ರಿಂದ 1,000 ರೂ.ಗಳವರೆಗೆ ಗಳಿಸುತ್ತಿದ್ದರು. ಸಾಮಾನ್ಯ ದಿನಗಳಲ್ಲಿ, ಅವರ ಆದಾಯ 200-300 ರೂ. ಇತ್ತು. ತಲಾ 30-35 ರೂ. ಬೆಲೆಗೆ ಪಫ್ಸ್ ಮಾರುತ್ತಿದ್ದರು. ಕೆಲಸ ನಿಮಿತ್ತ ನಗರದ ಖಿದ್ದರ್ಪೋರ್‌ನಲ್ಲಿ ವಾಸಿಸುತ್ತಿದ್ದರು.

ರಿಯಾಝುಲ್ ಈ ಪಫ್ಸ್ ಮಾರಿಯೇ ಜೀವನದ ಬಂಡಿ ಓಡಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಹಿರಿಯ ಮಗ ಹೈದರಾಬಾದ್‌ನಲ್ಲಿ ಆಭರಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ವರ್ಕ್‌ಶಾಪ್‌ ಒಂದರಲ್ಲಿ ಅಪ್ರೆಂಟಿಸ್ ಆಗಿದ್ದಾನೆ.

ಹಲ್ಲೆಯ ವಿಡಿಯೋ ಬಹಿರಂಗವಾದಾಗಿನಿಂದ ನನ್ನ ಕುಟುಂಬ ಭಯದಿಂದ ಬದುಕುತ್ತಿದೆ ಎಂದು ರಿಯಾಝುಲ್ ಹೇಳಿಕೊಂಡಿದ್ದಾರೆ. “ನನಗೆ ಏನಾಯಿತು ಎಂದು ನನ್ನ ಮನೆಯವರು ಅಳುತ್ತಿದ್ದಾರೆ. ಅವರು ಭಯಭೀತರಾಗಿದ್ದಾರೆ. ನಾನು ಕಡು ಬಡವ. ಈಗ ನನಗೆ ನನ್ನ ಕುಟುಂಬದ ಭವಿಷ್ಯದ ಚಿಂತೆಯಾಗಿದೆ. ನಾನು ಯಾರನ್ನೂ ಮಾಂಸಹಾರ ಖರೀದಿಸಲು ಒತ್ತಾಯಿಸಿಲ್ಲ. ಆದರೂ, ಅವರು ನನಗೆ ಏಕೆ ಹೊಡೆದರು ಎಂದು ಗೊತ್ತಿಲ್ಲ” ಎಂದಿದ್ದಾರೆ.

ರಿಯಾಝುಲ್ ಮೇಲೆ ಹಲ್ಲೆ ನಡೆದಿರುವುದು ಒಂದು ಘಟನೆ ಮಾತ್ರವಲ್ಲ. ಟೋಪ್ಸಿಯಾ ಮೂಲದ ಶೇಖ್ ಸಲಾವುದ್ದೀನ್ ಎಂಬ ಮಾರಾಟಗಾರ ಸೇರಿದಂತೆ ಕನಿಷ್ಠ ಇಬ್ಬರು ಇತರ ಪಫ್ಸ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

“ಅವತ್ತು ನನ್ನ ಮೇಲೆಯೂ ಹಲ್ಲೆ ನಡೆಯುತ್ತಿತ್ತು. ಆದರೆ, ನಾನು ಆಗಲೇ ಮನೆಗೆ ಹೋದ ಕಾರಣ ಸ್ವಲ್ಪದರಲ್ಲಿ ಪಾರಾದೆ. ನಮ್ಮಲ್ಲಿ ಸುಮಾರು 15ರಿಂದ 20 ಜನರು ಪಫ್ಸ್ ಮಾರುತ್ತಾರೆ. ದುರ್ಗಾ ಪೂಜೆಯಿಂದ ಹಿಡಿದು ವಿವಿಧ ಪಂದ್ಯಾಟಗಳವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಹಲವು ವರ್ಷಗಳಿಂದ ನಾವು ಪಫ್ಸ್ ಮಾರಿದ್ದೇವೆ. ಎಂದಿಗೂ ಇಂತಹ ಅನುಭ ಆಗಿಲ್ಲ ಎಂದು ರಿಯಾಝುಲ್ ಅವರ ಸ್ನೇಹಿತ ಹಾಗೂ ಪಫ್ಸ್ ಮಾರಾಟಗಾರ ಶೇಖ್ ಮೊಯ್ದುಲ್ ಇಸ್ಲಾಂ ಹೇಳಿರುವುದಾಗಿ ದಿ ವೈರ್‌ ತಿಳಿಸಿದೆ.

ರಿಯಾಝುಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್) (ಸಿಪಿಐ(ಎಂ)) ನಾಯಕ ಮತ್ತು ವಕೀಲ ಸಯಾನ್ ಬಂಡೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸಾರ ಇದು ಗುಂಪು ಹತ್ಯೆಗೆ ಸಮಾನವಾದ ಪ್ರಕರಣ ಎಂದಿದ್ದಾರೆ. ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ.

ಬಂಡೋಪಾಧ್ಯಾಯ ಅವರು ಸೋಮವಾರ (ಡಿಸೆಂಬರ್ 8) ಮಧ್ಯಾಹ್ನ ಕೋಲ್ಕತ್ತಾದ ಮೈದಾನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ನೇರವಾಗಿ ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ದೂರಿನ ಜೊತೆಗೆ ಹೈಕೋರ್ಟ್ ನ್ಯಾಯಾಧೀಶರಿಗೆ ಬರೆದ ಪತ್ರದ ಪ್ರತಿಯನ್ನೂ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ಗುಂಪು ಹಲ್ಲೆ ಕೂಡ ‘ಗುಂಪು ಹತ್ಯೆ’ಯ ವ್ಯಾಪ್ತಿಗೆ ಬರುತ್ತದೆ. ಈ ಘಟನೆ ಕೋಲ್ಕತ್ತಾದ ಹೃದಯ ಭಾಗದಲ್ಲಿ ನಡೆದಿದೆ, ದೂರದ ಜಿಲ್ಲೆಯಲ್ಲಿ ಅಲ್ಲ. ಇಂತಹ ಘಟನೆ ನಗರದ ಮಧ್ಯಭಾಗದಲ್ಲಿ ನಡೆದಿದ್ದರೂ ಕೋಲ್ಕತ್ತಾ ಪೊಲೀಸರು ಮೌನವಾಗಿದ್ದಾರೆ. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಪ್ರಮುಖ ಆರೋಪಿ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸಿಪಿಐ(ಎಂ) ನಾಯಕಿ ದೀಪ್ಸಿತಾ ಧರ್ ರಿಯಾಝುಲ್ ಮೇಲಿನ ದಾಳಿಯ ವಿರುದ್ಧ ಮೊದಲು ಧ್ವನಿ ಎತ್ತಿದವರು. ಇವರು ಸಂತ್ರಸ್ತ ವ್ಯಾಪಾರಿಗಳಿಗೆ ಪರಿಹಾರ ನೀಡಲು ನಿಧಿಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ.

ಮಾಂಸಹಾರ ಸಾಮಾನ್ಯವಾಗಿರುವ ಬಂಗಾಳದಂತಹ ಸ್ಥಳದಲ್ಲಿ ಮಾಂಸಹಾರ ಮಾರಾಟದ ಹೆಸರಿನಲ್ಲಿ ಹಲ್ಲೆ ನಡೆದಿರುವುದು ಆಶ್ಚರ್ಯಕರ. ವೈರಲ್ ವಿಡಿಯೋದಲ್ಲಿ ಹಲ್ಲೆಕೋರರು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಏಕೆ? ಚುನಾವಣಾ ಲಾಭಕ್ಕಾಗಿ ಈ ದ್ವೇಷ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುತ್ತಿದೆಯೇ ಎಂದು ನಾನು ಬಿಜೆಪಿ ಮತ್ತು ಟಿಎಂಸಿ ಎರಡನ್ನೂ ಪ್ರಶ್ನಿಸಲು ಬಯಸುತ್ತೇವೆ ಎಂದು ದೀಪ್ಸಿತಾ ಧರ್ ಹೇಳಿದ್ದರು.

“ನೀವು ಮಾಂಸಾಹಾರ ತಿನ್ನದಿದ್ದರೆ ಖರೀದಿಸಬೇಡಿ, ಆದರೆ ಮಾರಾಟಗಾರನಿಗೆ ಥಳಿಸಿದ್ದು ಏಕೆ? ಅದು ಅವರ ಜೀವನೋಪಾಯ. ನಾನು ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಬರೆದುಕೊಂಡಿದ್ದರು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...