Homeಮುಖಪುಟಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನಲ್ಲಿ ಬಂಗಾಳಿ ಮೂಲದ ಮುಸ್ಲಿಂ ಸಮುದಾಯದ ಮತಗಳು ಬಿಜೆಪಿಗೆ ಅಗತ್ಯವಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಶನಿವಾರ ಹೇಳಿದ್ದಾರೆ. ‘ಇಂಡಿಯಾ ಟುಡೇ ಕಾನ್ಕ್ಲೇವ್-2021’ ಕಾರ್ಯಕ್ರದಲ್ಲಿ ಅವರು ಮಾತನಾಡುತ್ತಿದ್ದರು.

“ನನಗೆ ಮಿಯಾ ಮತಗಳು ಬೇಡ, ನಾವು ಸಾಮರಸ್ಯದಿಂದ ಬದುಕುತ್ತೇವೆ. ನಾನು ಅವರ ಬಳಿ ಮತಕ್ಕಾಗಿ ಹೋಗುವುದಿಲ್ಲ, ಅವರು ನನ್ನ ಬಳಿಗೆ ಬರುವುದಿಲ್ಲ. ಅಸ್ಸಾಂ ಅಸ್ಮಿತೆ, ಸಂಸ್ಕೃತಿ ಮತ್ತು ಭೂಮಿಯನ್ನು ಕಳೆದುಕೊಂಡಿರುವುದಕ್ಕೆ ಮೂಲ ಕಾರಣ, ವಲಸಿಗ ಮುಸ್ಲಿಮರು ಎಂದು ರಾಜ್ಯದ ಅನೇಕ ಜನರು ನಂಬಿದ್ದಾರೆ” ಎಂದು ಹಿಮಾಂತ ಶರ್ಮಾ ಹೇದ್ದಾರೆ.

ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂನಲ್ಲಿ ಬಂಗಾಳಿ ಆಡುಭಾಷೆಯ ಮುಸ್ಲಿಂ ಸಮುದಾಯವನ್ನು ‘ಮಿಯಾ ಮುಸ್ಲಿಮರು’ ಎಂದು ಸಾಮಾನ್ಯವಾಗಿ ಆಡುಮಾತಿನಲ್ಲಿ ಕರೆಯಲಾಗುತ್ತದೆ.

“ವಲಸಿಗ ಮುಸ್ಲಿಮರು ಜನಸಂಖ್ಯೆ ಹೆಚ್ಚಿಸುತ್ತಿರುವುದರಿಂದ ಅತಿಕ್ರಮಣ ನಡೆಯುತ್ತಿದೆ. ಅನೇಕ ಅಸ್ಸಾಮಿ ಜನರು ಈ ರೀತಿ ಯೋಚಿಸುತ್ತಾರೆ. ಈ ಪ್ರಕ್ರಿಯೆಯು ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾಯಿತು. ನಾನು ಈ ಇತಿಹಾಸದ ಹೊರೆಯನ್ನು ನನ್ನೊಂದಿಗೆ ಹೊತ್ತುಕೊಂಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾರರು ಮೂರ್ಖರಲ್ಲ, ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೆ ಮತ ನೀಡುತ್ತಾರೆ: ಸಿದ್ದರಾಮಯ್ಯ

ಕಳೆದ ತಿಂಗಳಷ್ಟೇ ಸಿಪಜಾರ್‌ನ ಧೋಲ್ಪುರ್-3 ಗ್ರಾಮದಲ್ಲಿ ಒಕ್ಕಲೆಬ್ಬಿಸುವುದರ ವಿರುದ್ದ ಘರ್ಷಣೆಗಳು ನಡೆದಿದ್ದವು. ಈ ಘರ್ಷನೆಯಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ಒಬ್ಬ ಪೊಲೀಸ್ ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದರು.

ಪೊಲೀಸರ ಗುಂಡಿಗೆ ನೆಲಕ್ಕುರುಳಿದ ವ್ಯಕ್ತಿಯನ್ನು ಪೋಲಿಸರ ಗುಂಪು ಥಳಿಸಿದ್ದು ಮಾತ್ರವಲ್ಲದೆ, ಸರ್ಕಾರಿ ಛಾಯಾಗ್ರಾಹಕ ಕೂಡಾ ವ್ಯಕ್ತಿಯ ಎದೆಯ ಮೇಲೆ ಕುಪ್ಪಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು.

“ಅಸ್ಸಾಂನಲ್ಲಿ ಯಾವುದೇ ದ್ವೇಷದ ಪ್ರತಿಪಾದನೆಯನ್ನು ಮಾಡುತ್ತಿಲ್ಲ. ಸಾವಿರ ಕುಟುಂಬದ ಬಳಿ 77,000 ಎಕರೆ ಭೂಮಿ ಇರುವುದರಿಂದ ನಾವು ಅವರನ್ನು ಹೊರಹಾಕಿದ್ದೇವೆ. ನಮ್ಮ ನೀತಿಯೆಂದರೆ ಒಂದು ಕುಟುಂಬವು 2 ಎಕರೆಗಿಂತ ಹೆಚ್ಚು ಭೂಮಿಯನ್ನು ಆಕ್ರಮಿಸಬಾರದು. ನಾವು ಅನೇಕ ಜನರಿಗೆ ಭೂಮಿಯನ್ನು ನೀಡಬೇಕು. ಜನರು ಭೂಮಿಯನ್ನು ಅತಿಕ್ರಮಿಸಿದರೆ ನಾವು ಅವರನ್ನು ಹೊರಹಾಕಬೇಕು. ಹೊರಹಾಕುವುದು ನಿರಂತರ ಪ್ರಕ್ರಿಯೆ” ಎಂದು ಅಸ್ಸಾಂನಲ್ಲಿ ನಡೆಯುತ್ತಿರುವ ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಂನಲ್ಲಿ 10 ಎಕರೆಗಿಂತ ಹೆಚ್ಚು ಜಮೀನು ಇರುವಕುಟುಂಬಗಳ ಸಂಖ್ಯೆ 89000. ಅದರಲ್ಲಿ, 1000 ಕುಟುಂಬಗಳನ್ನು, ಸೆಲೆಕ್ಟ್ ಮಾಡಿ ಹೊರ ಹಾಕಿದರೆ ನ್ಯಾಯವೆ? ರಾಜ್ಯ ಮುಖಂಡರು ಜಾತಿ, ಧರ್ಮ ಆಧರಿಸಿ ಈ ರೀತಿಯ ನ್ಯಾಯ ಕೊಟ್ಟರೆ, ಇವರು ಜನನಾಯಕರಾಗಲು ಯೋಗ್ಯರೇ?

  2. “ಮುಸ್ಲಿಮರ ಮತಗಳು ಬೇಕಾಗಿಲ್ಲ” ಎಂದು ಹೇಳುವುದು ಸಂವಿಧಾನ ವಿರೋಧಿ ಹೇಳಿಕೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...