Homeಮುಖಪುಟಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನಲ್ಲಿ ಬಂಗಾಳಿ ಮೂಲದ ಮುಸ್ಲಿಂ ಸಮುದಾಯದ ಮತಗಳು ಬಿಜೆಪಿಗೆ ಅಗತ್ಯವಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಶನಿವಾರ ಹೇಳಿದ್ದಾರೆ. ‘ಇಂಡಿಯಾ ಟುಡೇ ಕಾನ್ಕ್ಲೇವ್-2021’ ಕಾರ್ಯಕ್ರದಲ್ಲಿ ಅವರು ಮಾತನಾಡುತ್ತಿದ್ದರು.

“ನನಗೆ ಮಿಯಾ ಮತಗಳು ಬೇಡ, ನಾವು ಸಾಮರಸ್ಯದಿಂದ ಬದುಕುತ್ತೇವೆ. ನಾನು ಅವರ ಬಳಿ ಮತಕ್ಕಾಗಿ ಹೋಗುವುದಿಲ್ಲ, ಅವರು ನನ್ನ ಬಳಿಗೆ ಬರುವುದಿಲ್ಲ. ಅಸ್ಸಾಂ ಅಸ್ಮಿತೆ, ಸಂಸ್ಕೃತಿ ಮತ್ತು ಭೂಮಿಯನ್ನು ಕಳೆದುಕೊಂಡಿರುವುದಕ್ಕೆ ಮೂಲ ಕಾರಣ, ವಲಸಿಗ ಮುಸ್ಲಿಮರು ಎಂದು ರಾಜ್ಯದ ಅನೇಕ ಜನರು ನಂಬಿದ್ದಾರೆ” ಎಂದು ಹಿಮಾಂತ ಶರ್ಮಾ ಹೇದ್ದಾರೆ.

ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂನಲ್ಲಿ ಬಂಗಾಳಿ ಆಡುಭಾಷೆಯ ಮುಸ್ಲಿಂ ಸಮುದಾಯವನ್ನು ‘ಮಿಯಾ ಮುಸ್ಲಿಮರು’ ಎಂದು ಸಾಮಾನ್ಯವಾಗಿ ಆಡುಮಾತಿನಲ್ಲಿ ಕರೆಯಲಾಗುತ್ತದೆ.

“ವಲಸಿಗ ಮುಸ್ಲಿಮರು ಜನಸಂಖ್ಯೆ ಹೆಚ್ಚಿಸುತ್ತಿರುವುದರಿಂದ ಅತಿಕ್ರಮಣ ನಡೆಯುತ್ತಿದೆ. ಅನೇಕ ಅಸ್ಸಾಮಿ ಜನರು ಈ ರೀತಿ ಯೋಚಿಸುತ್ತಾರೆ. ಈ ಪ್ರಕ್ರಿಯೆಯು ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾಯಿತು. ನಾನು ಈ ಇತಿಹಾಸದ ಹೊರೆಯನ್ನು ನನ್ನೊಂದಿಗೆ ಹೊತ್ತುಕೊಂಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾರರು ಮೂರ್ಖರಲ್ಲ, ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೆ ಮತ ನೀಡುತ್ತಾರೆ: ಸಿದ್ದರಾಮಯ್ಯ

ಕಳೆದ ತಿಂಗಳಷ್ಟೇ ಸಿಪಜಾರ್‌ನ ಧೋಲ್ಪುರ್-3 ಗ್ರಾಮದಲ್ಲಿ ಒಕ್ಕಲೆಬ್ಬಿಸುವುದರ ವಿರುದ್ದ ಘರ್ಷಣೆಗಳು ನಡೆದಿದ್ದವು. ಈ ಘರ್ಷನೆಯಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ಒಬ್ಬ ಪೊಲೀಸ್ ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದರು.

ಪೊಲೀಸರ ಗುಂಡಿಗೆ ನೆಲಕ್ಕುರುಳಿದ ವ್ಯಕ್ತಿಯನ್ನು ಪೋಲಿಸರ ಗುಂಪು ಥಳಿಸಿದ್ದು ಮಾತ್ರವಲ್ಲದೆ, ಸರ್ಕಾರಿ ಛಾಯಾಗ್ರಾಹಕ ಕೂಡಾ ವ್ಯಕ್ತಿಯ ಎದೆಯ ಮೇಲೆ ಕುಪ್ಪಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು.

“ಅಸ್ಸಾಂನಲ್ಲಿ ಯಾವುದೇ ದ್ವೇಷದ ಪ್ರತಿಪಾದನೆಯನ್ನು ಮಾಡುತ್ತಿಲ್ಲ. ಸಾವಿರ ಕುಟುಂಬದ ಬಳಿ 77,000 ಎಕರೆ ಭೂಮಿ ಇರುವುದರಿಂದ ನಾವು ಅವರನ್ನು ಹೊರಹಾಕಿದ್ದೇವೆ. ನಮ್ಮ ನೀತಿಯೆಂದರೆ ಒಂದು ಕುಟುಂಬವು 2 ಎಕರೆಗಿಂತ ಹೆಚ್ಚು ಭೂಮಿಯನ್ನು ಆಕ್ರಮಿಸಬಾರದು. ನಾವು ಅನೇಕ ಜನರಿಗೆ ಭೂಮಿಯನ್ನು ನೀಡಬೇಕು. ಜನರು ಭೂಮಿಯನ್ನು ಅತಿಕ್ರಮಿಸಿದರೆ ನಾವು ಅವರನ್ನು ಹೊರಹಾಕಬೇಕು. ಹೊರಹಾಕುವುದು ನಿರಂತರ ಪ್ರಕ್ರಿಯೆ” ಎಂದು ಅಸ್ಸಾಂನಲ್ಲಿ ನಡೆಯುತ್ತಿರುವ ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಂನಲ್ಲಿ 10 ಎಕರೆಗಿಂತ ಹೆಚ್ಚು ಜಮೀನು ಇರುವಕುಟುಂಬಗಳ ಸಂಖ್ಯೆ 89000. ಅದರಲ್ಲಿ, 1000 ಕುಟುಂಬಗಳನ್ನು, ಸೆಲೆಕ್ಟ್ ಮಾಡಿ ಹೊರ ಹಾಕಿದರೆ ನ್ಯಾಯವೆ? ರಾಜ್ಯ ಮುಖಂಡರು ಜಾತಿ, ಧರ್ಮ ಆಧರಿಸಿ ಈ ರೀತಿಯ ನ್ಯಾಯ ಕೊಟ್ಟರೆ, ಇವರು ಜನನಾಯಕರಾಗಲು ಯೋಗ್ಯರೇ?

  2. “ಮುಸ್ಲಿಮರ ಮತಗಳು ಬೇಕಾಗಿಲ್ಲ” ಎಂದು ಹೇಳುವುದು ಸಂವಿಧಾನ ವಿರೋಧಿ ಹೇಳಿಕೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...