Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...