Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...