Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...