Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...