Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...