Homeಮುಖಪುಟಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

- Advertisement -
- Advertisement -

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮಾರ್ಚ್ 1ರಂದು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು maktoobmedia.com ವರದಿ ಮಾಡಿದೆ.

ವರದಿಯ ಪ್ರಕಾರ, ಮಧುಬನಿಯ ಘೋಷರ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಹಿ ಗ್ರಾಮದ ರೋಷನ್ ಖಾತೂನ್ ಮೃತ ಮಹಿಳೆ. ಈಕೆ ಫೆಬ್ರವರಿ 28ರಂದು ಸ್ಥಳೀಯ ವಿವಾದವೊಂದನ್ನು ಬಗೆಹರಿಸಲು ಸಹಾಯ ಕೋರಿ ಗ್ರಾಮದ ಮುಖ್ಯಸ್ಥೆಯ ಬಳಿ ಹೋಗಿದ್ದರು. ಈ ವೇಳೆ ಮುಖ್ಯಸ್ಥೆಯ ಮಗನ ನೇತೃತ್ವದಲ್ಲಿ ಗುಂಪು ಹಲ್ಲೆ ನಡೆಸಲಾಗಿದೆ.

ಸ್ಥಳೀಯರ ಪ್ರಕಾರ, 40 ವರ್ಷದ ರೋಷನ್ ಖಾತೂನ್ ಅವರು ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಗ್ರಾಮದ ಮುಖ್ಯಸ್ಥೆ ಮುಖಿಯಾ ಕುಮಾರಿ ದೇವಿ ಅವರ ಮನೆಗೆ ಹೋಗಿದ್ದರು. ಈ ವೇಳೆ ಮುಖಿಯಾ ಕುಮಾರಿಯ ಮಗನ ನೇತೃತ್ವದ ಗುಂಪು ಖಾತೂನ್ ಅವರನ್ನು ಕಂಬಕ್ಕೆ ಕಟ್ಟಿ ತೀವ್ರವಾಗಿ ಥಳಿಸಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನೆರೆದಿದ್ದವರು ಕೂಡ ಆಕೆಯನ್ನು ನಿಂದಿಸಿದ್ದಾರೆ.

ಖಾತೂನ್ ಅವರ ಪತಿಯನ್ನು ಗ್ರಾಮದ ಮುಖ್ಯಸ್ಥೆಯ ಮಗ ಬಲವಂತವಾಗಿ ಕರೆದೊಯ್ದಿದ್ದ. ಈ ಬಗ್ಗೆ ಮಾಹಿತಿ ತಿಳಿದು ವಿಚಾರಿಸಲು ಹೋದ ವೇಳೆ, ಖಾತೂನ್‌ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಒಂದು ಹೇಳುತ್ತಿದೆ.

ಹಲ್ಲೆಯ ಸಮಯದಲ್ಲಿ ಖಾತೂನ್ ಅವರು ರಂಝಾನ್ ಉಪವಾಸದಲ್ಲಿದ್ದರು. ತೀವ್ರ ದಾಳಿಯಿಂದ ಬಾಯಾರಿಕೆಯಾದಾಗ ಅವರು ನೀರು ಕೇಳಿದ್ದರು. ಈ ವೇಳೆ ಆರೋಪಿಗಳು ಅವರಿಗೆ ಬಲವಂತವಾಗಿ ಮದ್ಯ ಮಿಶ್ರಿತ ಮೂತ್ರ ಕುಡಿಸಿದ್ದಾರೆ ಎಂದು ಕುಟುಂಬ ಸದಸ್ಯರು ಮತ್ತು ಪ್ರತ್ಯಕ್ಷದರ್ಶಿಗಳು ಗಂಭೀರ ಆರೋಪ ಮಾಡಿದ್ದಾರೆ.

ಅನೇಕ ಜನರ ಸಮ್ಮುಖದಲ್ಲೇ ಖಾತೂನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಅವರೆಲ್ಲರೂ ಮೂಕ ಪ್ರೇಕ್ಷರಾಗಿ ನಿಂತಿದ್ದರು. ಖಾತೂನ್ ತೀವ್ರ ಅಸಹಾಯಕರಾಗಿದ್ದರು. ಹಲ್ಲೆಯನ್ನು ನಿಲ್ಲಿಸುವಂತೆ ಪದೇ ಪದೇ ಬೇಡಿಕೊಳ್ಳುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿರುವುದಾಗಿ maktoobmedia.com ಉಲ್ಲೇಖಿಸಿದೆ.

ಆರೋಪಗಳನ್ನು ದೃಢಪಡಿಸದ ಪೊಲೀಸರು

ಆದಾಗ್ಯೂ, ಪೊಲೀಸ್ ಅಧಿಕಾರಿಗಳು ಈ ಆರೋಪಗಳನ್ನು ಇನ್ನೂ ದೃಢಪಡಿಸಿಲ್ಲ ಎಂದು ತಿಳಿಸಿದ್ದಾರೆ. ತನಿಖೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು, “ಸಂತ್ರಸ್ತೆ ಉಪವಾಸವಿದ್ದ ಬಗ್ಗೆ ಮತ್ತು ನೀರು ಕೇಳಿದ ಬಗ್ಗೆ ಕೆಲವು ವರದಿಗಳನ್ನು ನಾವು ನೋಡಿದ್ದೇವೆ. ಆದರೆ ಈ ಹಂತದಲ್ಲಿ ನಾವು ಈ ವಿವರಗಳನ್ನು ಖಚಿತಪಡಿಸಲು ಸಾಧ್ಯವಿಲ್ಲ. ತನಿಖೆ ಮುಂದುವರಿಯುತ್ತಿದ್ದು, ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ಹೇಳಿರುವುದಾಗಿ maktoobmedia.com ತಿಳಿಸಿದೆ.

ಎಫ್‌ಐಆರ್ ದಾಖಲು, ಪ್ರಮುಖ ಆರೋಪಿಯ ಬಂಧನ

ಪ್ರಕರಣದ ಮುಖ್ಯ ಆರೋಪಿ, ಗ್ರಾಮದ ಮುಖ್ಯಸ್ಥೆಯ ಮಗ ಮಂಗನು ಸಿಂಗ್ (ಮನು ಸಿಂಗ್) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಒಟ್ಟು 17 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ವರದಿಯಾಗಿದೆ.

ಮನ್ಸೂರಿ ಸಮುದಾಯದ ರಾಜ್ಯಾಧ್ಯಕ್ಷ ಅಜಯ್ ಮನ್ಸೂರಿ ಅವರು, “ಮೃತ ಮಹಿಳೆಗೆ ನ್ಯಾಯ ಒದಗಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ. ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

ರೋಷನ್ ಅವರ ಪತಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

“ರೋಷನ್ ಖಾತೂನ್ ಒಬ್ಬಳು ಬಡ ಮಹಿಳೆ. ಸಹಾಯ ಯಾಚಿಸಲು ಹೋದ ಆಕೆಯನ್ನು ಥಳಿಸಿ ಕೊಂದಿರುವುದು ನಮಗೆ ತೀವ್ರ ನೋವುಂಟು ಮಾಡಿದೆ. ಆಕೆಗೆ ನ್ಯಾಯ ಮತ್ತು ಎಲ್ಲಾ ನಾಗರಿಕರಿಗೆ ಸುರಕ್ಷತೆಯನ್ನು ನಾವು ಬಯಸುತ್ತೇವೆ” ಎಂದು ಸಮುದಾಯದ ಹಿರಿಯರೊಬ್ಬರು ಸ್ಥಳೀಯ ಮಾಧ್ಯಮ ಮಿಥ್ಲಾ ಸಮಾಚಾರ್‌ಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...