Homeಮುಖಪುಟಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ಮೈಸೂರಿನ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ಆಗ್ರಹಿಸಿದ್ದಾರೆ.

ನಜ್ಮಾ ಅವರು ನೀಡಿರುವ ದೂರಿನ ಸಾರಾಂಶ ಇಲ್ಲಿದೆ :

ರವಿವಾರ ದಿನಾಂಕ 24.12.2023 ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಎಂಬಾತನು “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ, ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗೆಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ 294, 354, 509, 506, ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, “ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು.ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು” ಎಂದು ಹೇಳಿದ್ದಾನೆ. ಇದು ಎರಡು ಧರ್ಮಗಳನ್ನು ಎತ್ತಿಕಟ್ಟಿ ಗಲಭೆ ಮಾಡಿಸುವ, ಧರ್ಮಗಳ ಮಧ್ಯೆ ಅಪನಂಬಿಕೆ ಹುಟ್ಟಿಸಿ, ಸಾಮಾಜಿಕ ಅಶಾಂತಿ ಸೃಷ್ಟಿಸುವ, ಧರ್ಮವೊಂದನ್ನು ಅವಹೇಳನ ಮಾಡುವ ಕೃತ್ಯವಾಗಿದ್ದು ಐಪಿಸಿ 153a, 295, 295a, 298 ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟನು “ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು” ಎಂದು ಸಾರ್ವಜನಿಕವಾಗಿ ಹೇಳಿದ್ದಾನೆ. ಭಾರತದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ಮಾತ್ರ ಹೀಗೆ ಹೇಳಲು ಸಾಧ್ಯ. ಭಯೋತ್ಪಾದಕ ಕಸಬ್ ಗೂ ಭಾರತದ ಮುಸ್ಲಿಂ ಸಮುದಾಯಕ್ಕೂ ಯಾವ ಸಂಬಂಧವೂ ಇಲ್ಲ. ಮುಸ್ಲಿಮರೂ ಸೇರಿದಂತೆ ಭಾರತದ ಪ್ರತಿಯೊಬ್ಬ ನಾಗರಿಕರು ಕಸಬ್‌ನ ಕೃತ್ಯವನ್ನು ಖಂಡಿಸುತ್ತಾರೆ. ಆದರೆ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ಕಸಬ್‌ನನ್ನು ತನ್ನ ಕೃತ್ಯಗಳಿಗೆ ಬಳಸಿಕೊಂಡಿದ್ದಾನೆ. ಮಾತ್ರವಲ್ಲದೆ ಕಸಬ್‌ಗೆ ಶಿಕ್ಷೆ ನೀಡಿರುವ ನ್ಯಾಯಾಲಯವನ್ನು ಟೀಕಿಸಿದ್ದಾನೆ. “ಕಸಬ್ ಗಾಗಿ ಕೋರ್ಟ್ ರಾತ್ರಿ ತೆರೆಯಿತು. ಕೋರ್ಟ್ ವ್ಯವಸ್ಥೆ ಹೇಗಿದೆ” ಎಂದು ಟೀಕಿಸಿ ಕಸಬ್ ಗೆ ಶಿಕ್ಷೆ ನೀಡಲು ನ್ಯಾಯಾಲಯ ಕೈಗೊಂಡಿರುವ ತುರ್ತು ಕ್ರಮವನ್ನು ಟೀಕಿಸುವ ಮೂಲಕ IPC 12 Contempt of Court Act 1971 ಪ್ರಕಾರ ಗುರುತರ ಅಪರಾಧ ಮಾಡಿದ್ದಾನೆ.

ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ವೃತ್ತಿಪರ ಕ್ರಿಮಿನಲ್ ಆರೋಪಿಯಾಗಿದ್ದಾನೆ. ಜೀವನ ನಿರ್ವಹಣೆಗಾಗಿ ಯಾವುದೇ ನಿರ್ದಿಷ್ಟ ವೃತ್ತಿ ಹೊಂದಿಲ್ಲದ ಈತ ಈ ಹಿಂದೆಯೂ ಸಾಮಾಜಿಕ ಅಶಾಂತಿ, ಗಲಭೆ ಸೃಷ್ಟಿ, ಮಹಿಳೆಯರ ಅವಹೇಳನ, ಹುಡುಗಿಯರ ಚುಡಾವಣೆ, ಧರ್ಮಗಳ ಅವಹೇಳನ ಪ್ರಕರಣಗಳದ್ದೇ ರೀತಿಯ ಕೃತ್ಯಗಳನ್ನು ಹಲವು ಬಾರಿ ನಡೆಸಿದ್ದಾನೆ. ಕರ್ನಾಟಕದ ಹಲವು ಠಾಣೆಗಳಲ್ಲಿ ಈತನ ವಿರುದ್ದ ಈ ಹಿಂದೆ ಇಂತದ್ದೇ ಪ್ರಕರಣಗಳು ದಾಖಲಾಗಿದೆ. ಆದರೂ ಬುದ್ದಿ ಕಲಿಯದ ಈತ ತನ್ನ ಚಾಳಿಯನ್ನು ಮುಂದುವರೆಸಿದ್ದು, ಆದ್ದರಿಂದ ಈತನ ವಿರುದ್ದ ರೌಡಿ ಹಾಳೆ ತೆರೆದು, IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು ಎಂದು ದೂರು.

ದೂರು ನೀಡಿರುವ ಕುರಿತು ನಜ್ಮಾ ಅವರು ನಾನೂ ಗೌರಿಗೆ ಖಚಿತಪಡಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ನಜ್ಮಾ ನಝೀರ್ ನೀಡಿರುವ ದೂರು ಮತ್ತು ಎಫ್‌ಐಆರ್‌ ಪ್ರತಿ ಇಲ್ಲಿದೆ :  

ಪ್ರಭಾಕರ್ ಭಟ್ ಹೇಳಿಕೆ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ವಕ್ತಾರೆ ಯು.ಟಿ ಫರ್ಝಾನ ಅವರು “ಒಂದು ಸಮುದಾಯದ ಮಹಿಳೆಯರನ್ನು ಸಾರ್ವಜನಿಕವಾಗಿ ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್‌ನಂತವರನ್ನು ತಮ್ಮ ನಾಯಕ ಎಂದು ಹೇಳಿಕೊಳ್ಳುವ ದುಸ್ಥಿಯಲ್ಲಿ ಹಿಂದೂ ಸಮಾಜ ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಆರೆಸ್ಸೆಸ್ ಜೊತೆ ನಮಗೆ ಸೈದ್ದಾಂತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ, ಅವರು ಹಿಂದಿನಿಂದಲೂ ಭಾರತದ ಸಂಸ್ಕೃತಿಗೆ ಗೌರವ ಕೊಡುವ ಸಂಘಟನೆ ಎಂದು ಗುರುತಿಸಿಕೊಂಡಿದ್ದಾರೆ. ಹೀಗಿರುವಾಗ, ಮಹಿಳೆಯರನ್ನು ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಆರೆಸ್ಸೆಸ್ ಘೋಷಿಸಲಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...