Homeಮುಖಪುಟಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ಮೈಸೂರಿನ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ಆಗ್ರಹಿಸಿದ್ದಾರೆ.

ನಜ್ಮಾ ಅವರು ನೀಡಿರುವ ದೂರಿನ ಸಾರಾಂಶ ಇಲ್ಲಿದೆ :

ರವಿವಾರ ದಿನಾಂಕ 24.12.2023 ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಎಂಬಾತನು “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ, ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗೆಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ 294, 354, 509, 506, ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, “ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು.ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು” ಎಂದು ಹೇಳಿದ್ದಾನೆ. ಇದು ಎರಡು ಧರ್ಮಗಳನ್ನು ಎತ್ತಿಕಟ್ಟಿ ಗಲಭೆ ಮಾಡಿಸುವ, ಧರ್ಮಗಳ ಮಧ್ಯೆ ಅಪನಂಬಿಕೆ ಹುಟ್ಟಿಸಿ, ಸಾಮಾಜಿಕ ಅಶಾಂತಿ ಸೃಷ್ಟಿಸುವ, ಧರ್ಮವೊಂದನ್ನು ಅವಹೇಳನ ಮಾಡುವ ಕೃತ್ಯವಾಗಿದ್ದು ಐಪಿಸಿ 153a, 295, 295a, 298 ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟನು “ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು” ಎಂದು ಸಾರ್ವಜನಿಕವಾಗಿ ಹೇಳಿದ್ದಾನೆ. ಭಾರತದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ಮಾತ್ರ ಹೀಗೆ ಹೇಳಲು ಸಾಧ್ಯ. ಭಯೋತ್ಪಾದಕ ಕಸಬ್ ಗೂ ಭಾರತದ ಮುಸ್ಲಿಂ ಸಮುದಾಯಕ್ಕೂ ಯಾವ ಸಂಬಂಧವೂ ಇಲ್ಲ. ಮುಸ್ಲಿಮರೂ ಸೇರಿದಂತೆ ಭಾರತದ ಪ್ರತಿಯೊಬ್ಬ ನಾಗರಿಕರು ಕಸಬ್‌ನ ಕೃತ್ಯವನ್ನು ಖಂಡಿಸುತ್ತಾರೆ. ಆದರೆ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ಕಸಬ್‌ನನ್ನು ತನ್ನ ಕೃತ್ಯಗಳಿಗೆ ಬಳಸಿಕೊಂಡಿದ್ದಾನೆ. ಮಾತ್ರವಲ್ಲದೆ ಕಸಬ್‌ಗೆ ಶಿಕ್ಷೆ ನೀಡಿರುವ ನ್ಯಾಯಾಲಯವನ್ನು ಟೀಕಿಸಿದ್ದಾನೆ. “ಕಸಬ್ ಗಾಗಿ ಕೋರ್ಟ್ ರಾತ್ರಿ ತೆರೆಯಿತು. ಕೋರ್ಟ್ ವ್ಯವಸ್ಥೆ ಹೇಗಿದೆ” ಎಂದು ಟೀಕಿಸಿ ಕಸಬ್ ಗೆ ಶಿಕ್ಷೆ ನೀಡಲು ನ್ಯಾಯಾಲಯ ಕೈಗೊಂಡಿರುವ ತುರ್ತು ಕ್ರಮವನ್ನು ಟೀಕಿಸುವ ಮೂಲಕ IPC 12 Contempt of Court Act 1971 ಪ್ರಕಾರ ಗುರುತರ ಅಪರಾಧ ಮಾಡಿದ್ದಾನೆ.

ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ವೃತ್ತಿಪರ ಕ್ರಿಮಿನಲ್ ಆರೋಪಿಯಾಗಿದ್ದಾನೆ. ಜೀವನ ನಿರ್ವಹಣೆಗಾಗಿ ಯಾವುದೇ ನಿರ್ದಿಷ್ಟ ವೃತ್ತಿ ಹೊಂದಿಲ್ಲದ ಈತ ಈ ಹಿಂದೆಯೂ ಸಾಮಾಜಿಕ ಅಶಾಂತಿ, ಗಲಭೆ ಸೃಷ್ಟಿ, ಮಹಿಳೆಯರ ಅವಹೇಳನ, ಹುಡುಗಿಯರ ಚುಡಾವಣೆ, ಧರ್ಮಗಳ ಅವಹೇಳನ ಪ್ರಕರಣಗಳದ್ದೇ ರೀತಿಯ ಕೃತ್ಯಗಳನ್ನು ಹಲವು ಬಾರಿ ನಡೆಸಿದ್ದಾನೆ. ಕರ್ನಾಟಕದ ಹಲವು ಠಾಣೆಗಳಲ್ಲಿ ಈತನ ವಿರುದ್ದ ಈ ಹಿಂದೆ ಇಂತದ್ದೇ ಪ್ರಕರಣಗಳು ದಾಖಲಾಗಿದೆ. ಆದರೂ ಬುದ್ದಿ ಕಲಿಯದ ಈತ ತನ್ನ ಚಾಳಿಯನ್ನು ಮುಂದುವರೆಸಿದ್ದು, ಆದ್ದರಿಂದ ಈತನ ವಿರುದ್ದ ರೌಡಿ ಹಾಳೆ ತೆರೆದು, IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು ಎಂದು ದೂರು.

ದೂರು ನೀಡಿರುವ ಕುರಿತು ನಜ್ಮಾ ಅವರು ನಾನೂ ಗೌರಿಗೆ ಖಚಿತಪಡಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ನಜ್ಮಾ ನಝೀರ್ ನೀಡಿರುವ ದೂರು ಮತ್ತು ಎಫ್‌ಐಆರ್‌ ಪ್ರತಿ ಇಲ್ಲಿದೆ :  

ಪ್ರಭಾಕರ್ ಭಟ್ ಹೇಳಿಕೆ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ವಕ್ತಾರೆ ಯು.ಟಿ ಫರ್ಝಾನ ಅವರು “ಒಂದು ಸಮುದಾಯದ ಮಹಿಳೆಯರನ್ನು ಸಾರ್ವಜನಿಕವಾಗಿ ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್‌ನಂತವರನ್ನು ತಮ್ಮ ನಾಯಕ ಎಂದು ಹೇಳಿಕೊಳ್ಳುವ ದುಸ್ಥಿಯಲ್ಲಿ ಹಿಂದೂ ಸಮಾಜ ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಆರೆಸ್ಸೆಸ್ ಜೊತೆ ನಮಗೆ ಸೈದ್ದಾಂತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ, ಅವರು ಹಿಂದಿನಿಂದಲೂ ಭಾರತದ ಸಂಸ್ಕೃತಿಗೆ ಗೌರವ ಕೊಡುವ ಸಂಘಟನೆ ಎಂದು ಗುರುತಿಸಿಕೊಂಡಿದ್ದಾರೆ. ಹೀಗಿರುವಾಗ, ಮಹಿಳೆಯರನ್ನು ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಆರೆಸ್ಸೆಸ್ ಘೋಷಿಸಲಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...