Homeಮುಖಪುಟಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ಮೈಸೂರಿನ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ಆಗ್ರಹಿಸಿದ್ದಾರೆ.

ನಜ್ಮಾ ಅವರು ನೀಡಿರುವ ದೂರಿನ ಸಾರಾಂಶ ಇಲ್ಲಿದೆ :

ರವಿವಾರ ದಿನಾಂಕ 24.12.2023 ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಎಂಬಾತನು “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ, ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗೆಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ 294, 354, 509, 506, ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, “ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು.ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು” ಎಂದು ಹೇಳಿದ್ದಾನೆ. ಇದು ಎರಡು ಧರ್ಮಗಳನ್ನು ಎತ್ತಿಕಟ್ಟಿ ಗಲಭೆ ಮಾಡಿಸುವ, ಧರ್ಮಗಳ ಮಧ್ಯೆ ಅಪನಂಬಿಕೆ ಹುಟ್ಟಿಸಿ, ಸಾಮಾಜಿಕ ಅಶಾಂತಿ ಸೃಷ್ಟಿಸುವ, ಧರ್ಮವೊಂದನ್ನು ಅವಹೇಳನ ಮಾಡುವ ಕೃತ್ಯವಾಗಿದ್ದು ಐಪಿಸಿ 153a, 295, 295a, 298 ಪ್ರಕಾರ ಅಪರಾಧವಾಗಿದೆ.

ಮುಂದುವರೆದು ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟನು “ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು” ಎಂದು ಸಾರ್ವಜನಿಕವಾಗಿ ಹೇಳಿದ್ದಾನೆ. ಭಾರತದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ವ್ಯಕ್ತಿ ಮಾತ್ರ ಹೀಗೆ ಹೇಳಲು ಸಾಧ್ಯ. ಭಯೋತ್ಪಾದಕ ಕಸಬ್ ಗೂ ಭಾರತದ ಮುಸ್ಲಿಂ ಸಮುದಾಯಕ್ಕೂ ಯಾವ ಸಂಬಂಧವೂ ಇಲ್ಲ. ಮುಸ್ಲಿಮರೂ ಸೇರಿದಂತೆ ಭಾರತದ ಪ್ರತಿಯೊಬ್ಬ ನಾಗರಿಕರು ಕಸಬ್‌ನ ಕೃತ್ಯವನ್ನು ಖಂಡಿಸುತ್ತಾರೆ. ಆದರೆ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ಕಸಬ್‌ನನ್ನು ತನ್ನ ಕೃತ್ಯಗಳಿಗೆ ಬಳಸಿಕೊಂಡಿದ್ದಾನೆ. ಮಾತ್ರವಲ್ಲದೆ ಕಸಬ್‌ಗೆ ಶಿಕ್ಷೆ ನೀಡಿರುವ ನ್ಯಾಯಾಲಯವನ್ನು ಟೀಕಿಸಿದ್ದಾನೆ. “ಕಸಬ್ ಗಾಗಿ ಕೋರ್ಟ್ ರಾತ್ರಿ ತೆರೆಯಿತು. ಕೋರ್ಟ್ ವ್ಯವಸ್ಥೆ ಹೇಗಿದೆ” ಎಂದು ಟೀಕಿಸಿ ಕಸಬ್ ಗೆ ಶಿಕ್ಷೆ ನೀಡಲು ನ್ಯಾಯಾಲಯ ಕೈಗೊಂಡಿರುವ ತುರ್ತು ಕ್ರಮವನ್ನು ಟೀಕಿಸುವ ಮೂಲಕ IPC 12 Contempt of Court Act 1971 ಪ್ರಕಾರ ಗುರುತರ ಅಪರಾಧ ಮಾಡಿದ್ದಾನೆ.

ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟನು ವೃತ್ತಿಪರ ಕ್ರಿಮಿನಲ್ ಆರೋಪಿಯಾಗಿದ್ದಾನೆ. ಜೀವನ ನಿರ್ವಹಣೆಗಾಗಿ ಯಾವುದೇ ನಿರ್ದಿಷ್ಟ ವೃತ್ತಿ ಹೊಂದಿಲ್ಲದ ಈತ ಈ ಹಿಂದೆಯೂ ಸಾಮಾಜಿಕ ಅಶಾಂತಿ, ಗಲಭೆ ಸೃಷ್ಟಿ, ಮಹಿಳೆಯರ ಅವಹೇಳನ, ಹುಡುಗಿಯರ ಚುಡಾವಣೆ, ಧರ್ಮಗಳ ಅವಹೇಳನ ಪ್ರಕರಣಗಳದ್ದೇ ರೀತಿಯ ಕೃತ್ಯಗಳನ್ನು ಹಲವು ಬಾರಿ ನಡೆಸಿದ್ದಾನೆ. ಕರ್ನಾಟಕದ ಹಲವು ಠಾಣೆಗಳಲ್ಲಿ ಈತನ ವಿರುದ್ದ ಈ ಹಿಂದೆ ಇಂತದ್ದೇ ಪ್ರಕರಣಗಳು ದಾಖಲಾಗಿದೆ. ಆದರೂ ಬುದ್ದಿ ಕಲಿಯದ ಈತ ತನ್ನ ಚಾಳಿಯನ್ನು ಮುಂದುವರೆಸಿದ್ದು, ಆದ್ದರಿಂದ ಈತನ ವಿರುದ್ದ ರೌಡಿ ಹಾಳೆ ತೆರೆದು, IPC 1860 – 354, 294, 509, 506, 153A, 295, 295A, 298 ಮತ್ತು IPC 12 Contempt of Court Act 1971 ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು ಎಂದು ದೂರು.

ದೂರು ನೀಡಿರುವ ಕುರಿತು ನಜ್ಮಾ ಅವರು ನಾನೂ ಗೌರಿಗೆ ಖಚಿತಪಡಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ನಜ್ಮಾ ನಝೀರ್ ನೀಡಿರುವ ದೂರು ಮತ್ತು ಎಫ್‌ಐಆರ್‌ ಪ್ರತಿ ಇಲ್ಲಿದೆ :  

ಪ್ರಭಾಕರ್ ಭಟ್ ಹೇಳಿಕೆ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ವಕ್ತಾರೆ ಯು.ಟಿ ಫರ್ಝಾನ ಅವರು “ಒಂದು ಸಮುದಾಯದ ಮಹಿಳೆಯರನ್ನು ಸಾರ್ವಜನಿಕವಾಗಿ ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್‌ನಂತವರನ್ನು ತಮ್ಮ ನಾಯಕ ಎಂದು ಹೇಳಿಕೊಳ್ಳುವ ದುಸ್ಥಿಯಲ್ಲಿ ಹಿಂದೂ ಸಮಾಜ ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಆರೆಸ್ಸೆಸ್ ಜೊತೆ ನಮಗೆ ಸೈದ್ದಾಂತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ, ಅವರು ಹಿಂದಿನಿಂದಲೂ ಭಾರತದ ಸಂಸ್ಕೃತಿಗೆ ಗೌರವ ಕೊಡುವ ಸಂಘಟನೆ ಎಂದು ಗುರುತಿಸಿಕೊಂಡಿದ್ದಾರೆ. ಹೀಗಿರುವಾಗ, ಮಹಿಳೆಯರನ್ನು ಅವಹೇಳನ ಮಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಆರೆಸ್ಸೆಸ್ ಘೋಷಿಸಲಿ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...