Homeಮುಖಪುಟಮುಸ್ಲಿಂ ಯುವಕನಿಗೆ ಥಳಿಸಿ, ಹಂದಿ ಮಾಂಸ ತಿನ್ನುವಂತೆ ಒತ್ತಾಯ

ಮುಸ್ಲಿಂ ಯುವಕನಿಗೆ ಥಳಿಸಿ, ಹಂದಿ ಮಾಂಸ ತಿನ್ನುವಂತೆ ಒತ್ತಾಯ

- Advertisement -
- Advertisement -

ಇಂಫಾಲ್: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಮೈತೆಯಿ ಗುಂಪಿನ ಅರಂಬೈ ಟೆಂಗೋಲ್ ಮುಸ್ಲಿಂ ಹುಡುಗನನ್ನು ಥಳಿಸಿ, ಅವನ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿ ಹಂದಿ ಮಾಂಸ ತಿನ್ನುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜನವರಿ 4ರಂದು ಈ ಘಟನೆ ನಡೆದಿದೆ. ಕ್ವಾಕ್ಟಾ ವಾರ್ಡ್ ಸಂಖ್ಯೆ 2ರ ಟಂಪಕ್ಮಾಯುಮ್ ಕಮಲ್ ಹಸನ್ ಅವರ ಪುತ್ರ 18 ವರ್ಷದ ಟಂಪಕ್ಮಾಯುಮ್ ಅಕ್ತರ್ ಅವರನ್ನು ಸಹೋದ್ಯೋಗಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅರಂಬೈ ಟೆಂಗೋಲ್ ಹೈಂಗಾಂಗ್ ಘಟಕವು ಸಮನ್ಸ್ ಜಾರಿ ಮಾಡಿತ್ತು ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ತನ್ನ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿ ಗುಂಪು ತನ್ನನ್ನು ಕಟ್ಟಿಹಾಕಿ, ಹಲ್ಲೆ ಮಾಡಿ, ಹಂದಿ ಮಾಂಸ ತಿನ್ನುವಂತೆ ಒತ್ತಾಯಿಸಿದೆ ಎಂದು ಬಲಿಪಶು ಯುವಕನು ಆರೋಪಿಸಿದ್ದಾನೆ. ಅರಂಬೈ ಟೆಂಗೋಲ್ ನಾಯಕ ಕೊರೌಂಗನ್ಬಾ ಖುಮಾನ್ ಅವರು ತನ್ನ ಕೈಗಳನ್ನು ಉಗುರುಗಳಿಂದ ಚುಚ್ಚಿದ್ದಾರೆ ಎಂದು ಯುವಕ ಆರೋಪಿಸಿದ್ದಾನೆ.

ಘಟನೆಗೆ ಕಾರಣವಾದ ಕಾರಣಗಳ ಕುರಿತು ಮಾತನಾಡಿದ ಯುವಕ, ಇಂಫಾಲ್‌ನ ಕೀಶಾಂಪತ್‌ನಲ್ಲಿರುವ ಕಾಫಿ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಮೈತೆಯಿ ಹುಡುಗಿ ಜೆನಿತಾಳೊಂದಿಗಿನ ತನ್ನ ಕುರಿತು ತಪ್ಪು ತಿಳುವಳಿಕೆಯಿಂದಾಗಿ ಗುಂಪು ತನ್ನನ್ನು ಕರೆಸಿತು ಎಂದಿದ್ದಾನೆ.

ತಾನು, ಜೆನಿತಾ ಮತ್ತು ಇನ್ನೊಬ್ಬ ಸ್ನೇಹಿತ ಒಂದೇ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ್ಗೆ ಸಾಂದರ್ಭಿಕ ಸಂಭಾಷಣೆಗಳಲ್ಲಿ ತೊಡಗಿರುತ್ತೇವೆ. ಆದಾಗ್ಯೂ, ತಾನು ಜೆನಿತಾಳನ್ನು ಪ್ರೀತಿಸುತ್ತಿರುವುದಾಗಿ ತಮಾಷೆಯಾಗಿ ತನ್ನ ಇನ್ನೊಬ್ಬ ಸ್ನೇಹಿತರಿಗೆ ಫೋನ್‌ನಲ್ಲಿ ಹೇಳಿದಾಗ, ಅವಳು ತನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡಳು ಮತ್ತು ತನ್ನ ಸಹೋದರರು ಮತ್ತು ಎಟಿ ಗುಂಪಿಗೆ ಈ ವಿಷಯವನ್ನು ತಿಳಿಸಿದಳು. ಇದರಿಂದಾಗಿ ನನ್ನನ್ನು ಕರೆಸಲಾಗಿತ್ತು. ನಾನು ಹೈಂಗಾಂಗ್ ಘಟಕಕ್ಕೆ ಬಂದಾಗ ನನಗೆ ಜೆನಿತಾಳೊಂದಿಗೆ ಸಂಬಂಧವಿದೆಯೇ ಎಂಬ ಬಗ್ಗೆ  ಪ್ರಶ್ನಿಸಲಾಯಿತು. ಅವಳೊಂದಿಗೆ ಯಾವುದೇ ಸಂಬಂಧವನ್ನು ನಾನು ನಿರಾಕರಿಸಿದೆನು. ಅವರು ನನ್ನ ನಿರಾಕರಣೆಯನ್ನು ಗಮನಕ್ಕೆ ತಗೆದುಕೊಳ್ಳದೆ ನನ್ನ ದೈಹಿಕವಾಗಿ ಹಲ್ಲೆ ನಡೆಸಲಾಯಿತು ಎಂದಿದ್ದಾನೆ.

ಆ ದುರದೃಷ್ಟಕರ ದಿನದಂದು ಅಕ್ತರ್ ತನಗೆ ಪ್ರಪೋಸ್ ಮಾಡಿದ್ದನು, ಆದರೆ ಅದನ್ನು ನಾನು ತಿರಸ್ಕರಿಸಿದೆ ಎಂದು ಜೆನಿತಾ ಹೇಳಿದ್ದಾಳೆ. ತನ್ನ ನಿರಾಕರಣೆಯ ನಂತರ, ಅವನು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದನು.  ಇದರಿಂದಾಗಿ ನಾನು ಲ್ಯಾಂಫೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ ಎಂದು ತಿಳಿಸಿದ್ದಾಳೆ.

ಅರಾಂಬೈ ಟೆಂಗೋಲ್ ನಾಯಕ ಈ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಅಕ್ತರ್ ಆರೋಪಿಸಿದಂತೆ ನಾವು ಆತನಿಗೆ  ಹಂದಿಮಾಂಸವನ್ನು ಬಲವಂತವಾಗಿ ತಿನ್ನಿಸಿಲ್ಲ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟಪಡಿಸಿದ್ದಾರೆ. “ಯಾರನ್ನಾದರೂ ಹಂದಿಮಾಂಸ ತಿನ್ನಲು ಒತ್ತಾಯಿಸುವ ವೀಡಿಯೊವನ್ನು ಪೋಸ್ಟ್ ಮಾಡುವ ಅವಿವೇಕದ ವ್ಯಕ್ತಿ ನಾನು ಅಲ್ಲ. ದಯವಿಟ್ಟು ಅನಗತ್ಯ ಉದ್ವಿಗ್ನತೆಯನ್ನು ಸೃಷ್ಟಿಸುವುದನ್ನು ನಿಲ್ಲಿಸಿ. ಕಿರುಕುಳಕ್ಕೊಳಗಾಗಿದ್ದೇನೆ ಎಂದು ಹೇಳಿಕೊಂಡ ವ್ಯಕ್ತಿಯನ್ನು ಅವನ ಸ್ವಂತ ಸುರಕ್ಷತೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ” ಎಂದು ಕೊರೌಂಗನ್ಬಾ ಬರೆದಿದ್ದಾರೆ. ನಾಮಸೂಚಕ ರಾಜ ಲೈಶೆಂಬಾ ಸನಾಜಾಬಾ ಮತ್ತು ಮುಸ್ಲಿಂ ನಾಗರಿಕ ಸಂಘಟನೆಗಳನ್ನು ಒಳಗೊಂಡ ಸಭೆಯನ್ನು  ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು ಮತ್ತು ಮತ್ತಷ್ಟು ಉದ್ವಿಗ್ನತೆಯನ್ನು ಸೃಷ್ಟಿಸುವುದನ್ನು ತಪ್ಪಿಸಲು ಎಲ್ಲರೂ ಶಾಂತ ರೀತಿಯಲ್ಲಿ ವರ್ತಿಸುವಂತೆ ಮನವಿ ಮಾಡಿದ್ದಾರೆ.

ಅಂಜುಮನ್ ಇಸ್ಲಾ ಇ ಮುಸ್ರಾ, ಕ್ವಾಕ್ತಾ ಜಮಿಯತ್ ಉಲ್ಮಾ ಬಿಷ್ಣುಪುರ ಜಿಲ್ಲೆ, ಆಲ್ ಕ್ವಾಕ್ತಾ ಸಮನ್ವಯ ಸಮಿತಿ, ಆಲ್ ಮೈತೆ ಪಂಗಲ್ ಯುವ ಸಂಘ, ಆಲ್ ಕ್ವಾಕ್ತಾ ಯುವ ಸ್ವಯಂಸೇವಾ ಸಂಸ್ಥೆ ಸೇರಿದಂತೆ ಹಲವಾರು ಮುಸ್ಲಿಂ ಸಂಘಟನೆಗಳು  ಅರಾಂಬೈ ಟೆಂಗೋಲ್ ಹೀಂಗಾಂಗ್ ಘಟಕ ಮತ್ತು ಅದರ ನಾಯಕಿ ಕೊರೌಂಗನ್ಬಾ ಅವರಿಂದ ವಿವರಣೆಯನ್ನು ಒತ್ತಾಯಿಸಿವೆ. ನಾಗರಿಕ ಮತ್ತು ಧಾರ್ಮಿಕ ಸಂಸ್ಥೆಗಳು ಈ ದಾಳಿಯನ್ನು ಕೋಮು ಸಾಮರಸ್ಯ ಮತ್ತು ಮಾನವ ಹಕ್ಕುಗಳ ಮೇಲಿನ ದಾಳಿ ಎಂದು ಖಂಡಿಸಿವೆ, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ಕ್ರಮಗಳ ಎಚ್ಚರಿಕೆ ನೀಡಿವೆ.

ಏತನ್ಮಧ್ಯೆ, ಆಲ್ ಮಣಿಪುರ ಮುಸ್ಲಿಂ ವಿದ್ಯಾರ್ಥಿಗಳ ಸಂಘಟನೆಯೂ ಈ ಘಟನೆಯನ್ನು ಬಲವಾಗಿ ಖಂಡಿಸಿದೆ. ಈ ಘಟನೆಯನ್ನು ಎರಡು ಸಮುದಾಯಗಳ ನಡುವಿನ ಏಕತೆ ಮತ್ತು ಶಾಂತಿಯನ್ನು ಭಂಗಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ಬಣ್ಣಿಸುತ್ತಾ, ಸಂಘಟನೆಯು ಹಲವಾರು ಪ್ರಶ್ನೆಗಳನ್ನು ಎತ್ತಿದೆ. 1. ಅರಾಂಬೈ ಟೆಂಗೋಲ್ ಕಾನೂನು ಜಾರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಅಧಿಕಾರ ಹೊಂದಿದೆಯೇ? ಈ ಗುಂಪು ವಿಷಯಗಳನ್ನು ತಮ್ಮ ಕೈಗೆ ತೆಗೆದುಕೊಂಡಿದ್ದು, ಪೊಲೀಸರಿಗೆ ಒಪ್ಪಿಸುವ ಮೊದಲು ಹುಡುಗನನ್ನು ಥಳಿಸಿದ್ದು ಏಕೆ? ಎಂದು ಕೇಳಿದೆ.

ಉತ್ತರಾಖಂಡ ಮದರಸಾಗಳಲ್ಲಿ ಸಂಸ್ಕೃತ ಕಡ್ಡಾಯ: ವಿದ್ವಾಂಸರ ಅಸಮಾಧಾನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...