Homeಮುಖಪುಟಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

- Advertisement -
- Advertisement -

ಜನವರಿ 21, ಶನಿವಾರದಂದು 100ಕ್ಕೂ ಹೆಚ್ಚು ಬಜರಂಗದಳದ ದುಷ್ಕರ್ಮಿಗಳ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬರ್ತ್ ಡೇ ಪಾರ್ಟಿಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಕನಿಷ್ಠ ಐದು ಮುಸ್ಲಿಂ ಯುವಕರಿಗೆ ಥಳಿಸಲಾಗಿದೆ.

24 ವರ್ಷದ ಹಿಂದೂ ಯುವತಿಯು ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಆ ಯುವತಿಯ ಫ್ಲ್ಯಾಟ್‌ಗೆ ನುಗ್ಗಿ ಆಕೆಯ ಮುಸ್ಲಿಂ ಸ್ನೇಹಿತರಿಗೆ ಹೊಡೆಯಲಾಗಿದೆ. ಮುಸ್ಲಿಂ ಯುವಕರ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ದುಷ್ಕರ್ಮಿಗಳು, ನಂತರ ಇಂದೋರ್‌ನ ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತರನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋಗಳು ಜನವರಿ 22ರ ಭಾನುವಾರದಂದು ವೈರಲ್ ಆಗಿವೆ.

ವೀಡಿಯೋ ಒಂದರಲ್ಲಿ- ಬಹುಮಹಡಿ ಕಟ್ಟಡದ ಮೆಟ್ಟಿಲುಗಳ ಮೇಲೆ ದೊಡ್ಡ ಜನಸಮೂಹವೇ ಹತ್ತುತ್ತಿರುವುದನ್ನು ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ- ಖಾಸಗಿ ನಿವಾಸದೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರು ಏನು ಹೇಳುತ್ತಿದ್ದಾರೆ?

“ಕೆಲವು ಹುಡುಗರನ್ನು ಬಜರಂಗದಳದ ಸದಸ್ಯರು ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆತಂದರು, ನಂತರ ಅವರಲ್ಲಿ ಐವರನ್ನು ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ (ಅಂದರೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆ ಆರೋಪದಲ್ಲಿ) ಜೈಲಿಗೆ ಕಳುಹಿಸಲಾಗಿದೆ.

ಆದರೆ, ಖಾಸಗಿ ನಿವಾಸಕ್ಕೆ ನುಗ್ಗಿ ಯುವಕರನ್ನು ಥಳಿಸಿದ ಬಜರಂಗದಳದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಕುರಿತು ‘ದಿ ಕ್ವಿಂಟ್’ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಎಂಐಜಿ ಸ್ಟೇಷನ್ ಇನ್‌ಚಾರ್ಜ್ ಅಜಯ್ ವರ್ಮಾ, “ಜಗಳ ಮತ್ತು ಹೆಚ್ಚಿನ ವಿವಾದವನ್ನು ತಪ್ಪಿಸಲು, ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅವರೆಲ್ಲರನ್ನೂ ನಾಳೆಯೊಳಗೆ (ಅಂದರೆ ಭಾನುವಾರದೊಳಗೆ) ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು. ಆದರೆ ಜ.23ರಂದು ಈ ವರದಿಯನ್ನು ಪ್ರಕಟಿಸುವ ಸಮಯದವರೆಗೂ ಯುವಕರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ‘ದಿ ಕ್ವಿಂಟ್‌’ ತಿಳಿಸಿದೆ.

ಇದಕ್ಕೂ ಮೊದಲು, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೀಮಾ ಶರ್ಮಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, “ಯುವಕ ಮತ್ತು ಯುವತಿಯರ ಗುಂಪು ಸ್ನೇಹಿತರ ಹುಟ್ಟುಹಬ್ಬವನ್ನು ಆಚರಿಸುತ್ತಿತ್ತು. ಈ ವಿಷಯದಲ್ಲಿ ಭಾಗಿಯಾಗಿರುವ ಹುಡುಗಿಯರು ಲವ್ ಜಿಹಾದ್‌ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಏನು ಹೇಳುತ್ತಿದ್ದಾರೆ?

ಭಜರಂಗದಳದ ಜಿಲ್ಲಾ ಸಂಯೋಜಕ (ಜಿಲ್ಲಾ ಸಂಯೋಜಕ) ಎಂದು ಹೇಳಿಕೊಳ್ಳುವ ಮನೋಜ್ ಯಾದವ್, ಜನವರಿ 21ರಂದು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, “ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದೇವೆ” ಎಂದು  ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿರಿ: ಹಿಂದೂಗಳು ಮತ್ತು ಮುಸ್ಲಿಮರು ಏಕೆ ’ಹಸು ಬಲಿ’ ಕೊಡುತ್ತಾರೆ?

“ಇಂದೋರ್‌ನ ಶ್ರೀನಗರ ಪ್ರದೇಶದಲ್ಲಿ ಐವರು ಮುಸ್ಲಿಂ ಯುವಕರು ಮತ್ತು ಇಬ್ಬರು ಹಿಂದೂ ಯುವತಿಯರು ಒಟ್ಟಿಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದ ನಂತರ ನಾವು ಅಲ್ಲಿಗೆ ಹೋಗಿ ಅವರ ಕೊಠಡಿಗಳಲ್ಲಿ ಹುಡುಕಾಟ ನಡೆಸಿದ್ದೇವೆ. ಮದ್ಯದ ಬಾಟಲಿ ಸೇರಿದಂತೆ ಅಮಲು ಪದಾರ್ಥಗಳು ಪತ್ತೆಯಾಗಿವೆ. ನಾವು ಅವರನ್ನು ಎಂಐಜಿ ಕಾಲೋನಿ ಠಾಣೆಗೆ ಕರೆತಂದಿದ್ದು, ಮೇಲಧಿಕಾರಿಗಳಿಗೂ ದೂರು ನೀಡಿದ್ದೇವೆ” ಎಂದು ಮನೋಜ್ ಯಾದವ್ ಪ್ರತಿಕ್ರಿಯಿಸಿದ್ದಾನೆ.

ಹಲ್ಲೆ ಮಾಡಿದವರ ವಿರುದ್ಧ ವಿರುದ್ಧ ಕ್ರಮವೇನು?

ಸುಪ್ರೀಂ ಕೋರ್ಟ್‌ ವಕೀಲರಾದ ಎಹ್ತೇಶಾಮ್ ಹಶ್ಮಿಯವರು ಪೊಲೀಸರ ವರ್ತನೆಯನ್ನು ಖಂಡಿಸಿದ್ದು, “ಅತಿಕ್ರಮಣ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸುವ ಭಜರಂಗದಳದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಬೇರೆ ಧರ್ಮಕ್ಕೆ ಸೇರಿದ ತಮ್ಮ ಸ್ನೇಹಿತನ ಜನ್ಮದಿನವನ್ನು ಆಚರಿಸಿದ ಏಕೈಕ ತಪ್ಪಿಗೆ ಪೊಲೀಸರು ಐದು ಜನರನ್ನು ಜೈಲಿಗೆ ಹಾಕಿದ್ದಾರೆ. ಇದೊಂದು ಘೋರ ಕಾನೂನು ದುರ್ವರ್ತನೆಯಾಗಿದೆ” ಎಂದು ವಿಷಾದಿಸಿದ್ದಾರೆ.

ವರದಿ ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...