Homeಮುಖಪುಟಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

- Advertisement -
- Advertisement -

ಜನವರಿ 21, ಶನಿವಾರದಂದು 100ಕ್ಕೂ ಹೆಚ್ಚು ಬಜರಂಗದಳದ ದುಷ್ಕರ್ಮಿಗಳ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬರ್ತ್ ಡೇ ಪಾರ್ಟಿಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಕನಿಷ್ಠ ಐದು ಮುಸ್ಲಿಂ ಯುವಕರಿಗೆ ಥಳಿಸಲಾಗಿದೆ.

24 ವರ್ಷದ ಹಿಂದೂ ಯುವತಿಯು ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಆ ಯುವತಿಯ ಫ್ಲ್ಯಾಟ್‌ಗೆ ನುಗ್ಗಿ ಆಕೆಯ ಮುಸ್ಲಿಂ ಸ್ನೇಹಿತರಿಗೆ ಹೊಡೆಯಲಾಗಿದೆ. ಮುಸ್ಲಿಂ ಯುವಕರ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ದುಷ್ಕರ್ಮಿಗಳು, ನಂತರ ಇಂದೋರ್‌ನ ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತರನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋಗಳು ಜನವರಿ 22ರ ಭಾನುವಾರದಂದು ವೈರಲ್ ಆಗಿವೆ.

ವೀಡಿಯೋ ಒಂದರಲ್ಲಿ- ಬಹುಮಹಡಿ ಕಟ್ಟಡದ ಮೆಟ್ಟಿಲುಗಳ ಮೇಲೆ ದೊಡ್ಡ ಜನಸಮೂಹವೇ ಹತ್ತುತ್ತಿರುವುದನ್ನು ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ- ಖಾಸಗಿ ನಿವಾಸದೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರು ಏನು ಹೇಳುತ್ತಿದ್ದಾರೆ?

“ಕೆಲವು ಹುಡುಗರನ್ನು ಬಜರಂಗದಳದ ಸದಸ್ಯರು ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆತಂದರು, ನಂತರ ಅವರಲ್ಲಿ ಐವರನ್ನು ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ (ಅಂದರೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆ ಆರೋಪದಲ್ಲಿ) ಜೈಲಿಗೆ ಕಳುಹಿಸಲಾಗಿದೆ.

ಆದರೆ, ಖಾಸಗಿ ನಿವಾಸಕ್ಕೆ ನುಗ್ಗಿ ಯುವಕರನ್ನು ಥಳಿಸಿದ ಬಜರಂಗದಳದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಕುರಿತು ‘ದಿ ಕ್ವಿಂಟ್’ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಎಂಐಜಿ ಸ್ಟೇಷನ್ ಇನ್‌ಚಾರ್ಜ್ ಅಜಯ್ ವರ್ಮಾ, “ಜಗಳ ಮತ್ತು ಹೆಚ್ಚಿನ ವಿವಾದವನ್ನು ತಪ್ಪಿಸಲು, ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅವರೆಲ್ಲರನ್ನೂ ನಾಳೆಯೊಳಗೆ (ಅಂದರೆ ಭಾನುವಾರದೊಳಗೆ) ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು. ಆದರೆ ಜ.23ರಂದು ಈ ವರದಿಯನ್ನು ಪ್ರಕಟಿಸುವ ಸಮಯದವರೆಗೂ ಯುವಕರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ‘ದಿ ಕ್ವಿಂಟ್‌’ ತಿಳಿಸಿದೆ.

ಇದಕ್ಕೂ ಮೊದಲು, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೀಮಾ ಶರ್ಮಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, “ಯುವಕ ಮತ್ತು ಯುವತಿಯರ ಗುಂಪು ಸ್ನೇಹಿತರ ಹುಟ್ಟುಹಬ್ಬವನ್ನು ಆಚರಿಸುತ್ತಿತ್ತು. ಈ ವಿಷಯದಲ್ಲಿ ಭಾಗಿಯಾಗಿರುವ ಹುಡುಗಿಯರು ಲವ್ ಜಿಹಾದ್‌ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಏನು ಹೇಳುತ್ತಿದ್ದಾರೆ?

ಭಜರಂಗದಳದ ಜಿಲ್ಲಾ ಸಂಯೋಜಕ (ಜಿಲ್ಲಾ ಸಂಯೋಜಕ) ಎಂದು ಹೇಳಿಕೊಳ್ಳುವ ಮನೋಜ್ ಯಾದವ್, ಜನವರಿ 21ರಂದು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, “ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದೇವೆ” ಎಂದು  ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿರಿ: ಹಿಂದೂಗಳು ಮತ್ತು ಮುಸ್ಲಿಮರು ಏಕೆ ’ಹಸು ಬಲಿ’ ಕೊಡುತ್ತಾರೆ?

“ಇಂದೋರ್‌ನ ಶ್ರೀನಗರ ಪ್ರದೇಶದಲ್ಲಿ ಐವರು ಮುಸ್ಲಿಂ ಯುವಕರು ಮತ್ತು ಇಬ್ಬರು ಹಿಂದೂ ಯುವತಿಯರು ಒಟ್ಟಿಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದ ನಂತರ ನಾವು ಅಲ್ಲಿಗೆ ಹೋಗಿ ಅವರ ಕೊಠಡಿಗಳಲ್ಲಿ ಹುಡುಕಾಟ ನಡೆಸಿದ್ದೇವೆ. ಮದ್ಯದ ಬಾಟಲಿ ಸೇರಿದಂತೆ ಅಮಲು ಪದಾರ್ಥಗಳು ಪತ್ತೆಯಾಗಿವೆ. ನಾವು ಅವರನ್ನು ಎಂಐಜಿ ಕಾಲೋನಿ ಠಾಣೆಗೆ ಕರೆತಂದಿದ್ದು, ಮೇಲಧಿಕಾರಿಗಳಿಗೂ ದೂರು ನೀಡಿದ್ದೇವೆ” ಎಂದು ಮನೋಜ್ ಯಾದವ್ ಪ್ರತಿಕ್ರಿಯಿಸಿದ್ದಾನೆ.

ಹಲ್ಲೆ ಮಾಡಿದವರ ವಿರುದ್ಧ ವಿರುದ್ಧ ಕ್ರಮವೇನು?

ಸುಪ್ರೀಂ ಕೋರ್ಟ್‌ ವಕೀಲರಾದ ಎಹ್ತೇಶಾಮ್ ಹಶ್ಮಿಯವರು ಪೊಲೀಸರ ವರ್ತನೆಯನ್ನು ಖಂಡಿಸಿದ್ದು, “ಅತಿಕ್ರಮಣ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸುವ ಭಜರಂಗದಳದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಬೇರೆ ಧರ್ಮಕ್ಕೆ ಸೇರಿದ ತಮ್ಮ ಸ್ನೇಹಿತನ ಜನ್ಮದಿನವನ್ನು ಆಚರಿಸಿದ ಏಕೈಕ ತಪ್ಪಿಗೆ ಪೊಲೀಸರು ಐದು ಜನರನ್ನು ಜೈಲಿಗೆ ಹಾಕಿದ್ದಾರೆ. ಇದೊಂದು ಘೋರ ಕಾನೂನು ದುರ್ವರ್ತನೆಯಾಗಿದೆ” ಎಂದು ವಿಷಾದಿಸಿದ್ದಾರೆ.

ವರದಿ ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...