Homeಮುಖಪುಟಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

- Advertisement -
- Advertisement -

ಜನವರಿ 21, ಶನಿವಾರದಂದು 100ಕ್ಕೂ ಹೆಚ್ಚು ಬಜರಂಗದಳದ ದುಷ್ಕರ್ಮಿಗಳ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬರ್ತ್ ಡೇ ಪಾರ್ಟಿಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಕನಿಷ್ಠ ಐದು ಮುಸ್ಲಿಂ ಯುವಕರಿಗೆ ಥಳಿಸಲಾಗಿದೆ.

24 ವರ್ಷದ ಹಿಂದೂ ಯುವತಿಯು ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಆ ಯುವತಿಯ ಫ್ಲ್ಯಾಟ್‌ಗೆ ನುಗ್ಗಿ ಆಕೆಯ ಮುಸ್ಲಿಂ ಸ್ನೇಹಿತರಿಗೆ ಹೊಡೆಯಲಾಗಿದೆ. ಮುಸ್ಲಿಂ ಯುವಕರ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ದುಷ್ಕರ್ಮಿಗಳು, ನಂತರ ಇಂದೋರ್‌ನ ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತರನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋಗಳು ಜನವರಿ 22ರ ಭಾನುವಾರದಂದು ವೈರಲ್ ಆಗಿವೆ.

ವೀಡಿಯೋ ಒಂದರಲ್ಲಿ- ಬಹುಮಹಡಿ ಕಟ್ಟಡದ ಮೆಟ್ಟಿಲುಗಳ ಮೇಲೆ ದೊಡ್ಡ ಜನಸಮೂಹವೇ ಹತ್ತುತ್ತಿರುವುದನ್ನು ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ- ಖಾಸಗಿ ನಿವಾಸದೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರು ಏನು ಹೇಳುತ್ತಿದ್ದಾರೆ?

“ಕೆಲವು ಹುಡುಗರನ್ನು ಬಜರಂಗದಳದ ಸದಸ್ಯರು ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆತಂದರು, ನಂತರ ಅವರಲ್ಲಿ ಐವರನ್ನು ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ (ಅಂದರೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆ ಆರೋಪದಲ್ಲಿ) ಜೈಲಿಗೆ ಕಳುಹಿಸಲಾಗಿದೆ.

ಆದರೆ, ಖಾಸಗಿ ನಿವಾಸಕ್ಕೆ ನುಗ್ಗಿ ಯುವಕರನ್ನು ಥಳಿಸಿದ ಬಜರಂಗದಳದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಕುರಿತು ‘ದಿ ಕ್ವಿಂಟ್’ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಎಂಐಜಿ ಸ್ಟೇಷನ್ ಇನ್‌ಚಾರ್ಜ್ ಅಜಯ್ ವರ್ಮಾ, “ಜಗಳ ಮತ್ತು ಹೆಚ್ಚಿನ ವಿವಾದವನ್ನು ತಪ್ಪಿಸಲು, ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅವರೆಲ್ಲರನ್ನೂ ನಾಳೆಯೊಳಗೆ (ಅಂದರೆ ಭಾನುವಾರದೊಳಗೆ) ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು. ಆದರೆ ಜ.23ರಂದು ಈ ವರದಿಯನ್ನು ಪ್ರಕಟಿಸುವ ಸಮಯದವರೆಗೂ ಯುವಕರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ‘ದಿ ಕ್ವಿಂಟ್‌’ ತಿಳಿಸಿದೆ.

ಇದಕ್ಕೂ ಮೊದಲು, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೀಮಾ ಶರ್ಮಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, “ಯುವಕ ಮತ್ತು ಯುವತಿಯರ ಗುಂಪು ಸ್ನೇಹಿತರ ಹುಟ್ಟುಹಬ್ಬವನ್ನು ಆಚರಿಸುತ್ತಿತ್ತು. ಈ ವಿಷಯದಲ್ಲಿ ಭಾಗಿಯಾಗಿರುವ ಹುಡುಗಿಯರು ಲವ್ ಜಿಹಾದ್‌ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಏನು ಹೇಳುತ್ತಿದ್ದಾರೆ?

ಭಜರಂಗದಳದ ಜಿಲ್ಲಾ ಸಂಯೋಜಕ (ಜಿಲ್ಲಾ ಸಂಯೋಜಕ) ಎಂದು ಹೇಳಿಕೊಳ್ಳುವ ಮನೋಜ್ ಯಾದವ್, ಜನವರಿ 21ರಂದು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, “ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದೇವೆ” ಎಂದು  ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿರಿ: ಹಿಂದೂಗಳು ಮತ್ತು ಮುಸ್ಲಿಮರು ಏಕೆ ’ಹಸು ಬಲಿ’ ಕೊಡುತ್ತಾರೆ?

“ಇಂದೋರ್‌ನ ಶ್ರೀನಗರ ಪ್ರದೇಶದಲ್ಲಿ ಐವರು ಮುಸ್ಲಿಂ ಯುವಕರು ಮತ್ತು ಇಬ್ಬರು ಹಿಂದೂ ಯುವತಿಯರು ಒಟ್ಟಿಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದ ನಂತರ ನಾವು ಅಲ್ಲಿಗೆ ಹೋಗಿ ಅವರ ಕೊಠಡಿಗಳಲ್ಲಿ ಹುಡುಕಾಟ ನಡೆಸಿದ್ದೇವೆ. ಮದ್ಯದ ಬಾಟಲಿ ಸೇರಿದಂತೆ ಅಮಲು ಪದಾರ್ಥಗಳು ಪತ್ತೆಯಾಗಿವೆ. ನಾವು ಅವರನ್ನು ಎಂಐಜಿ ಕಾಲೋನಿ ಠಾಣೆಗೆ ಕರೆತಂದಿದ್ದು, ಮೇಲಧಿಕಾರಿಗಳಿಗೂ ದೂರು ನೀಡಿದ್ದೇವೆ” ಎಂದು ಮನೋಜ್ ಯಾದವ್ ಪ್ರತಿಕ್ರಿಯಿಸಿದ್ದಾನೆ.

ಹಲ್ಲೆ ಮಾಡಿದವರ ವಿರುದ್ಧ ವಿರುದ್ಧ ಕ್ರಮವೇನು?

ಸುಪ್ರೀಂ ಕೋರ್ಟ್‌ ವಕೀಲರಾದ ಎಹ್ತೇಶಾಮ್ ಹಶ್ಮಿಯವರು ಪೊಲೀಸರ ವರ್ತನೆಯನ್ನು ಖಂಡಿಸಿದ್ದು, “ಅತಿಕ್ರಮಣ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸುವ ಭಜರಂಗದಳದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಬೇರೆ ಧರ್ಮಕ್ಕೆ ಸೇರಿದ ತಮ್ಮ ಸ್ನೇಹಿತನ ಜನ್ಮದಿನವನ್ನು ಆಚರಿಸಿದ ಏಕೈಕ ತಪ್ಪಿಗೆ ಪೊಲೀಸರು ಐದು ಜನರನ್ನು ಜೈಲಿಗೆ ಹಾಕಿದ್ದಾರೆ. ಇದೊಂದು ಘೋರ ಕಾನೂನು ದುರ್ವರ್ತನೆಯಾಗಿದೆ” ಎಂದು ವಿಷಾದಿಸಿದ್ದಾರೆ.

ವರದಿ ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...