Homeಮುಖಪುಟಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

- Advertisement -
- Advertisement -

ಜನವರಿ 21, ಶನಿವಾರದಂದು 100ಕ್ಕೂ ಹೆಚ್ಚು ಬಜರಂಗದಳದ ದುಷ್ಕರ್ಮಿಗಳ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬರ್ತ್ ಡೇ ಪಾರ್ಟಿಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಕನಿಷ್ಠ ಐದು ಮುಸ್ಲಿಂ ಯುವಕರಿಗೆ ಥಳಿಸಲಾಗಿದೆ.

24 ವರ್ಷದ ಹಿಂದೂ ಯುವತಿಯು ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಆ ಯುವತಿಯ ಫ್ಲ್ಯಾಟ್‌ಗೆ ನುಗ್ಗಿ ಆಕೆಯ ಮುಸ್ಲಿಂ ಸ್ನೇಹಿತರಿಗೆ ಹೊಡೆಯಲಾಗಿದೆ. ಮುಸ್ಲಿಂ ಯುವಕರ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ದುಷ್ಕರ್ಮಿಗಳು, ನಂತರ ಇಂದೋರ್‌ನ ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತರನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋಗಳು ಜನವರಿ 22ರ ಭಾನುವಾರದಂದು ವೈರಲ್ ಆಗಿವೆ.

ವೀಡಿಯೋ ಒಂದರಲ್ಲಿ- ಬಹುಮಹಡಿ ಕಟ್ಟಡದ ಮೆಟ್ಟಿಲುಗಳ ಮೇಲೆ ದೊಡ್ಡ ಜನಸಮೂಹವೇ ಹತ್ತುತ್ತಿರುವುದನ್ನು ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ- ಖಾಸಗಿ ನಿವಾಸದೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರು ಏನು ಹೇಳುತ್ತಿದ್ದಾರೆ?

“ಕೆಲವು ಹುಡುಗರನ್ನು ಬಜರಂಗದಳದ ಸದಸ್ಯರು ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆತಂದರು, ನಂತರ ಅವರಲ್ಲಿ ಐವರನ್ನು ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ (ಅಂದರೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆ ಆರೋಪದಲ್ಲಿ) ಜೈಲಿಗೆ ಕಳುಹಿಸಲಾಗಿದೆ.

ಆದರೆ, ಖಾಸಗಿ ನಿವಾಸಕ್ಕೆ ನುಗ್ಗಿ ಯುವಕರನ್ನು ಥಳಿಸಿದ ಬಜರಂಗದಳದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಕುರಿತು ‘ದಿ ಕ್ವಿಂಟ್’ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಎಂಐಜಿ ಸ್ಟೇಷನ್ ಇನ್‌ಚಾರ್ಜ್ ಅಜಯ್ ವರ್ಮಾ, “ಜಗಳ ಮತ್ತು ಹೆಚ್ಚಿನ ವಿವಾದವನ್ನು ತಪ್ಪಿಸಲು, ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅವರೆಲ್ಲರನ್ನೂ ನಾಳೆಯೊಳಗೆ (ಅಂದರೆ ಭಾನುವಾರದೊಳಗೆ) ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು. ಆದರೆ ಜ.23ರಂದು ಈ ವರದಿಯನ್ನು ಪ್ರಕಟಿಸುವ ಸಮಯದವರೆಗೂ ಯುವಕರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ‘ದಿ ಕ್ವಿಂಟ್‌’ ತಿಳಿಸಿದೆ.

ಇದಕ್ಕೂ ಮೊದಲು, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೀಮಾ ಶರ್ಮಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, “ಯುವಕ ಮತ್ತು ಯುವತಿಯರ ಗುಂಪು ಸ್ನೇಹಿತರ ಹುಟ್ಟುಹಬ್ಬವನ್ನು ಆಚರಿಸುತ್ತಿತ್ತು. ಈ ವಿಷಯದಲ್ಲಿ ಭಾಗಿಯಾಗಿರುವ ಹುಡುಗಿಯರು ಲವ್ ಜಿಹಾದ್‌ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಏನು ಹೇಳುತ್ತಿದ್ದಾರೆ?

ಭಜರಂಗದಳದ ಜಿಲ್ಲಾ ಸಂಯೋಜಕ (ಜಿಲ್ಲಾ ಸಂಯೋಜಕ) ಎಂದು ಹೇಳಿಕೊಳ್ಳುವ ಮನೋಜ್ ಯಾದವ್, ಜನವರಿ 21ರಂದು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, “ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದೇವೆ” ಎಂದು  ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿರಿ: ಹಿಂದೂಗಳು ಮತ್ತು ಮುಸ್ಲಿಮರು ಏಕೆ ’ಹಸು ಬಲಿ’ ಕೊಡುತ್ತಾರೆ?

“ಇಂದೋರ್‌ನ ಶ್ರೀನಗರ ಪ್ರದೇಶದಲ್ಲಿ ಐವರು ಮುಸ್ಲಿಂ ಯುವಕರು ಮತ್ತು ಇಬ್ಬರು ಹಿಂದೂ ಯುವತಿಯರು ಒಟ್ಟಿಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದ ನಂತರ ನಾವು ಅಲ್ಲಿಗೆ ಹೋಗಿ ಅವರ ಕೊಠಡಿಗಳಲ್ಲಿ ಹುಡುಕಾಟ ನಡೆಸಿದ್ದೇವೆ. ಮದ್ಯದ ಬಾಟಲಿ ಸೇರಿದಂತೆ ಅಮಲು ಪದಾರ್ಥಗಳು ಪತ್ತೆಯಾಗಿವೆ. ನಾವು ಅವರನ್ನು ಎಂಐಜಿ ಕಾಲೋನಿ ಠಾಣೆಗೆ ಕರೆತಂದಿದ್ದು, ಮೇಲಧಿಕಾರಿಗಳಿಗೂ ದೂರು ನೀಡಿದ್ದೇವೆ” ಎಂದು ಮನೋಜ್ ಯಾದವ್ ಪ್ರತಿಕ್ರಿಯಿಸಿದ್ದಾನೆ.

ಹಲ್ಲೆ ಮಾಡಿದವರ ವಿರುದ್ಧ ವಿರುದ್ಧ ಕ್ರಮವೇನು?

ಸುಪ್ರೀಂ ಕೋರ್ಟ್‌ ವಕೀಲರಾದ ಎಹ್ತೇಶಾಮ್ ಹಶ್ಮಿಯವರು ಪೊಲೀಸರ ವರ್ತನೆಯನ್ನು ಖಂಡಿಸಿದ್ದು, “ಅತಿಕ್ರಮಣ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸುವ ಭಜರಂಗದಳದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಬೇರೆ ಧರ್ಮಕ್ಕೆ ಸೇರಿದ ತಮ್ಮ ಸ್ನೇಹಿತನ ಜನ್ಮದಿನವನ್ನು ಆಚರಿಸಿದ ಏಕೈಕ ತಪ್ಪಿಗೆ ಪೊಲೀಸರು ಐದು ಜನರನ್ನು ಜೈಲಿಗೆ ಹಾಕಿದ್ದಾರೆ. ಇದೊಂದು ಘೋರ ಕಾನೂನು ದುರ್ವರ್ತನೆಯಾಗಿದೆ” ಎಂದು ವಿಷಾದಿಸಿದ್ದಾರೆ.

ವರದಿ ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...