Homeಮುಖಪುಟಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

- Advertisement -
- Advertisement -

ಜನವರಿ 21, ಶನಿವಾರದಂದು 100ಕ್ಕೂ ಹೆಚ್ಚು ಬಜರಂಗದಳದ ದುಷ್ಕರ್ಮಿಗಳ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬರ್ತ್ ಡೇ ಪಾರ್ಟಿಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಕನಿಷ್ಠ ಐದು ಮುಸ್ಲಿಂ ಯುವಕರಿಗೆ ಥಳಿಸಲಾಗಿದೆ.

24 ವರ್ಷದ ಹಿಂದೂ ಯುವತಿಯು ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಆ ಯುವತಿಯ ಫ್ಲ್ಯಾಟ್‌ಗೆ ನುಗ್ಗಿ ಆಕೆಯ ಮುಸ್ಲಿಂ ಸ್ನೇಹಿತರಿಗೆ ಹೊಡೆಯಲಾಗಿದೆ. ಮುಸ್ಲಿಂ ಯುವಕರ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ದುಷ್ಕರ್ಮಿಗಳು, ನಂತರ ಇಂದೋರ್‌ನ ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತರನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋಗಳು ಜನವರಿ 22ರ ಭಾನುವಾರದಂದು ವೈರಲ್ ಆಗಿವೆ.

ವೀಡಿಯೋ ಒಂದರಲ್ಲಿ- ಬಹುಮಹಡಿ ಕಟ್ಟಡದ ಮೆಟ್ಟಿಲುಗಳ ಮೇಲೆ ದೊಡ್ಡ ಜನಸಮೂಹವೇ ಹತ್ತುತ್ತಿರುವುದನ್ನು ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ- ಖಾಸಗಿ ನಿವಾಸದೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರು ಏನು ಹೇಳುತ್ತಿದ್ದಾರೆ?

“ಕೆಲವು ಹುಡುಗರನ್ನು ಬಜರಂಗದಳದ ಸದಸ್ಯರು ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆತಂದರು, ನಂತರ ಅವರಲ್ಲಿ ಐವರನ್ನು ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ (ಅಂದರೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆ ಆರೋಪದಲ್ಲಿ) ಜೈಲಿಗೆ ಕಳುಹಿಸಲಾಗಿದೆ.

ಆದರೆ, ಖಾಸಗಿ ನಿವಾಸಕ್ಕೆ ನುಗ್ಗಿ ಯುವಕರನ್ನು ಥಳಿಸಿದ ಬಜರಂಗದಳದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಕುರಿತು ‘ದಿ ಕ್ವಿಂಟ್’ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಎಂಐಜಿ ಸ್ಟೇಷನ್ ಇನ್‌ಚಾರ್ಜ್ ಅಜಯ್ ವರ್ಮಾ, “ಜಗಳ ಮತ್ತು ಹೆಚ್ಚಿನ ವಿವಾದವನ್ನು ತಪ್ಪಿಸಲು, ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅವರೆಲ್ಲರನ್ನೂ ನಾಳೆಯೊಳಗೆ (ಅಂದರೆ ಭಾನುವಾರದೊಳಗೆ) ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು. ಆದರೆ ಜ.23ರಂದು ಈ ವರದಿಯನ್ನು ಪ್ರಕಟಿಸುವ ಸಮಯದವರೆಗೂ ಯುವಕರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ‘ದಿ ಕ್ವಿಂಟ್‌’ ತಿಳಿಸಿದೆ.

ಇದಕ್ಕೂ ಮೊದಲು, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೀಮಾ ಶರ್ಮಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, “ಯುವಕ ಮತ್ತು ಯುವತಿಯರ ಗುಂಪು ಸ್ನೇಹಿತರ ಹುಟ್ಟುಹಬ್ಬವನ್ನು ಆಚರಿಸುತ್ತಿತ್ತು. ಈ ವಿಷಯದಲ್ಲಿ ಭಾಗಿಯಾಗಿರುವ ಹುಡುಗಿಯರು ಲವ್ ಜಿಹಾದ್‌ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಏನು ಹೇಳುತ್ತಿದ್ದಾರೆ?

ಭಜರಂಗದಳದ ಜಿಲ್ಲಾ ಸಂಯೋಜಕ (ಜಿಲ್ಲಾ ಸಂಯೋಜಕ) ಎಂದು ಹೇಳಿಕೊಳ್ಳುವ ಮನೋಜ್ ಯಾದವ್, ಜನವರಿ 21ರಂದು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, “ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದೇವೆ” ಎಂದು  ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿರಿ: ಹಿಂದೂಗಳು ಮತ್ತು ಮುಸ್ಲಿಮರು ಏಕೆ ’ಹಸು ಬಲಿ’ ಕೊಡುತ್ತಾರೆ?

“ಇಂದೋರ್‌ನ ಶ್ರೀನಗರ ಪ್ರದೇಶದಲ್ಲಿ ಐವರು ಮುಸ್ಲಿಂ ಯುವಕರು ಮತ್ತು ಇಬ್ಬರು ಹಿಂದೂ ಯುವತಿಯರು ಒಟ್ಟಿಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದ ನಂತರ ನಾವು ಅಲ್ಲಿಗೆ ಹೋಗಿ ಅವರ ಕೊಠಡಿಗಳಲ್ಲಿ ಹುಡುಕಾಟ ನಡೆಸಿದ್ದೇವೆ. ಮದ್ಯದ ಬಾಟಲಿ ಸೇರಿದಂತೆ ಅಮಲು ಪದಾರ್ಥಗಳು ಪತ್ತೆಯಾಗಿವೆ. ನಾವು ಅವರನ್ನು ಎಂಐಜಿ ಕಾಲೋನಿ ಠಾಣೆಗೆ ಕರೆತಂದಿದ್ದು, ಮೇಲಧಿಕಾರಿಗಳಿಗೂ ದೂರು ನೀಡಿದ್ದೇವೆ” ಎಂದು ಮನೋಜ್ ಯಾದವ್ ಪ್ರತಿಕ್ರಿಯಿಸಿದ್ದಾನೆ.

ಹಲ್ಲೆ ಮಾಡಿದವರ ವಿರುದ್ಧ ವಿರುದ್ಧ ಕ್ರಮವೇನು?

ಸುಪ್ರೀಂ ಕೋರ್ಟ್‌ ವಕೀಲರಾದ ಎಹ್ತೇಶಾಮ್ ಹಶ್ಮಿಯವರು ಪೊಲೀಸರ ವರ್ತನೆಯನ್ನು ಖಂಡಿಸಿದ್ದು, “ಅತಿಕ್ರಮಣ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸುವ ಭಜರಂಗದಳದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಬೇರೆ ಧರ್ಮಕ್ಕೆ ಸೇರಿದ ತಮ್ಮ ಸ್ನೇಹಿತನ ಜನ್ಮದಿನವನ್ನು ಆಚರಿಸಿದ ಏಕೈಕ ತಪ್ಪಿಗೆ ಪೊಲೀಸರು ಐದು ಜನರನ್ನು ಜೈಲಿಗೆ ಹಾಕಿದ್ದಾರೆ. ಇದೊಂದು ಘೋರ ಕಾನೂನು ದುರ್ವರ್ತನೆಯಾಗಿದೆ” ಎಂದು ವಿಷಾದಿಸಿದ್ದಾರೆ.

ವರದಿ ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...