Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...