Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....