Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...