Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...