Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...