Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...